<p><strong>ಜೆಮ್ಶೆಡ್ಪುರ:</strong> ಎನ್ಸಿಇಆರ್ಟಿ 8ನೇ ತರಗತಿ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ ಅಧ್ಯಾಯದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p><p>‘ಈ ವಿವಾದಾತ್ಮಕ ಭಾಗ ಸಿದ್ಧಪಡಿಸಿದವರ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸಿ, ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ,‘ನ್ಯಾಯಾಂಗದ ಬಗ್ಗೆ ಸರ್ಕಾರಕ್ಕೆ ಅಪಾರ ಗೌರವ ಇದೆ. ಅದಕ್ಕೆ ಅಗೌರವ ತೋರುವ ಯಾವುದೇ ಉದ್ದೇಶವನ್ನೂ ಹೊಂದಿಲ್ಲ’ ಎಂದು ಹೇಳಿದ್ದಾರೆ.</p><p>‘ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ವಿಚಾರ ಗಮನಕ್ಕೆ ಬಂದ ತಕ್ಷಣವೇ ಪಠ್ಯಪುಸ್ತಕಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.</p>.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತ ಅಧ್ಯಾಯ: ಕ್ಷಮೆ ಕೋರಿದ ಎನ್ಸಿಇಆರ್ಟಿ.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಕೋರ್ಟ್ ಹೇಳಿದ್ದೇನು?
<p><strong>ಜೆಮ್ಶೆಡ್ಪುರ:</strong> ಎನ್ಸಿಇಆರ್ಟಿ 8ನೇ ತರಗತಿ ಪಠ್ಯಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ ಅಧ್ಯಾಯದ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p><p>‘ಈ ವಿವಾದಾತ್ಮಕ ಭಾಗ ಸಿದ್ಧಪಡಿಸಿದವರ ವಿರುದ್ಧ ಹೊಣೆಗಾರಿಕೆ ನಿಗದಿಪಡಿಸಿ, ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ,‘ನ್ಯಾಯಾಂಗದ ಬಗ್ಗೆ ಸರ್ಕಾರಕ್ಕೆ ಅಪಾರ ಗೌರವ ಇದೆ. ಅದಕ್ಕೆ ಅಗೌರವ ತೋರುವ ಯಾವುದೇ ಉದ್ದೇಶವನ್ನೂ ಹೊಂದಿಲ್ಲ’ ಎಂದು ಹೇಳಿದ್ದಾರೆ.</p><p>‘ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ವಿಚಾರ ಗಮನಕ್ಕೆ ಬಂದ ತಕ್ಷಣವೇ ಪಠ್ಯಪುಸ್ತಕಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.</p>.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತ ಅಧ್ಯಾಯ: ಕ್ಷಮೆ ಕೋರಿದ ಎನ್ಸಿಇಆರ್ಟಿ.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಸುಪ್ರೀಂ ಕೋರ್ಟ್ ಹೇಳಿದ್ದೇನು?