ಹಣ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ ವಧವಾನ್ ಸಹೋದರರು ಫೆಬ್ರುವರಿ 21ರಂದು ಜಾಮೀನು ಪಡೆದಿದ್ದಾರೆ. ಆದರೆ, ಕೋವಿಡ್–19 ಹಿನ್ನೆಲೆಯಲ್ಲಿ ಲಾಕ್ಡೌನ್ ಹೇರಲಾಗಿದ್ದರೂ, ಮುಂಬೈನಿಂದ ಅವರು ಮಹಾಬಳೇಶ್ವರ ಗಿರಿಧಾಮಕ್ಕೆ ಕುಟುಂಬ ಸಮೇತ ತೆರಳಿದ್ದರು. ಹೀಗಾಗಿ ವಧವಾನ್ ಸಹೋದರರಿಂದ ಲಾಕ್ಡೌನ್ ನಿಯಮ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವಲ್ಲದೇ, ರಾಜಕೀಯ ಪಕ್ಷಗಳ ಮಧ್ಯೆ ಆರೋಪ–ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು.