<p><strong>ಜೋಧಪುರ:</strong> ಚೀನಾ ನಮ್ಮ ಭೂಪ್ರದೇಶ ಪ್ರವೇಶಿಸಲು ಬಿಟ್ಟಿಲ್ಲ ಮತ್ತು ಭಾರತ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯ ಪಕ್ಷಗಳು ರಾಜಕೀಯಗೊಳಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.</p>.<p>ಹೇಳಿಕೆಗಳು ಮತ್ತು ನಂಬಿಕೆಗಳು ಏನೇ ಇರಲಿ ಭಾರತವು ತನ್ನ ಭೂಪ್ರದೇಶವನ್ನು ಅತಿಕ್ರಮಿಸಲು ಯಾರನ್ನೂ ಬಿಟ್ಟಿಲ್ಲ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/explainer-independence-day-the-evolution-of-the-indian-flag-to-the-tricolour-we-know-962926.html" itemprop="url">Explainer| ಭಾರತ ಧ್ವಜದ ಇತಿಹಾಸ: ಈಗಿನ ತಿರಂಗದ ವರೆಗಿನ ವಿಕಾಸದ ವಿವರಣೆ </a></p>.<p>ಭಾರತದ ಜನರ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಮೊದಲ ಆದ್ಯತೆ ನೀಡಿದೆ. ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವ ಯಾರಿಗಾದರೂ ಸೂಕ್ತ ಉತ್ತರವನ್ನು ನೀಡಲಾಗುವುದು ಎಂದು ರಾಜನಾಥ್ ಎಚ್ಚರಿಕೆ ನೀಡಿದರು.</p>.<p>‘ಈ ವಿಷಯದಲ್ಲಿ ಅನೇಕ ಘಟನೆಗಳು ನಡೆದು ಹೋಗಿವೆ. ಅದು ನಮ್ಮ ಒಂದಿಬ್ಬರಿಗೆ ತಿಳಿದಿದೆ. ನಾನು ಆ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ನಾವು ಚೀನಾದವರನ್ನು ನಮ್ಮ ಪ್ರದೇಶದೊಳಗೆ ನುಸುಳಲು ಬಿಟ್ಟಿಲ್ಲ’ ಎಂದು ರಾಜನಾಥ್ ಸಿಂಗ್ ಮಾರ್ಮಿಕವಾಗಿ ಮಾತನಾಡಿದರು.</p>.<p>‘ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ’ ಎಂದು ರಾಜಕೀಯ ಪಕ್ಷಗಳಿಗೆ ರಾಜನಾಥ್ ಮನವಿ ಮಾಡಿದರು.</p>.<p>‘ಸುಸಜ್ಜಿತ ಶಸ್ತ್ರಾಸ್ತ್ರಗಳು ಮತ್ತು ತಂತ್ರಜ್ಞಾನದೊಂದಿಗೆ ನಮ್ಮ ಸಶಸ್ತ್ರ ಪಡೆಗಳು ಸಜ್ಜಾಗಿವೆ. ಭವಿಷ್ಯದ ಎಲ್ಲಾ ಬೆದರಿಕೆಗಳನ್ನು ಎದುರಿಸಲು ನಮ್ಮ ಪಡೆಗಳು ತಯಾರಾಗಿವೆ’ ಎಂದು ರಾಜನಾಥ್ ಇದೇ ವೇಳೆ ಸ್ಪಷ್ಟಪಡಿಸಿದರು.</p>.<p>ಬಲಿಷ್ಠ ಸೇನೆಯನ್ನು ಕಟ್ಟಲು ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು. ರಕ್ಷಣಾ ಇಲಾಖೆಯು ಸ್ವದೇಶಿ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ ಎಂದು ಹೇಳಿದರು.</p>.