<p><strong>ನವದೆಹಲಿ</strong>: ವಜ್ರ ಕತ್ತರಿಸುವುದಕ್ಕೆ ಅಗಾಧ ಕುಶಲತೆ, ಭಾರಿ ನಿಖರತೆಯ ಅಗತ್ಯವಿದೆ. ಈ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿ ಒಂದು ಕಣ್ಣು ಕಳೆದುಕೊಂಡಿದ್ದರೂ, ಆತನದು ಶೇ 100ರಷ್ಟು ಅಂಗವೈಕಲ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ವ್ಯಕ್ತಿಗೆ ನೀಡಬೇಕಾದ ಪರಿಹಾರ ಮೊತ್ತವನ್ನು ಹೆಚ್ಚಿಸಿ ಆದೇಶಿಸಿದೆ.</p>.<p>ಕೇರಳದ ಜಯನಂದನ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಮಾತು ಹೇಳಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ ಶೇ8ರ ಬಡ್ಡಿಯೊಂದಿಗೆ ಒಟ್ಟು ₹15,98,000 ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದೆ.</p>.<p>39 ವರ್ಷದ ಜಯನಂದನ್ ಅವರು ಶೇ 65ರಷ್ಟು ಅಂಗವೈಕಲ್ಯ ಹೊಂದಿರುವುದಾಗಿ ಕೇರಳ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ, ಜಯನಂದನ್ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಸಂಜಯ ಕರೋಲ್ ಹಾಗೂ ಮನಮೋಹನ ಅವರು ಇದ್ದ ನ್ಯಾಯಪೀಠ ಮೇಲ್ಮವನಿ ವಿಚಾರಣೆ ನಡೆಸಿತು.</p>.<p>ಜಯನಂದನ್ ಅವರು 2005ರ ಫೆಬ್ರುವರಿ 15ರಂದು ಕುನ್ನಂಕುಳಂ ವಡಂಕೇರಿಗೆ ಬೈಕ್ ಮೇಲೆ ತೆರಳುತ್ತಿದ್ದ ವೇಳೆ, ಆಟೊವೊಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಅವರು ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು.</p>.<p>ತ್ರಿಶ್ಶೂರಿನ ಮೋಟಾರ್ ಅಪಘಾತ ಕ್ಲೇಮುಗಳ ನ್ಯಾಯಮಂಡಳಿಯು ಜಯನಂದನ್ ಅವರ ಅಂಗವೈಕಲ್ಯ ಶೇ 49ರಷ್ಟು ಎಂದು ತೀರ್ಮಾನಿಸಿ, ಅವರಿಗೆ ಶೇ8ರ ಬಡ್ಡಿಯೊಂದಿಗೆ ₹8.70 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು.</p>.<p>ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಪರಿಹಾರ ಮೊತ್ತವನ್ನು ₹10,57,500ಕ್ಕೆ ಹೆಚ್ಚಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಜ್ರ ಕತ್ತರಿಸುವುದಕ್ಕೆ ಅಗಾಧ ಕುಶಲತೆ, ಭಾರಿ ನಿಖರತೆಯ ಅಗತ್ಯವಿದೆ. ಈ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿ ಒಂದು ಕಣ್ಣು ಕಳೆದುಕೊಂಡಿದ್ದರೂ, ಆತನದು ಶೇ 100ರಷ್ಟು ಅಂಗವೈಕಲ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ವ್ಯಕ್ತಿಗೆ ನೀಡಬೇಕಾದ ಪರಿಹಾರ ಮೊತ್ತವನ್ನು ಹೆಚ್ಚಿಸಿ ಆದೇಶಿಸಿದೆ.</p>.<p>ಕೇರಳದ ಜಯನಂದನ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ಮಾತು ಹೇಳಿರುವ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ ಶೇ8ರ ಬಡ್ಡಿಯೊಂದಿಗೆ ಒಟ್ಟು ₹15,98,000 ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದೆ.</p>.<p>39 ವರ್ಷದ ಜಯನಂದನ್ ಅವರು ಶೇ 65ರಷ್ಟು ಅಂಗವೈಕಲ್ಯ ಹೊಂದಿರುವುದಾಗಿ ಕೇರಳ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ, ಜಯನಂದನ್ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಸಂಜಯ ಕರೋಲ್ ಹಾಗೂ ಮನಮೋಹನ ಅವರು ಇದ್ದ ನ್ಯಾಯಪೀಠ ಮೇಲ್ಮವನಿ ವಿಚಾರಣೆ ನಡೆಸಿತು.</p>.<p>ಜಯನಂದನ್ ಅವರು 2005ರ ಫೆಬ್ರುವರಿ 15ರಂದು ಕುನ್ನಂಕುಳಂ ವಡಂಕೇರಿಗೆ ಬೈಕ್ ಮೇಲೆ ತೆರಳುತ್ತಿದ್ದ ವೇಳೆ, ಆಟೊವೊಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಅವರು ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು.</p>.<p>ತ್ರಿಶ್ಶೂರಿನ ಮೋಟಾರ್ ಅಪಘಾತ ಕ್ಲೇಮುಗಳ ನ್ಯಾಯಮಂಡಳಿಯು ಜಯನಂದನ್ ಅವರ ಅಂಗವೈಕಲ್ಯ ಶೇ 49ರಷ್ಟು ಎಂದು ತೀರ್ಮಾನಿಸಿ, ಅವರಿಗೆ ಶೇ8ರ ಬಡ್ಡಿಯೊಂದಿಗೆ ₹8.70 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು.</p>.<p>ನ್ಯಾಯಮಂಡಳಿ ಆದೇಶ ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಪರಿಹಾರ ಮೊತ್ತವನ್ನು ₹10,57,500ಕ್ಕೆ ಹೆಚ್ಚಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>