<p><strong>ಲಖನೌ:</strong> ವಕ್ಫ್ ಮಂಡಳಿಯ ಮಾದರಿಯಲ್ಲೇ ‘ಸನಾತನ ಮಂಡಳಿ’ ರಚಿಸಬೇಕು ಎಂದು ಮಹಾ ಕುಂಭಮೇಳದಲ್ಲಿ ನಡೆಯುತ್ತಿರುವ ಧರ್ಮ ಸಂಸತ್ತಿನಲ್ಲಿ ಮಂಡನೆಯಾಗಿರುವ ಪ್ರಸ್ತಾವಕ್ಕೆ ವಿಘ್ನ ಎದುರಾಗಿದೆ. ಸೋಮವಾರ ಆರಂಭವಾದ ಧರ್ಮ ಸಂಸತ್ತನ್ನು 13 ಅಖಾಡಗಳ ಪೈಕಿ ಹೆಚ್ಚಿನವು ಬಹಿಷ್ಕರಿಸಿವೆ.</p>.<p>ಧರ್ಮ ಬೋಧಕ ದೇವಕಿ ನಂದನ್ ಠಾಕೂರ್ ಅವರು ಧರ್ಮ ಸಂಸತ್ ಆಯೋಜಿಸಿದ್ದಾರೆ. ಹಲವಾರು ಸ್ವಾಮೀಜಿಗಳು ಹಾಗೂ ಭಕ್ತರು ಧರ್ಮ ಸಂಸತ್ತಿನಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲಿ ಪಾಲ್ಗೊಳ್ಳಲು ಹಾಗೂ ಸನಾತನ ಮಂಡಳಿಯನ್ನು ರಚಿಸುವ ಪ್ರಸ್ತಾವಕ್ಕೆ ಅಖಾಡಗಳು ಒಪ್ಪಿದ್ದವು.</p>.<p>ಆದರೆ, ಮಹಾಕುಂಭದಲ್ಲಿ ಜನದಟ್ಟಣೆ ಹೆಚ್ಚಿರುವ ಕಾರಣಕ್ಕೆ ಅಖಾಡಗಳು ಧರ್ಮ ಸಂಸತ್ತಿನಿಂದ ದೂರ ಇರಲಿವೆ ಎಂದು ಅಖಿಲ ಭಾರತ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ ರವೀಂದ್ರ ಪುರಿ ಅವರು ಹೇಳಿದ್ದಾರೆ.</p>.<p>ಸನಾತನ ಮಂಡಳಿಯ ನೇತೃತ್ವ ವಹಿಸಿಕೊಳ್ಳುವ ಬಯಕೆ ಠಾಕೂರ್ ಅವರಿಗೆ ಇದೆ, ಅವರು ಅಖಾಡಗಳನ್ನು ಮಂಡಳಿಯಿಂದ ಹೊರಗಿರಿಸಲು ಬಯಸಿದ್ದಾರೆ ಎಂಬ ಆತಂಕದಿಂದಾಗಿ ಅಖಾಡ ಪರಿಷತ್ತು ಧರ್ಮ ಸಂಸತ್ತನ್ನು ಬಹಿಷ್ಕರಿಸಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ವಕ್ಫ್ ಮಂಡಳಿಯ ಮಾದರಿಯಲ್ಲೇ ‘ಸನಾತನ ಮಂಡಳಿ’ ರಚಿಸಬೇಕು ಎಂದು ಮಹಾ ಕುಂಭಮೇಳದಲ್ಲಿ ನಡೆಯುತ್ತಿರುವ ಧರ್ಮ ಸಂಸತ್ತಿನಲ್ಲಿ ಮಂಡನೆಯಾಗಿರುವ ಪ್ರಸ್ತಾವಕ್ಕೆ ವಿಘ್ನ ಎದುರಾಗಿದೆ. ಸೋಮವಾರ ಆರಂಭವಾದ ಧರ್ಮ ಸಂಸತ್ತನ್ನು 13 ಅಖಾಡಗಳ ಪೈಕಿ ಹೆಚ್ಚಿನವು ಬಹಿಷ್ಕರಿಸಿವೆ.</p>.<p>ಧರ್ಮ ಬೋಧಕ ದೇವಕಿ ನಂದನ್ ಠಾಕೂರ್ ಅವರು ಧರ್ಮ ಸಂಸತ್ ಆಯೋಜಿಸಿದ್ದಾರೆ. ಹಲವಾರು ಸ್ವಾಮೀಜಿಗಳು ಹಾಗೂ ಭಕ್ತರು ಧರ್ಮ ಸಂಸತ್ತಿನಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲಿ ಪಾಲ್ಗೊಳ್ಳಲು ಹಾಗೂ ಸನಾತನ ಮಂಡಳಿಯನ್ನು ರಚಿಸುವ ಪ್ರಸ್ತಾವಕ್ಕೆ ಅಖಾಡಗಳು ಒಪ್ಪಿದ್ದವು.</p>.<p>ಆದರೆ, ಮಹಾಕುಂಭದಲ್ಲಿ ಜನದಟ್ಟಣೆ ಹೆಚ್ಚಿರುವ ಕಾರಣಕ್ಕೆ ಅಖಾಡಗಳು ಧರ್ಮ ಸಂಸತ್ತಿನಿಂದ ದೂರ ಇರಲಿವೆ ಎಂದು ಅಖಿಲ ಭಾರತ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ ರವೀಂದ್ರ ಪುರಿ ಅವರು ಹೇಳಿದ್ದಾರೆ.</p>.<p>ಸನಾತನ ಮಂಡಳಿಯ ನೇತೃತ್ವ ವಹಿಸಿಕೊಳ್ಳುವ ಬಯಕೆ ಠಾಕೂರ್ ಅವರಿಗೆ ಇದೆ, ಅವರು ಅಖಾಡಗಳನ್ನು ಮಂಡಳಿಯಿಂದ ಹೊರಗಿರಿಸಲು ಬಯಸಿದ್ದಾರೆ ಎಂಬ ಆತಂಕದಿಂದಾಗಿ ಅಖಾಡ ಪರಿಷತ್ತು ಧರ್ಮ ಸಂಸತ್ತನ್ನು ಬಹಿಷ್ಕರಿಸಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>