ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರನ್ನು ಕಣಕ್ಕಿಳಿಸುವುದು ಗಾಂಧಿ ಕುಟುಂಬದ ನಿರ್ಧಾರವಾಗಿತ್ತು. ಆದರೆ, ಈ ಮಧ್ಯೆ ರಾಜಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆಯಬೇಕಿದ್ದ ಪಕ್ಷದ ಶಾಸಕಾಂಗ ಸಭೆ ಧಿಕ್ಕರಿಸಿ ಬಂಡಾಯ ಶಾಸಕರು ಮತ್ತೊಂದು ಸಭೆ ನಡೆಸಿ, ಗೆಹಲೋತ್ ಪಕ್ಷದ ಅಧ್ಯಕ್ಷ ಹುದ್ದೆ ಅಲಂಕರಿಸುವುದರ ವಿರುದ್ಧ ತಮ್ಮ ಅಸಮಾಧಾನ ತೋರ್ಪಡಿಸಿದ್ದರು.