<p><strong>ನವದೆಹಲಿ: </strong>ಅಮೆರಿಕವು ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪಾದಕ ಒಸಾಮ ಬಿನ್ ಲಾಡೆನ್ನನ್ನು ಕೊಂದಿದ್ದಕ್ಕೂ ಹಾಗೂ ಪಹಲ್ಗಾಮ್ ಉಗ್ರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಮಾಡಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೂ ಬಹಳಷ್ಟು ಸಾಮ್ಯತೆಯಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. </p><p>ಅಮೆರಿಕವು, 9/11 ದಾಳಿಯ ನಂತರ ಆ ಘಟನೆಯ ಮಾಸ್ಟರ್ ಮೈಂಡ್ನನ್ನು ಹುಡುಕಿಕೊಂಡು ಹೋಗಿ ಕೊಂದ ರೀತಿಯಲ್ಲೇ, ಪಹಲ್ಗಾಮ್ ಘಟನೆಯ ನಂತರ ಭಾರತವು ಪಾಕಿಸ್ತಾನದೊಳಕ್ಕೆ ನುಗ್ಗಿ ಉಗ್ರರ ಅಡಗು ತಾಣಗಳನ್ನು ನಾಶಮಾಡಿದೆ ಎಂದರು. </p><p>ಜಗತ್ತಿಗೆ ತಿಳಿಯುವಂತೆ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಶಾಂತಿ ಒಪ್ಪಂದದ ಜೊತೆಗೆ, ಭಯೋತ್ಪಾದನೆಯ ವಿರುದ್ಧ ಕೂಡ ದಾಳಿ ಮಾಡಿರುವುದು ಜಾಗತಿಕ ಮಟ್ಟದಲ್ಲಿ ಹೊಸ ಮಾನದಂಡವನ್ನು ಹುಟ್ಟುಹಾಕಿದೆ ಎಂದು ಹೇಳಿದರು. </p><p>ಇದೇ ಮೊದಲ ಬಾರಿಗೆ ಪಾಕಿಸ್ತಾನದೊಳಗಿರುವ ಜೈಷ್-ಎ-ಮೊಹಮ್ಮದ್ ಹಾಗು ಲಷ್ಕರ್-ಎ-ತಯಬಾ(ಎಲ್ಇಟಿ) ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಘಟನೆಯಲ್ಲಿ ಉಗ್ರಗಾಮಿಗಳು ಮಾತ್ರ ಮೃತರಾಗಿದ್ದಾರೆ ಎಂದರು. </p><p>ಪಹಲ್ಗಾಮ್ ಭಯೋತ್ಪಾದಕ ಕೃತ್ಯವು, ಮುಂಬೈ ಮೇಲಿನ ಉಗ್ರ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದಕ ಕೃತ್ಯವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಮೆರಿಕವು ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪಾದಕ ಒಸಾಮ ಬಿನ್ ಲಾಡೆನ್ನನ್ನು ಕೊಂದಿದ್ದಕ್ಕೂ ಹಾಗೂ ಪಹಲ್ಗಾಮ್ ಉಗ್ರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಮಾಡಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೂ ಬಹಳಷ್ಟು ಸಾಮ್ಯತೆಯಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. </p><p>ಅಮೆರಿಕವು, 9/11 ದಾಳಿಯ ನಂತರ ಆ ಘಟನೆಯ ಮಾಸ್ಟರ್ ಮೈಂಡ್ನನ್ನು ಹುಡುಕಿಕೊಂಡು ಹೋಗಿ ಕೊಂದ ರೀತಿಯಲ್ಲೇ, ಪಹಲ್ಗಾಮ್ ಘಟನೆಯ ನಂತರ ಭಾರತವು ಪಾಕಿಸ್ತಾನದೊಳಕ್ಕೆ ನುಗ್ಗಿ ಉಗ್ರರ ಅಡಗು ತಾಣಗಳನ್ನು ನಾಶಮಾಡಿದೆ ಎಂದರು. </p><p>ಜಗತ್ತಿಗೆ ತಿಳಿಯುವಂತೆ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಶಾಂತಿ ಒಪ್ಪಂದದ ಜೊತೆಗೆ, ಭಯೋತ್ಪಾದನೆಯ ವಿರುದ್ಧ ಕೂಡ ದಾಳಿ ಮಾಡಿರುವುದು ಜಾಗತಿಕ ಮಟ್ಟದಲ್ಲಿ ಹೊಸ ಮಾನದಂಡವನ್ನು ಹುಟ್ಟುಹಾಕಿದೆ ಎಂದು ಹೇಳಿದರು. </p><p>ಇದೇ ಮೊದಲ ಬಾರಿಗೆ ಪಾಕಿಸ್ತಾನದೊಳಗಿರುವ ಜೈಷ್-ಎ-ಮೊಹಮ್ಮದ್ ಹಾಗು ಲಷ್ಕರ್-ಎ-ತಯಬಾ(ಎಲ್ಇಟಿ) ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಘಟನೆಯಲ್ಲಿ ಉಗ್ರಗಾಮಿಗಳು ಮಾತ್ರ ಮೃತರಾಗಿದ್ದಾರೆ ಎಂದರು. </p><p>ಪಹಲ್ಗಾಮ್ ಭಯೋತ್ಪಾದಕ ಕೃತ್ಯವು, ಮುಂಬೈ ಮೇಲಿನ ಉಗ್ರ ದಾಳಿಯ ನಂತರ ಭಾರತದಲ್ಲಿ ನಾಗರಿಕರ ಮೇಲೆ ನಡೆದ ಅತಿದೊಡ್ಡ ಭಯೋತ್ಪಾದಕ ಕೃತ್ಯವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>