<p><strong>ನವದೆಹಲಿ:</strong> ‘‘ಬಿಆರ್ಎಸ್ ಪಕ್ಷದ ಶಾಸಕರು ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದರೂ ಅವರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದಿಲ್ಲ’ ಎಂಬುದಾಗಿ ವಿಧಾನಸಭೆಯಲ್ಲಿ ಹೇಳಿದ್ದ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ವಿರುದ್ಧ ಸುಪ್ರೀಂ ಕೋರ್ಟ್ ಗುರುವಾರ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ.</p>.<p>‘ನ್ಯಾಯಾಂಗ ನಿಂದನೆಗಾಗಿ ಕ್ರಮ ಕೈಗೊಳ್ಳದೇ ಮತ್ತು ಆಗ ಅವರನ್ನು(ಮುಖ್ಯಮಂತ್ರಿ ರೇವಂತ ರೆಡ್ಡಿ) ಹಾಗೆಯೇ ಬಿಡುವ ಮೂಲಕವೇ ನಾವು ತಪ್ಪು ಮಾಡಿದೆವಾ?’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇದ್ದ ಪೀಠ ಹೇಳಿದೆ.</p>.<p>ಪಕ್ಷಾಂತರ ಮಾಡಿರುವ ಬಿಆರ್ಎಸ್ನ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ ಅರ್ಜಿಗಳನ್ನು ಇತ್ಯರ್ಥಪಡಿಸಲು ತೆಲಂಗಾಣ ವಿಧಾನಸಭಾಧ್ಯಕ್ಷ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕುರಿತ ಮೇಲ್ಮನವಿಗಳ ವಿಚಾರಣೆ ವೇಳೆ, ಈ ಮಾತು ಹೇಳಿರುವ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿದೆ.</p>.<p>ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿನ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರ ಬಗ್ಗೆ ರೇವಂತ ರೆಡ್ಡಿ ಹೇಳಿಕೆ ನೀಡಿದ್ದರು. ರೆಡ್ಡಿ ಅವರ ಹೇಳಿಕೆಗೆ ಆಗ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.</p>.<p>ಈ ಸಂಗತಿಯನ್ನು ಪ್ರಸ್ತಾಪಿಸಿದ ನ್ಯಾಯಪೀಠ, ‘ಈ ಹಿಂದಿನ ಅನುಭವದ ಆಧಾರದ ಮೇಲೆ ಮುಖ್ಯಮಂತ್ರಿ ಸ್ವಲ್ಪ ಮಟ್ಟಿನ ಸಂಯಮ ತೋರಬೇಕಿತ್ತು’ ಎಂದು ವಿಧಾನಸಭಾಧ್ಯಕ್ಷರ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರನ್ನು ಉದ್ಧೇಶಿಸಿ ಹೇಳಿತು.</p>.<p>ಬಿಆರ್ಎಸ್ ನಾಯಕ ಪಾಡಿ ಕೌಶಿಕ್ ರೆಡ್ಡಿ ಪರ ಹಾಜರಿದ್ದ ಹಿರಿಯ ವಕೀಲ ಸಿ.ಎ.ಸುಂದರಮ್,‘ಈ ವಿಚಾರವು ಸುಪ್ರೀಂ ಕೋರ್ಟ್ನಲ್ಲಿದೆ. ಈ ಬಗ್ಗೆ ಪ್ರಸ್ತಾಪಿಸುವುದು ಬೇಡ ಎಂದು ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದ ಬಿಆರ್ಎಸ್ ಶಾಸಕರೊಬ್ಬರು ಹೇಳಿದ್ದರು. ಆದರೂ, ಮುಖ್ಯಮಂತ್ರಿ ಈ ಹೇಳಿಕೆ ನೀಡಿದರು’ ಎಂದು ಪೀಠಕ್ಕೆ ತಿಳೀಸಿದರು.</p>.<p>‘ಮುಖ್ಯಮಂತ್ರಿ ಇಂತಹ ಹೇಳಿಕೆ ನೀಡಿದ್ದರೂ, ವಿಧಾನಸಭಾಧ್ಯಕ್ಷ ಏನೂ ಹೇಳಲಿಲ್ಲ’ ಎಂದೂ ಸುಂದರಮ್ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪೀಠ,‘ಶಾಸಕರ ಅನರ್ಹತೆ ಕೋರುವ ಅರ್ಜಿಗಳ ಕುರಿತು ತೀರ್ಮಾನವನ್ನೇ ತೆಗೆದುಕೊಳ್ಳದೇ ಸುಮ್ಮನಿರಬೇಕೇ ಹಾಗೂ ಸಂವಿಧಾನದ 10ನೇ ಪರಿಚ್ಛೇದವನ್ನು ರದ್ದುಗೊಳಿಸಬೇಕೇ’ ಎಂದು ಪೀಠ ಕೇಳಿತು.</p>.<p>ವಿಧಾನಸಭೆ ಸದಸ್ಯರು ಪಕ್ಷಾಂತರ ಮಾಡಿದಲ್ಲಿ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸುವ ಅವಕಾಶಗಳನ್ನು 10ನೇ ಪರಿಚ್ಛೇದ ಒಳಗೊಂಡಿದೆ.</p>.<p>‘ಇದು ಅಸಾಧಾರಣ ಪ್ರಕರಣವೆಂದು ಪರಿಗಣಿಸಿ, ಅನರ್ಹತೆಗೆ ಸಂಬಂಧಿಸಿದ ಅರ್ಜಿಗಳ ಕುರಿತು ನಿರ್ಧಾರ ಕೈಗೊಳ್ಳಲು ಕಾಲಮಿತಿ ನಿಗದಿಪಡಿಸಬೇಕು’ ಎಂದು ಸುಂದರಮ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘‘ಬಿಆರ್ಎಸ್ ಪಕ್ಷದ ಶಾಸಕರು ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದರೂ ಅವರ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದಿಲ್ಲ’ ಎಂಬುದಾಗಿ ವಿಧಾನಸಭೆಯಲ್ಲಿ ಹೇಳಿದ್ದ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ವಿರುದ್ಧ ಸುಪ್ರೀಂ ಕೋರ್ಟ್ ಗುರುವಾರ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ.</p>.<p>‘ನ್ಯಾಯಾಂಗ ನಿಂದನೆಗಾಗಿ ಕ್ರಮ ಕೈಗೊಳ್ಳದೇ ಮತ್ತು ಆಗ ಅವರನ್ನು(ಮುಖ್ಯಮಂತ್ರಿ ರೇವಂತ ರೆಡ್ಡಿ) ಹಾಗೆಯೇ ಬಿಡುವ ಮೂಲಕವೇ ನಾವು ತಪ್ಪು ಮಾಡಿದೆವಾ?’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಆಗಸ್ಟೀನ್ ಜಾರ್ಜ್ ಮಸೀಹ್ ಅವರು ಇದ್ದ ಪೀಠ ಹೇಳಿದೆ.</p>.<p>ಪಕ್ಷಾಂತರ ಮಾಡಿರುವ ಬಿಆರ್ಎಸ್ನ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ ಅರ್ಜಿಗಳನ್ನು ಇತ್ಯರ್ಥಪಡಿಸಲು ತೆಲಂಗಾಣ ವಿಧಾನಸಭಾಧ್ಯಕ್ಷ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕುರಿತ ಮೇಲ್ಮನವಿಗಳ ವಿಚಾರಣೆ ವೇಳೆ, ಈ ಮಾತು ಹೇಳಿರುವ ನ್ಯಾಯಪೀಠ, ತೀರ್ಪನ್ನು ಕಾಯ್ದಿರಿಸಿದೆ.