ಉದ್ಯೋಗಕ್ಕಾಗಿ ಹಣ ಪಡೆದ ಹಗರಣಕ್ಕೆ ಸಂಬಂಧಿಸಿದಂತೆ ಸೆಂಥಿಲ್ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದರು.
ಇದಾದ ಕೆಲವು ದಿನಗಳ ಬಳಿಕ (ಗುರುವಾರ) ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯಪಾಲ ಆರ್.ಎನ್. ರವಿ ಅವರು ಸಂಪುಟದಿಂದ ವಜಾಗೊಳಿಸಿದ್ದಾರೆ.
ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯ ಮೇರೆಗೆ ವಜಾ ಆದೇಶವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಿದ್ದಾರೆ. ಇದನ್ನು ವಿರೋಧಿಸಿ ‘ಇದು ಸರ್ವಾಧಿಕಾರ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ಎಲ್ಲಿದೆ? ಎಂದು ಸುಳೆ ಪ್ರಶ್ನಿಸಿದ್ದಾರೆ.
ಇಂತಹ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದರೆ, ಇತರ ರಾಜ್ಯಗಳಲ್ಲಿಯೂ ಸಂಭವಿಸಬಹುದು ಎಂದು ಬಾರಾಮತಿ ಸಂಸದೆ ಹೇಳಿದರು. ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಸಮಸ್ಯೆಯ ಬಗ್ಗೆ ಕೇಳಿದಾಗ, ‘ಪ್ರತಿಕ್ರಿಯಿಸಲು ಇದು ತುಂಬಾ ಅಕಾಲಿಕವಾಗಿದೆ, ಕರಡು ಬರಲಿ ನಾವು ಪ್ರತಿಕ್ರಿಯಿಸುತ್ತೇವೆ’ ಎಂದು ಸುಳೆ ಹೇಳಿದರು.