<p><strong>ನವದೆಹಲಿ:</strong> ದೆಹಲಿಯ ಮಾಜಿ ಬ್ಯಾಂಕರ್ ಒಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಒಂದು ತಿಂಗಳ ಕಾಲ ಡಿಜಿಟಲ್ ಕಣ್ಗಾವಲಿನಲ್ಲಿ ಇರಿಸಿಕೊಂಡಿದ್ದ ಸೈಬರ್ ವಂಚಕರು ₹ 23 ಕೋಟಿ ದೋಚಿದ್ದಾರೆ.</p>.<p>‘ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದಕರಿಗೆ ಧನಸಹಾಯ ಹಾಗೂ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದವರಿಂದ ನಿಮ್ಮ ಆಧಾರ್ ಕಾರ್ಡ್ ಬಳಕೆಯಾಗಿದೆ’ ಎಂದು ಸೈಬರ್ ಆರೋಪಿಯು ನಿವೃತ್ತ ಅಧಿಕಾರಿಗೆ ತಿಳಿಸಿ, ತನಿಖೆಗೊಳಪಡಿಸಿದ್ದಾನೆ.</p>.<p>ತನಿಖೆಯ ಹೆಸರಿನಲ್ಲಿ ಒಂದು ತಿಂಗಳು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಗೃಹಬಂಧನದಲ್ಲಿಟ್ಟು, ಹಂತ ಹಂತವಾಗಿ ಅವರ ಖಾತೆಗಳಿಂದ ತನ್ನ ಬೇರೆ ಬೇರೆ ಖಾತೆಗೆ ಬೃಹತ್ ಮೊತ್ತವನ್ನು ವಂಚಕನು ವರ್ಗಾಯಿಸಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ಮುಂಬೈನ ಪೊಲೀಸ್ ಅಧಿಕಾರಿ ಎಂದು ಆಗಸ್ಟ್ 4ರಂದು ಕರೆ ಮಾಡಿದ್ದ ಸೈಬರ್ ವಂಚಕನು, ಮಾದಕವಸ್ತು ಕಳ್ಳಸಾಗಣೆ ದಂಧೆ ಹೆಸರಿನಲ್ಲಿ ನಿವೃತ್ತ ಅಧಿಕಾರಿಯನ್ನು ಹೆದರಿಸಿದ್ದ. ನಂತರ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಂಚಕರು ಬ್ಯಾಂಕ್ರ್ನನ್ನು ಸಂಪರ್ಕಿಸಿದ್ದಾರೆ. ಈ ವಿಷಯ ಬಹಿರಂಗವಾದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೆ. 4ರವರೆಗೂ ಕಿರುಕುಳ ನೀಡಿದ್ದಾರೆ. ಹಂತ ಹಂತವಾಗಿ ವಿವಿಧ ಖಾತೆಗಳಿಗೆ ಹಣ ಹಾಕಿಸಿಕೊಂಡಿದ್ದಾರೆ.</p>.<p>ವಂಚನೆಗೆ ಒಳಗಾಗಿರುವುದು ಅರಿವಾಗುತ್ತಿದ್ದಂತೆ, ಸೆ.19ರಂದು ನಿವೃತ್ತ ಬ್ಯಾಂಕರ್ ಎನ್ಸಿಆರ್ಪಿ ಪೋರ್ಟಲ್ನಲ್ಲಿ ದೂರು ದಾಖಲಿಸಿದರು.</p>.<p>ಎಫ್ಐಆರ್ ದಾಖಲಿಸಿಕೊಂಡ ಐಎಫ್ಎಸ್ಒ ಘಟಕವು, ವಂಚಕರ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ₹12.11 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತನಿಖೆಯ ಜಾಡು ತಪ್ಪಿಸಲಿಕ್ಕಾಗಿಯೇ ವಂಚಕರು ದೇಶದ ವಿವಿಧ ಭಾಗಗಳಲ್ಲಿ ಹಣವನ್ನು ನಗದೀಕರಿಸಿಕೊಂಡಿದ್ದಾರೆ. ಹಲವು ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಮಾಜಿ ಬ್ಯಾಂಕರ್ ಒಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಒಂದು ತಿಂಗಳ ಕಾಲ ಡಿಜಿಟಲ್ ಕಣ್ಗಾವಲಿನಲ್ಲಿ ಇರಿಸಿಕೊಂಡಿದ್ದ ಸೈಬರ್ ವಂಚಕರು ₹ 23 ಕೋಟಿ ದೋಚಿದ್ದಾರೆ.