<p><strong>ಮುಂಬೈ</strong>: ಬಾಲಿವುಡ್ನ ಪ್ರಸಿದ್ಧ ನಟ ಧರ್ಮೇಂದ್ರ (89) ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಂಗಳವಾರ ಪ್ರತಿಕ್ರಿಯಿಸಿರುವ ಅವರ ಕುಟುಂಬದವರು, ‘ಮೇರು ನಟನ ಆರೋಗ್ಯದ ಕುರಿತು ಸುಳ್ಳು ಸುದ್ದಿ ಪ್ರಕಟಿಸುವುದನ್ನು ಮಾಧ್ಯಮಗಳು ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಟ ದಾಖಲಾಗಿದ್ದು, ತೀವ್ರ ನಿಗಾದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>‘ಧರ್ಮೇಂದ್ರ ಅವರು ಮೃತಪಟ್ಟಿದ್ದಾರೆ’ ಎಂಬ ಸುದ್ದಿ ಮಂಗಳವಾರ ಬೆಳಿಗ್ಗೆ ಹರಿದಾಡಿತ್ತು. ಅದನ್ನು ನಿರಾಕರಿಸಿ ಧರ್ಮೇಂದ್ರ ಅವರ ಪುತ್ರಿ ಇಶಾ ಡಿಯೋಲ್ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>‘ಮಾಧ್ಯಮವು ಅತಿಯಾಗಿ ಪ್ರಚಾರ ಮಾಡುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದ ಖಾಸಗೀತನವನ್ನು ಗೌರವಿಸಿ ಹಾಗೂ ಅಪ್ಪನ ತ್ವರಿತ ಚೇತರಿಕೆಗೆ ಪ್ರಾರ್ಥಿಸಿ’ ಎಂದು ಇಶಾ ಬರೆದಿದ್ದಾರೆ. </p>.<p>ಧರ್ಮೇಂದ್ರ ಅವರ ಪತ್ನಿ, ನಟಿ, ರಾಜಕಾರಣಿ ಹೇಮಾ ಮಾಲಿನಿ ಅವರು ‘ಎಕ್ಸ್’ನಲ್ಲಿ ಮಾಧ್ಯಮದ ವರದಿಯನ್ನು ಟೀಕಿಸಿದ್ದು, ಬೇಜವಾಬ್ದಾರಿಯ ನಡೆ ಎಂದು ದೂರಿದ್ದಾರೆ.</p>.<p>‘ಹಿರಿಯ ನಟ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾವೆಲ್ಲರೂ ಪ್ರಾರ್ಥಿಸೋಣ’ ಎಂದು ಧರ್ಮೇಂದ್ರ ಅವರ ಮಗ ಸನ್ನಿ ಡಿಯೋಲ್ ಪ್ರತಿಕ್ರಿಯಿಸಿದ್ದಾರೆ. </p>.<p>ರಕ್ಷಣಾ ಸಚಿವ ರಾಜನಾಥ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೀತರಚನೆಕಾರ ಜಾವೇದ್ ಅಖ್ತರ್ ಸೇರಿದಂತೆ ಹಲವರು ‘ಎಕ್ಸ್’ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಮಾಡಿದ್ದರು. ಇಶಾ ಡಿಯೋಲ್ ಅವರ ಹೇಳಿಕೆ ಬಂದ ನಂತರ, ಅವರು ತಮ್ಮ ಪೋಸ್ಟ್ಗಳನ್ನು ಅಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಬಾಲಿವುಡ್ನ ಪ್ರಸಿದ್ಧ ನಟ ಧರ್ಮೇಂದ್ರ (89) ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಂಗಳವಾರ ಪ್ರತಿಕ್ರಿಯಿಸಿರುವ ಅವರ ಕುಟುಂಬದವರು, ‘ಮೇರು ನಟನ ಆರೋಗ್ಯದ ಕುರಿತು ಸುಳ್ಳು ಸುದ್ದಿ ಪ್ರಕಟಿಸುವುದನ್ನು ಮಾಧ್ಯಮಗಳು ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಟ ದಾಖಲಾಗಿದ್ದು, ತೀವ್ರ ನಿಗಾದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>‘ಧರ್ಮೇಂದ್ರ ಅವರು ಮೃತಪಟ್ಟಿದ್ದಾರೆ’ ಎಂಬ ಸುದ್ದಿ ಮಂಗಳವಾರ ಬೆಳಿಗ್ಗೆ ಹರಿದಾಡಿತ್ತು. ಅದನ್ನು ನಿರಾಕರಿಸಿ ಧರ್ಮೇಂದ್ರ ಅವರ ಪುತ್ರಿ ಇಶಾ ಡಿಯೋಲ್ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>‘ಮಾಧ್ಯಮವು ಅತಿಯಾಗಿ ಪ್ರಚಾರ ಮಾಡುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ. ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬದ ಖಾಸಗೀತನವನ್ನು ಗೌರವಿಸಿ ಹಾಗೂ ಅಪ್ಪನ ತ್ವರಿತ ಚೇತರಿಕೆಗೆ ಪ್ರಾರ್ಥಿಸಿ’ ಎಂದು ಇಶಾ ಬರೆದಿದ್ದಾರೆ. </p>.<p>ಧರ್ಮೇಂದ್ರ ಅವರ ಪತ್ನಿ, ನಟಿ, ರಾಜಕಾರಣಿ ಹೇಮಾ ಮಾಲಿನಿ ಅವರು ‘ಎಕ್ಸ್’ನಲ್ಲಿ ಮಾಧ್ಯಮದ ವರದಿಯನ್ನು ಟೀಕಿಸಿದ್ದು, ಬೇಜವಾಬ್ದಾರಿಯ ನಡೆ ಎಂದು ದೂರಿದ್ದಾರೆ.</p>.<p>‘ಹಿರಿಯ ನಟ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾವೆಲ್ಲರೂ ಪ್ರಾರ್ಥಿಸೋಣ’ ಎಂದು ಧರ್ಮೇಂದ್ರ ಅವರ ಮಗ ಸನ್ನಿ ಡಿಯೋಲ್ ಪ್ರತಿಕ್ರಿಯಿಸಿದ್ದಾರೆ. </p>.<p>ರಕ್ಷಣಾ ಸಚಿವ ರಾಜನಾಥ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೀತರಚನೆಕಾರ ಜಾವೇದ್ ಅಖ್ತರ್ ಸೇರಿದಂತೆ ಹಲವರು ‘ಎಕ್ಸ್’ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಮಾಡಿದ್ದರು. ಇಶಾ ಡಿಯೋಲ್ ಅವರ ಹೇಳಿಕೆ ಬಂದ ನಂತರ, ಅವರು ತಮ್ಮ ಪೋಸ್ಟ್ಗಳನ್ನು ಅಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>