<p><strong>ಮುಂಬೈ:</strong> 'ನಾನು ರಾಜಕೀಯಕ್ಕೆ ಬಂದಾಗಿನಿಂದಲೂ ತಮ್ಮ ಪಕ್ಷಕ್ಕೆ ಅಂಟಿಕೊಂಡಿದ್ದೇನೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಎಂದಿಗೂ ಸಾಬೀತಾಗಿಲ್ಲ' ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹೇಳಿದ್ದಾರೆ. </p><p>ಈ ಕುರಿತು ವಿಡಿಯೊ ಸಂದೇಶದಲ್ಲಿ ಅಭಿವೃದ್ಧಿಗಾಗಿ ರಾಜ್ಯದ ಜನತೆ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.</p><p>'ಜನರೇ ನನ್ನ ಏಕೈಕ ಪಕ್ಷ. ಜನರ ಕಲ್ಯಾಣವೇ ಮೊದಲ ಆದ್ಯತೆಯಾಗಿದೆ. ಜನರಿಗೆ ಹೇಗೆ ಪ್ರಯೋಜನ ಸಿಗಲಿದೆ ಎಂದು ನಾನು ಯಾವಾಗಲೂ ಯೋಚಿಸುತ್ತೇನೆ' ಎಂದು ಅವರು ಹೇಳಿದ್ದಾರೆ. </p><p>'ನನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಸಾಬೀತುಗೊಂಡಿಲ್ಲ. ನನ್ನ ವಿರುದ್ಧ ಮಿಥ್ಯ ಆರೋಪ ಮಾಡುವವರನ್ನು ಕಡೆಗಣಿಸಿ. ಉತ್ತಮ ಕೆಲಸ ಮಾಡುವವರಿಗೆ ಮತ ಹಾಕಿ' ಎಂದು ಹೇಳಿದ್ದಾರೆ. </p><p>ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಎನ್ಸಿಪಿ, ಬಿಜೆಪಿ, ಹಾಗೂ ಏಕನಾಥ ಶಿಂದೆ ಅವರ ಶಿವಸೇನಾ ಪಕ್ಷಗಳನ್ನು ಒಳಗೊಂಡಿರುವ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟವು ಕಳಪೆ ಸಾಧನೆ ಮಾಡಿತ್ತು. ಇದರ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬ ಕುರಿತು ವರದಿಗಳು ಬಂದಿದ್ದವು. </p><p>ಮಹಾರಾಷ್ಟ್ರದಲ್ಲಿ 48 ಸ್ಥಾನಗಳ ಪೈಕಿ ಮಹಾಯುತಿ ಮೈತ್ರಿಕೂಟ 17ರಲ್ಲಷ್ಟೇ ಜಯಿಸಿತ್ತು. 2019ರಲ್ಲಿ 23 ಸ್ಥಾನಗಳಲ್ಲಿ ಜಯಿಸಿದ್ದ ಬಿಜೆಪಿಯ ಸಂಖ್ಯೆ 9ಕ್ಕೆ ಕುಸಿತ ಕಂಡಿತ್ತು. ಶಿವಸೇನಾಗೆ 9 ಹಾಗೂ ಎನ್ಸಿಪಿಗೆ 1 ಸ್ಥಾನ ಮಾತ್ರ ದೊರಕಿತ್ತು. ಮತ್ತೊಂದೆಡೆ ಕಾಂಗ್ರೆಸ್, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಎನ್ಪಿಸಿ (ಶರದ್ ಪವಾರ್ ಬಣ) ನೇತೃತ್ವದ ಮಹಾ ವಿಕಾಸ ಅಘಾಡಿ ಮೈತ್ರಿಕೂಟ 30ರಲ್ಲಿ ಗೆದ್ದಿತ್ತು. </p><p>2024ರ ಜುಲೈಯಲ್ಲಿ ಎನ್ಸಿಪಿ ಸ್ಥಾಪಕ ಶರದ್ ಪವಾರ್ ವಿರುದ್ಧ ಬಂಡಾಯವೆದ್ದಿದ್ದ ಅಜಿತ್ ಪವಾರ್, ಬಿಜೆಪಿ, ಶಿವಸೇನಾದೊಂದಿಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದರು. ಬಳಿಕ ತಮ್ಮ ಪಕ್ಷಕ್ಕೆ ಹೊಸ ಚಿಹ್ನೆ ಹಾಗೂ ಹೆಸರು ಪಡೆಯುವಲ್ಲಿ ಯಶಸ್ವಿಯಾಗಿದ್ದರು. </p>.