</p>.<p>‘ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದಕರಿಗೆ ಧನಸಹಾಯ ಹಾಗೂ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾದವರಿಂದ ನಿಮ್ಮ ಆಧಾರ್ ಕಾರ್ಡ್ ಬಳಕೆಯಾಗಿದೆ’ ಎಂದು ಸೈಬರ್ ಆರೋಪಿಯು ನಿವೃತ್ತ ಅಧಿಕಾರಿಗೆ ತಿಳಿಸಿ, ತನಿಖೆಗೊಳಪಡಿಸಿದ್ದಾನೆ.</p>.<p>ತನಿಖೆಯ ಹೆಸರಿನಲ್ಲಿ ಒಂದು ತಿಂಗಳು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಗೃಹಬಂಧನದಲ್ಲಿಟ್ಟು, ಹಂತ ಹಂತವಾಗಿ ಅವರ ಖಾತೆಗಳಿಂದ ತನ್ನ ಬೇರೆ ಬೇರೆ ಖಾತೆಗೆ ಬೃಹತ್ ಮೊತ್ತವನ್ನು ವಂಚಕನು ವರ್ಗಾಯಿಸಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<p>ಮುಂಬೈನ ಪೊಲೀಸ್ ಅಧಿಕಾರಿ ಎಂದು ಆಗಸ್ಟ್ 4ರಂದು ಕರೆ ಮಾಡಿದ್ದ ಸೈಬರ್ ವಂಚಕನು, ಮಾದಕವಸ್ತು ಕಳ್ಳಸಾಗಣೆ ದಂಧೆ ಹೆಸರಿನಲ್ಲಿ ನಿವೃತ್ತ ಅಧಿಕಾರಿಯನ್ನು ಹೆದರಿಸಿದ್ದ. ನಂತರ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಂಚಕರು ಬ್ಯಾಂಕ್ರ್ನನ್ನು ಸಂಪರ್ಕಿಸಿದ್ದಾರೆ. ಈ ವಿಷಯ ಬಹಿರಂಗವಾದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೆ. 4ರವರೆಗೂ ಕಿರುಕುಳ ನೀಡಿದ್ದಾರೆ. ಹಂತ ಹಂತವಾಗಿ ವಿವಿಧ ಖಾತೆಗಳಿಗೆ ಹಣ ಹಾಕಿಸಿಕೊಂಡಿದ್ದಾರೆ.</p>.<p>ವಂಚನೆಗೆ ಒಳಗಾಗಿರುವುದು ಅರಿವಾಗುತ್ತಿದ್ದಂತೆ, ಸೆ.19ರಂದು ನಿವೃತ್ತ ಬ್ಯಾಂಕರ್ ಎನ್ಸಿಆರ್ಪಿ ಪೋರ್ಟಲ್ನಲ್ಲಿ ದೂರು ದಾಖಲಿಸಿದರು.</p>.<p>ಎಫ್ಐಆರ್ ದಾಖಲಿಸಿಕೊಂಡ ಐಎಫ್ಎಸ್ಒ ಘಟಕವು, ವಂಚಕರ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ₹12.11 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತನಿಖೆಯ ಜಾಡು ತಪ್ಪಿಸಲಿಕ್ಕಾಗಿಯೇ ವಂಚಕರು ದೇಶದ ವಿವಿಧ ಭಾಗಗಳಲ್ಲಿ ಹಣವನ್ನು ನಗದೀಕರಿಸಿಕೊಂಡಿದ್ದಾರೆ. ಹಲವು ತಂಡಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>