<p>‘ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರವು ಕೈಗೊಂಡ ಕ್ರಮಗಳಿಂದಾಗಿ, ವಿಶ್ವದ ಅಗ್ರ 25 ರಕ್ಷಣಾ ರಫ್ತುದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವತ್ತ ಭಾರತ ಧಾಪುಗಾಲು ಹಾಕುತ್ತಿದೆ. ಈ ದಶಕ ಪೂರ್ಣಗೊಳ್ಳುವ ಹೊತ್ತಿಗೆ, ಭಾರತವು ರಕ್ಷಣಾ ಸಾಧನಗಳ ತಯಾರಿಕೆಯಲ್ಲಿ ಮಾತ್ರ ಮುಂದಿರುವುದಿಲ್ಲ, ಬದಲಿಗೆ ಮಿತ್ರ ರಾಷ್ಟ್ರಗಳ ರಕ್ಷಣಾ ಅಗತ್ಯಗಳನ್ನೂ ಪೂರೈಸಲಿದೆ’ ಎಂದು ತಿಳಿಸಿದ್ದಾರೆ.</p>.<p>ಜೋಧಪುರದ ಸಾಲ್ವನ್ ಕಲನ್ ಗ್ರಾಮದಲ್ಲಿ ರಜಪೂತ ದಂಡನಾಯಕ ವೀರ್ ದುರ್ಗಾದಾಸ್ ರಾಥೋಡ್ ಪ್ರತಿಮೆ ಅನಾವರಣಗೊಳಿಸಿದ ರಾಜನಾಥ್, ‘ರಾಜಕಾರಣಿಗಳು ಹೇಳುವುದಕ್ಕೂ ಮತ್ತು ಮಾಡುವದಕ್ಕೂ ವ್ಯತ್ಯಾಸವಿದೆ ಎನ್ನಲಾಗುತ್ತದೆ. ಆದರೆ, ಬಿಜೆಪಿ ಏನು ಹೇಳುತ್ತದೆಯೋ ಅದನ್ನೇ ಮಾಡುತ್ತದೆ’ ಎಂದರು.</p>.<p>ಪ್ರತಿಮೆ ಸ್ಥಾಪನೆಯನ್ನು ಶ್ಲಾಘಿಸಿದ ರಾಜನಾಥ್, ರಾಥೋಡ್ ಧಾರ್ಮಿಕ ಸಾಮರಸ್ಯಕ್ಕಾಗಿ ಹೆಸರಾದವರು ಎಂದು ಹೇಳಿದರು.</p>.<p><strong>ಇವುಗಳನ್ನೂ ಓದಿ</strong></p>.<p><a href="https://www.prajavani.net/india-news/as-har-ghar-tiranga-gains-pace-disposal-of-flags-a-matter-of-concern-962963.html" itemprop="url">ತಿರಂಗ ಅಭಿಯಾನಕ್ಕೆ ವೇಗ: ಧ್ವಜದ ಗೌರವಯುತ ವಿಲೇವಾರಿಯೇ ದೊಡ್ಡ ಪ್ರಶ್ನೆ </a></p>.<p><a href="https://www.prajavani.net/india-news/pok-part-of-india-and-will-continue-to-do-so-defence-minister-957183.html" itemprop="url">ಪಿಒಕೆ ಭಾರತದ ಅವಿಭಾಜ್ಯ ಅಂಗ: ರಾಜನಾಥ್ ಸಿಂಗ್ </a></p>.<p><a href="https://www.prajavani.net/india-news/pakistan-trying-to-bleed-india-with-a-thousand-cuts-rajnath-singh-946058.html" itemprop="url">ಶಾಂತಿ ಭಂಗ ಮಾಡಿದರೆ ತಕ್ಕ ಉತ್ತರ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ </a></p>.<p><a href="https://www.prajavani.net/india-news/defence-minister-rajnath-singh-hands-over-12-high-speed-guard-boats-to-vietnam-943805.html" itemprop="url">ಅತಿ ವೇಗದ 12 ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರಿಸಿದ ರಾಜನಾಥ್ ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಧಪುರ:</strong> ಚೀನಾ ನಮ್ಮ ಭೂಪ್ರದೇಶ ಪ್ರವೇಶಿಸಲು ಬಿಟ್ಟಿಲ್ಲ ಮತ್ತು ಭಾರತ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯ ಪಕ್ಷಗಳು ರಾಜಕೀಯಗೊಳಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.