<p><strong>ಶಿಮ್ಲಾ</strong>: ‘ನನ್ನ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸುವುದು ನನಗೆ ಇಷ್ಟವಿಲ್ಲ. ಆದರೆ ಅವರನ್ನು ದೆಹರಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಬುಧವಾರ ಹೇಳಿದರು.</p>.<p>ರಾಜ್ಯದ ಉಪಚುನಾವಣೆಯು ಜುಲೈ 10ರಂದು ನಡೆಯಲಿದೆ. ಕಾಂಗ್ರೆಸ್ನ ಅಭ್ಯರ್ಥಿ ಪಟ್ಟಿಯಲ್ಲಿ ಸುಖು ಪತ್ನಿ ಕಮಲೇಶ್ ಠಾಕೂರ್ ಅವರ ಹೆಸರೂ ಇದೆ. ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆ ಆಗಿದ್ದ ಮತ್ತು ಈ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿರುವ ಹೋಶಿಯಾರ್ ಸಿಂಗ್ಗೆ ಎದುರಾಳಿಯಾಗಿ ಕಮಲೇಶ್ ಸ್ಪರ್ಧಿಸಲಿದ್ದಾರೆ.</p>.<p>‘ಲೋಕಸಭೆ ಚುನಾವಣೆಯಲ್ಲಿ ಕಮಲೇಶ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಒಂದು ಕುಟುಂಬದಿಂದ ಒಬ್ಬರು ಮಾತ್ರ ರಾಜಕಾರಣದಲ್ಲಿ ಇರಬೇಕು ಎಂದು ನಾನು ನಂಬಿದ್ದರಿಂದ ಪಕ್ಷದ ಪ್ರಸ್ತಾವನೆಯನ್ನು ನಾನು ತಿರಸ್ಕರಿಸಿದ್ದೆ. ಆದರೆ ಈ ಬಾರಿ ರಾಜ್ಯದ ರಾಜಕಾರಣವನ್ನು ಗಮನದಲ್ಲಿರಿಸಿಕೊಂಡು ನಾವು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಗುತ್ತದೆ. ಹೀಗಾಗಿ ಕಮಲೇಶ್ ಅವರನ್ನು ಕಣಕ್ಕಿಳಿಸಲು ಒಪ್ಪಿದೆ’ ಎಂದರು.</p>.<div><blockquote>ದೆಹರಾ ನನ್ನದು ಎಂದು ನಾನು ಈ ಮೊದಲು ಹೇಳುತ್ತಿದ್ದೆ. ನನ್ನ ಪತ್ನಿ ನನ್ನನ್ನು ಅಲ್ಲಿ ಪ್ರತಿನಿಧಿಸಲಿದ್ದಾಳೆ</blockquote><span class="attribution">ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶ ಮುಖ್ಯಮಂತ್ರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ‘ನನ್ನ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸುವುದು ನನಗೆ ಇಷ್ಟವಿಲ್ಲ. ಆದರೆ ಅವರನ್ನು ದೆಹರಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಬುಧವಾರ ಹೇಳಿದರು.</p>.<p>ರಾಜ್ಯದ ಉಪಚುನಾವಣೆಯು ಜುಲೈ 10ರಂದು ನಡೆಯಲಿದೆ. ಕಾಂಗ್ರೆಸ್ನ ಅಭ್ಯರ್ಥಿ ಪಟ್ಟಿಯಲ್ಲಿ ಸುಖು ಪತ್ನಿ ಕಮಲೇಶ್ ಠಾಕೂರ್ ಅವರ ಹೆಸರೂ ಇದೆ. ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆ ಆಗಿದ್ದ ಮತ್ತು ಈ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿರುವ ಹೋಶಿಯಾರ್ ಸಿಂಗ್ಗೆ ಎದುರಾಳಿಯಾಗಿ ಕಮಲೇಶ್ ಸ್ಪರ್ಧಿಸಲಿದ್ದಾರೆ.</p>.<p>‘ಲೋಕಸಭೆ ಚುನಾವಣೆಯಲ್ಲಿ ಕಮಲೇಶ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಒಂದು ಕುಟುಂಬದಿಂದ ಒಬ್ಬರು ಮಾತ್ರ ರಾಜಕಾರಣದಲ್ಲಿ ಇರಬೇಕು ಎಂದು ನಾನು ನಂಬಿದ್ದರಿಂದ ಪಕ್ಷದ ಪ್ರಸ್ತಾವನೆಯನ್ನು ನಾನು ತಿರಸ್ಕರಿಸಿದ್ದೆ. ಆದರೆ ಈ ಬಾರಿ ರಾಜ್ಯದ ರಾಜಕಾರಣವನ್ನು ಗಮನದಲ್ಲಿರಿಸಿಕೊಂಡು ನಾವು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಗುತ್ತದೆ. ಹೀಗಾಗಿ ಕಮಲೇಶ್ ಅವರನ್ನು ಕಣಕ್ಕಿಳಿಸಲು ಒಪ್ಪಿದೆ’ ಎಂದರು.</p>.<div><blockquote>ದೆಹರಾ ನನ್ನದು ಎಂದು ನಾನು ಈ ಮೊದಲು ಹೇಳುತ್ತಿದ್ದೆ. ನನ್ನ ಪತ್ನಿ ನನ್ನನ್ನು ಅಲ್ಲಿ ಪ್ರತಿನಿಧಿಸಲಿದ್ದಾಳೆ</blockquote><span class="attribution">ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶ ಮುಖ್ಯಮಂತ್ರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>