<p>ಧಾರವಾಡ: ‘ರೈತರ ಸಾಲ ಮನ್ನಾ ಮಾಡಬೇಕು, ಭಾರತ ಮತ್ತು ಅಮೆರಿಕದ ಕೃಷಿ ಒಪ್ಪಂದ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನವದೆಹಲಿಯ ಜಂತರ್ ಮಂತರ್ನಲ್ಲಿ ಮಾರ್ಚ್ 30ರಂದು ಚಳವಳಿ (ದೆಹಲಿ ಚಲೋ) ನಡೆಯಲಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ನಾಗಪ್ಪ ಉಂಡಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧಾರವಾಡದಿಂದ ಮಾರ್ಚ್ 28ರಂದು ರೈಲಿನಲ್ಲಿ ನವದೆಹಲಿಗೆ ಹೊರಡುತ್ತಿದ್ದು, ವಿವಿಧ ಜಿಲ್ಲೆಗಳಿಂದ ರೈತರು ಪಾಲ್ಗೊಳ್ಳುವರು. 30ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭಿಸುತ್ತೇವೆ’ ಎಂದು ತಿಳಿಸಿದರು.</p>.<p>ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ರವಿರಾಜ ಕಂಬಳಿ ಮಾತನಾಡಿ, ‘ಮಹಾರಾಷ್ಟ್ರ, ಹರಿಯಾಣ ಹಾಗೂ ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಆದ್ದರಿಂದ ಕೇಂದ್ರ ಸರ್ಕಾರವು ರೈತರ ಸಾಲ ಮನ್ನಾಕ್ಕೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಳಸಾ– ಬಂಡೂರಿ ಮಹಾದಾಯಿ ಯೋಜನೆ ಶೀಘ್ರ ಅನುಷ್ಠಾನಗೊಳಿಸಬೇಕು. ಮೈಕ್ರೊ ಫೈನಾನ್ಸ್ ಸಹಿತ ವಿವಿಧ ಸಂಘಗಳಲ್ಲಿ ಮಹಿಳೆಯರು ಮಾಡಿರುವ ಸಾಲಮನ್ನಾ ಮಾಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ರೈತರಿಗೆ ಮಾಸಿಕ ₹10 ಸಾವಿರ ಪಿಂಚಣಿ ನೀಡಬೇಕು. ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ರವಿ ವಡ್ಡರ, ನಿಂಗಪ್ಪ ಧಾರವಾಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-22-2139346177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ರೈತರ ಸಾಲ ಮನ್ನಾ ಮಾಡಬೇಕು, ಭಾರತ ಮತ್ತು ಅಮೆರಿಕದ ಕೃಷಿ ಒಪ್ಪಂದ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನವದೆಹಲಿಯ ಜಂತರ್ ಮಂತರ್ನಲ್ಲಿ ಮಾರ್ಚ್ 30ರಂದು ಚಳವಳಿ (ದೆಹಲಿ ಚಲೋ) ನಡೆಯಲಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ನಾಗಪ್ಪ ಉಂಡಿ ತಿಳಿಸಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಧಾರವಾಡದಿಂದ ಮಾರ್ಚ್ 28ರಂದು ರೈಲಿನಲ್ಲಿ ನವದೆಹಲಿಗೆ ಹೊರಡುತ್ತಿದ್ದು, ವಿವಿಧ ಜಿಲ್ಲೆಗಳಿಂದ ರೈತರು ಪಾಲ್ಗೊಳ್ಳುವರು. 30ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭಿಸುತ್ತೇವೆ’ ಎಂದು ತಿಳಿಸಿದರು.</p>.<p>ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ರವಿರಾಜ ಕಂಬಳಿ ಮಾತನಾಡಿ, ‘ಮಹಾರಾಷ್ಟ್ರ, ಹರಿಯಾಣ ಹಾಗೂ ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದೆ. ಆದ್ದರಿಂದ ಕೇಂದ್ರ ಸರ್ಕಾರವು ರೈತರ ಸಾಲ ಮನ್ನಾಕ್ಕೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಳಸಾ– ಬಂಡೂರಿ ಮಹಾದಾಯಿ ಯೋಜನೆ ಶೀಘ್ರ ಅನುಷ್ಠಾನಗೊಳಿಸಬೇಕು. ಮೈಕ್ರೊ ಫೈನಾನ್ಸ್ ಸಹಿತ ವಿವಿಧ ಸಂಘಗಳಲ್ಲಿ ಮಹಿಳೆಯರು ಮಾಡಿರುವ ಸಾಲಮನ್ನಾ ಮಾಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ರೈತರಿಗೆ ಮಾಸಿಕ ₹10 ಸಾವಿರ ಪಿಂಚಣಿ ನೀಡಬೇಕು. ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ರವಿ ವಡ್ಡರ, ನಿಂಗಪ್ಪ ಧಾರವಾಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-22-2139346177</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>