</p>.<p>ಹೇಳಿಕೆಗಳು ಮತ್ತು ನಂಬಿಕೆಗಳು ಏನೇ ಇರಲಿ ಭಾರತವು ತನ್ನ ಭೂಪ್ರದೇಶವನ್ನು ಅತಿಕ್ರಮಿಸಲು ಯಾರನ್ನೂ ಬಿಟ್ಟಿಲ್ಲ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/explainer-independence-day-the-evolution-of-the-indian-flag-to-the-tricolour-we-know-962926.html" itemprop="url">Explainer| ಭಾರತ ಧ್ವಜದ ಇತಿಹಾಸ: ಈಗಿನ ತಿರಂಗದ ವರೆಗಿನ ವಿಕಾಸದ ವಿವರಣೆ </a></p>.<p>ಭಾರತದ ಜನರ ಸುರಕ್ಷತೆ ಮತ್ತು ಭದ್ರತೆಗೆ ಸರ್ಕಾರವು ಮೊದಲ ಆದ್ಯತೆ ನೀಡಿದೆ. ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವ ಯಾರಿಗಾದರೂ ಸೂಕ್ತ ಉತ್ತರವನ್ನು ನೀಡಲಾಗುವುದು ಎಂದು ರಾಜನಾಥ್ ಎಚ್ಚರಿಕೆ ನೀಡಿದರು.</p>.<p>‘ಈ ವಿಷಯದಲ್ಲಿ ಅನೇಕ ಘಟನೆಗಳು ನಡೆದು ಹೋಗಿವೆ. ಅದು ನಮ್ಮ ಒಂದಿಬ್ಬರಿಗೆ ತಿಳಿದಿದೆ. ನಾನು ಆ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ನಾವು ಚೀನಾದವರನ್ನು ನಮ್ಮ ಪ್ರದೇಶದೊಳಗೆ ನುಸುಳಲು ಬಿಟ್ಟಿಲ್ಲ’ ಎಂದು ರಾಜನಾಥ್ ಸಿಂಗ್ ಮಾರ್ಮಿಕವಾಗಿ ಮಾತನಾಡಿದರು.</p>.<p>‘ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ’ ಎಂದು ರಾಜಕೀಯ ಪಕ್ಷಗಳಿಗೆ ರಾಜನಾಥ್ ಮನವಿ ಮಾಡಿದರು.</p>.<p>‘ಸುಸಜ್ಜಿತ ಶಸ್ತ್ರಾಸ್ತ್ರಗಳು ಮತ್ತು ತಂತ್ರಜ್ಞಾನದೊಂದಿಗೆ ನಮ್ಮ ಸಶಸ್ತ್ರ ಪಡೆಗಳು ಸಜ್ಜಾಗಿವೆ. ಭವಿಷ್ಯದ ಎಲ್ಲಾ ಬೆದರಿಕೆಗಳನ್ನು ಎದುರಿಸಲು ನಮ್ಮ ಪಡೆಗಳು ತಯಾರಾಗಿವೆ’ ಎಂದು ರಾಜನಾಥ್ ಇದೇ ವೇಳೆ ಸ್ಪಷ್ಟಪಡಿಸಿದರು.</p>.<p>ಬಲಿಷ್ಠ ಸೇನೆಯನ್ನು ಕಟ್ಟಲು ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು. ರಕ್ಷಣಾ ಇಲಾಖೆಯು ಸ್ವದೇಶಿ ಶಸ್ತ್ರಾಸ್ತ್ರಗಳನ್ನು ತಯಾರಿಸಲು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ ಎಂದು ಹೇಳಿದರು.</p>.