ನಮಗೆ ಸಂಪುಟ ದರ್ಜೆ ಸಚಿವ ಸ್ಥಾನವೇ ಬೇಕು: ಅಜಿತ್ ಪವಾರ್.Election Results: ಪ್ರಮುಖ ರಾಜ್ಯಗಳ ಫಲಿತಾಂಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> 'ನಾನು ರಾಜಕೀಯಕ್ಕೆ ಬಂದಾಗಿನಿಂದಲೂ ತಮ್ಮ ಪಕ್ಷಕ್ಕೆ ಅಂಟಿಕೊಂಡಿದ್ದೇನೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಎಂದಿಗೂ ಸಾಬೀತಾಗಿಲ್ಲ' ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹೇಳಿದ್ದಾರೆ. </p><p>ಈ ಕುರಿತು ವಿಡಿಯೊ ಸಂದೇಶದಲ್ಲಿ ಅಭಿವೃದ್ಧಿಗಾಗಿ ರಾಜ್ಯದ ಜನತೆ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.</p><p>'ಜನರೇ ನನ್ನ ಏಕೈಕ ಪಕ್ಷ. ಜನರ ಕಲ್ಯಾಣವೇ ಮೊದಲ ಆದ್ಯತೆಯಾಗಿದೆ. ಜನರಿಗೆ ಹೇಗೆ ಪ್ರಯೋಜನ ಸಿಗಲಿದೆ ಎಂದು ನಾನು ಯಾವಾಗಲೂ ಯೋಚಿಸುತ್ತೇನೆ' ಎಂದು ಅವರು ಹೇಳಿದ್ದಾರೆ. </p><p>'ನನ್ನ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಸಾಬೀತುಗೊಂಡಿಲ್ಲ. ನನ್ನ ವಿರುದ್ಧ ಮಿಥ್ಯ ಆರೋಪ ಮಾಡುವವರನ್ನು ಕಡೆಗಣಿಸಿ. ಉತ್ತಮ ಕೆಲಸ ಮಾಡುವವರಿಗೆ ಮತ ಹಾಕಿ' ಎಂದು ಹೇಳಿದ್ದಾರೆ. </p><p>ಇತ್ತೀಚೆಗಿನ ಲೋಕಸಭೆ ಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಎನ್ಸಿಪಿ, ಬಿಜೆಪಿ, ಹಾಗೂ ಏಕನಾಥ ಶಿಂದೆ ಅವರ ಶಿವಸೇನಾ ಪಕ್ಷಗಳನ್ನು ಒಳಗೊಂಡಿರುವ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟವು ಕಳಪೆ ಸಾಧನೆ ಮಾಡಿತ್ತು. ಇದರ ಬೆನ್ನಲ್ಲೇ ಮೈತ್ರಿಕೂಟದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬ ಕುರಿತು ವರದಿಗಳು ಬಂದಿದ್ದವು. </p><p>ಮಹಾರಾಷ್ಟ್ರದಲ್ಲಿ 48 ಸ್ಥಾನಗಳ ಪೈಕಿ ಮಹಾಯುತಿ ಮೈತ್ರಿಕೂಟ 17ರಲ್ಲಷ್ಟೇ ಜಯಿಸಿತ್ತು. 2019ರಲ್ಲಿ 23 ಸ್ಥಾನಗಳಲ್ಲಿ ಜಯಿಸಿದ್ದ ಬಿಜೆಪಿಯ ಸಂಖ್ಯೆ 9ಕ್ಕೆ ಕುಸಿತ ಕಂಡಿತ್ತು. ಶಿವಸೇನಾಗೆ 9 ಹಾಗೂ ಎನ್ಸಿಪಿಗೆ 1 ಸ್ಥಾನ ಮಾತ್ರ ದೊರಕಿತ್ತು. ಮತ್ತೊಂದೆಡೆ ಕಾಂಗ್ರೆಸ್, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಎನ್ಪಿಸಿ (ಶರದ್ ಪವಾರ್ ಬಣ) ನೇತೃತ್ವದ ಮಹಾ ವಿಕಾಸ ಅಘಾಡಿ ಮೈತ್ರಿಕೂಟ 30ರಲ್ಲಿ ಗೆದ್ದಿತ್ತು. </p><p>2024ರ ಜುಲೈಯಲ್ಲಿ ಎನ್ಸಿಪಿ ಸ್ಥಾಪಕ ಶರದ್ ಪವಾರ್ ವಿರುದ್ಧ ಬಂಡಾಯವೆದ್ದಿದ್ದ ಅಜಿತ್ ಪವಾರ್, ಬಿಜೆಪಿ, ಶಿವಸೇನಾದೊಂದಿಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದರು. ಬಳಿಕ ತಮ್ಮ ಪಕ್ಷಕ್ಕೆ ಹೊಸ ಚಿಹ್ನೆ ಹಾಗೂ ಹೆಸರು ಪಡೆಯುವಲ್ಲಿ ಯಶಸ್ವಿಯಾಗಿದ್ದರು. </p>.ನಮಗೆ ಸಂಪುಟ ದರ್ಜೆ ಸಚಿವ ಸ್ಥಾನವೇ ಬೇಕು: ಅಜಿತ್ ಪವಾರ್.Election Results: ಪ್ರಮುಖ ರಾಜ್ಯಗಳ ಫಲಿತಾಂಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>