ಬೆಂಗಳೂರು:ಡೀಸೆಲ್ ಬೆಲೆ ಏರಿಕೆ ಮತ್ತು ಟೋಲ್ ಶುಲ್ಕ ಹೆಚ್ಚಳ ಹಾಗೂ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧಿಸುತ್ತಿರುವ ನಿಯಮಾವಳಿಗಳ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ರಾರಿ ಮುಷ್ಕರ ಶುಕ್ರವಾರ ಆರಂಭವಾಗಿದೆ.
ರಾಜ್ಯಗಳ ಮಧ್ಯೆ ನಡೆಯುವ ಸರಕುಗಳ ಸಾಗಾಣಿಕೆಗೆ ಇ–ವೇ ಬಿಲ್ ವ್ಯವಸ್ಥೆಯಲ್ಲಿನ ಸಮಸ್ಯೆಗಳು ಹಾಗೂ ಮತ್ತಿತರ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಯುತ್ತಿದೆ.
ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಲಾರಿ ಮಾಲೀಕರು ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
Coimbatore: All India Motor Transport Congress has started its nation-wide protest against the constant increase in diesel prices, toll expenses, GST compliance issues, practical problems with e-way bills and some other issues. #TamilNadupic.twitter.com/dLj7egVBBl