<p>‘ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರವು ಕೈಗೊಂಡ ಕ್ರಮಗಳಿಂದಾಗಿ, ವಿಶ್ವದ ಅಗ್ರ 25 ರಕ್ಷಣಾ ರಫ್ತುದಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವತ್ತ ಭಾರತ ಧಾಪುಗಾಲು ಹಾಕುತ್ತಿದೆ. ಈ ದಶಕ ಪೂರ್ಣಗೊಳ್ಳುವ ಹೊತ್ತಿಗೆ, ಭಾರತವು ರಕ್ಷಣಾ ಸಾಧನಗಳ ತಯಾರಿಕೆಯಲ್ಲಿ ಮಾತ್ರ ಮುಂದಿರುವುದಿಲ್ಲ, ಬದಲಿಗೆ ಮಿತ್ರ ರಾಷ್ಟ್ರಗಳ ರಕ್ಷಣಾ ಅಗತ್ಯಗಳನ್ನೂ ಪೂರೈಸಲಿದೆ’ ಎಂದು ತಿಳಿಸಿದ್ದಾರೆ.</p>.<p>ಜೋಧಪುರದ ಸಾಲ್ವನ್ ಕಲನ್ ಗ್ರಾಮದಲ್ಲಿ ರಜಪೂತ ದಂಡನಾಯಕ ವೀರ್ ದುರ್ಗಾದಾಸ್ ರಾಥೋಡ್ ಪ್ರತಿಮೆ ಅನಾವರಣಗೊಳಿಸಿದ ರಾಜನಾಥ್, ‘ರಾಜಕಾರಣಿಗಳು ಹೇಳುವುದಕ್ಕೂ ಮತ್ತು ಮಾಡುವದಕ್ಕೂ ವ್ಯತ್ಯಾಸವಿದೆ ಎನ್ನಲಾಗುತ್ತದೆ. ಆದರೆ, ಬಿಜೆಪಿ ಏನು ಹೇಳುತ್ತದೆಯೋ ಅದನ್ನೇ ಮಾಡುತ್ತದೆ’ ಎಂದರು.</p>.<p>ಪ್ರತಿಮೆ ಸ್ಥಾಪನೆಯನ್ನು ಶ್ಲಾಘಿಸಿದ ರಾಜನಾಥ್, ರಾಥೋಡ್ ಧಾರ್ಮಿಕ ಸಾಮರಸ್ಯಕ್ಕಾಗಿ ಹೆಸರಾದವರು ಎಂದು ಹೇಳಿದರು.</p>.<p><strong>ಇವುಗಳನ್ನೂ ಓದಿ</strong></p>.<p><a href="https://www.prajavani.net/india-news/as-har-ghar-tiranga-gains-pace-disposal-of-flags-a-matter-of-concern-962963.html" itemprop="url">ತಿರಂಗ ಅಭಿಯಾನಕ್ಕೆ ವೇಗ: ಧ್ವಜದ ಗೌರವಯುತ ವಿಲೇವಾರಿಯೇ ದೊಡ್ಡ ಪ್ರಶ್ನೆ </a></p>.<p><a href="https://www.prajavani.net/india-news/pok-part-of-india-and-will-continue-to-do-so-defence-minister-957183.html" itemprop="url">ಪಿಒಕೆ ಭಾರತದ ಅವಿಭಾಜ್ಯ ಅಂಗ: ರಾಜನಾಥ್ ಸಿಂಗ್ </a></p>.<p><a href="https://www.prajavani.net/india-news/pakistan-trying-to-bleed-india-with-a-thousand-cuts-rajnath-singh-946058.html" itemprop="url">ಶಾಂತಿ ಭಂಗ ಮಾಡಿದರೆ ತಕ್ಕ ಉತ್ತರ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ </a></p>.<p><a href="https://www.prajavani.net/india-news/defence-minister-rajnath-singh-hands-over-12-high-speed-guard-boats-to-vietnam-943805.html" itemprop="url">ಅತಿ ವೇಗದ 12 ರಕ್ಷಣಾ ಹಡಗುಗಳನ್ನು ವಿಯೆಟ್ನಾಂಗೆ ಹಸ್ತಾಂತರಿಸಿದ ರಾಜನಾಥ್ ಸಿಂಗ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>