</p>.<p>ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿನ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರ ಬಗ್ಗೆ ರೇವಂತ ರೆಡ್ಡಿ ಹೇಳಿಕೆ ನೀಡಿದ್ದರು. ರೆಡ್ಡಿ ಅವರ ಹೇಳಿಕೆಗೆ ಆಗ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.</p>.<p>ಈ ಸಂಗತಿಯನ್ನು ಪ್ರಸ್ತಾಪಿಸಿದ ನ್ಯಾಯಪೀಠ, ‘ಈ ಹಿಂದಿನ ಅನುಭವದ ಆಧಾರದ ಮೇಲೆ ಮುಖ್ಯಮಂತ್ರಿ ಸ್ವಲ್ಪ ಮಟ್ಟಿನ ಸಂಯಮ ತೋರಬೇಕಿತ್ತು’ ಎಂದು ವಿಧಾನಸಭಾಧ್ಯಕ್ಷರ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರನ್ನು ಉದ್ಧೇಶಿಸಿ ಹೇಳಿತು.</p>.<p>ಬಿಆರ್ಎಸ್ ನಾಯಕ ಪಾಡಿ ಕೌಶಿಕ್ ರೆಡ್ಡಿ ಪರ ಹಾಜರಿದ್ದ ಹಿರಿಯ ವಕೀಲ ಸಿ.ಎ.ಸುಂದರಮ್,‘ಈ ವಿಚಾರವು ಸುಪ್ರೀಂ ಕೋರ್ಟ್ನಲ್ಲಿದೆ. ಈ ಬಗ್ಗೆ ಪ್ರಸ್ತಾಪಿಸುವುದು ಬೇಡ ಎಂದು ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದ ಬಿಆರ್ಎಸ್ ಶಾಸಕರೊಬ್ಬರು ಹೇಳಿದ್ದರು. ಆದರೂ, ಮುಖ್ಯಮಂತ್ರಿ ಈ ಹೇಳಿಕೆ ನೀಡಿದರು’ ಎಂದು ಪೀಠಕ್ಕೆ ತಿಳೀಸಿದರು.</p>.<p>‘ಮುಖ್ಯಮಂತ್ರಿ ಇಂತಹ ಹೇಳಿಕೆ ನೀಡಿದ್ದರೂ, ವಿಧಾನಸಭಾಧ್ಯಕ್ಷ ಏನೂ ಹೇಳಲಿಲ್ಲ’ ಎಂದೂ ಸುಂದರಮ್ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪೀಠ,‘ಶಾಸಕರ ಅನರ್ಹತೆ ಕೋರುವ ಅರ್ಜಿಗಳ ಕುರಿತು ತೀರ್ಮಾನವನ್ನೇ ತೆಗೆದುಕೊಳ್ಳದೇ ಸುಮ್ಮನಿರಬೇಕೇ ಹಾಗೂ ಸಂವಿಧಾನದ 10ನೇ ಪರಿಚ್ಛೇದವನ್ನು ರದ್ದುಗೊಳಿಸಬೇಕೇ’ ಎಂದು ಪೀಠ ಕೇಳಿತು.</p>.<p>ವಿಧಾನಸಭೆ ಸದಸ್ಯರು ಪಕ್ಷಾಂತರ ಮಾಡಿದಲ್ಲಿ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸುವ ಅವಕಾಶಗಳನ್ನು 10ನೇ ಪರಿಚ್ಛೇದ ಒಳಗೊಂಡಿದೆ.</p>.<p>‘ಇದು ಅಸಾಧಾರಣ ಪ್ರಕರಣವೆಂದು ಪರಿಗಣಿಸಿ, ಅನರ್ಹತೆಗೆ ಸಂಬಂಧಿಸಿದ ಅರ್ಜಿಗಳ ಕುರಿತು ನಿರ್ಧಾರ ಕೈಗೊಳ್ಳಲು ಕಾಲಮಿತಿ ನಿಗದಿಪಡಿಸಬೇಕು’ ಎಂದು ಸುಂದರಮ್ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>