<p><strong>ನವದೆಹಲಿ:</strong> ಕೌಶಲಾಭಿವೃದ್ಧಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅಂಗವಿಕಲರು ಆಧಾರ್ ಸಂಖ್ಯೆ ಅಥವಾ ಅದಕ್ಕೆ ಅರ್ಜಿ ಸಲ್ಲಿಸಿದ ದಾಖಲೆ ನೀಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.</p><p>ಆಧಾರ್ ಇಲ್ಲದಿದ್ದರೆ ಅಥವಾ ದೃಢೀಕರಣ ವಿಫಲವಾದ ಕಾರಣಕ್ಕೆ ಯಾವುದೇ ಅಂಗವಿಕಲ ಮಕ್ಕಳನ್ನು ಸೌಲಭ್ಯದಿಂದ ವಂಚಿತಗೊಳಿಸುವುದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ತಿಳಿಸಿದೆ.</p><p>ಪ್ರಯಾಣ ಮತ್ತು ವಸತಿ ಭತ್ಯೆ, ನೇಮಕಾತಿ ಬಳಿಕದ ನೆರವು ಸೇರಿದಂತೆ ನಗದು ಸೌಲಭ್ಯಗಳನ್ನು ಪಡೆಯಲು ಆಧಾರ್ ದೃಢೀಕರಣ ಅತ್ಯಗತ್ಯವಾಗಿರುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.</p><p>ಅಂಗವಿಕಲರ ಕೌಶಲಭಿವೃದ್ಧಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ (ಎನ್ಎಪಿ–ಎಸ್ಡಿಪಿ)ಯನ್ನು 2015ರಲ್ಲಿ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಅಂಗವಿಕಲರಿಗೆ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡಿ ಅವರು ಉದ್ಯೋಗ ಪಡೆಯುವಂತೆ ಮಾಡಲಾಗುತ್ತದೆ. ಅಂಗವಿಕಲರಿಗಾಗಿ ಆಧಾರ್ ನೋಂದಣಿ ಕೇಂದ್ರ ತೆರೆಯುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ಸಚಿವಾಲಯ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೌಶಲಾಭಿವೃದ್ಧಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅಂಗವಿಕಲರು ಆಧಾರ್ ಸಂಖ್ಯೆ ಅಥವಾ ಅದಕ್ಕೆ ಅರ್ಜಿ ಸಲ್ಲಿಸಿದ ದಾಖಲೆ ನೀಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.</p><p>ಆಧಾರ್ ಇಲ್ಲದಿದ್ದರೆ ಅಥವಾ ದೃಢೀಕರಣ ವಿಫಲವಾದ ಕಾರಣಕ್ಕೆ ಯಾವುದೇ ಅಂಗವಿಕಲ ಮಕ್ಕಳನ್ನು ಸೌಲಭ್ಯದಿಂದ ವಂಚಿತಗೊಳಿಸುವುದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ತಿಳಿಸಿದೆ.</p><p>ಪ್ರಯಾಣ ಮತ್ತು ವಸತಿ ಭತ್ಯೆ, ನೇಮಕಾತಿ ಬಳಿಕದ ನೆರವು ಸೇರಿದಂತೆ ನಗದು ಸೌಲಭ್ಯಗಳನ್ನು ಪಡೆಯಲು ಆಧಾರ್ ದೃಢೀಕರಣ ಅತ್ಯಗತ್ಯವಾಗಿರುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.</p><p>ಅಂಗವಿಕಲರ ಕೌಶಲಭಿವೃದ್ಧಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ (ಎನ್ಎಪಿ–ಎಸ್ಡಿಪಿ)ಯನ್ನು 2015ರಲ್ಲಿ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಅಂಗವಿಕಲರಿಗೆ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡಿ ಅವರು ಉದ್ಯೋಗ ಪಡೆಯುವಂತೆ ಮಾಡಲಾಗುತ್ತದೆ. ಅಂಗವಿಕಲರಿಗಾಗಿ ಆಧಾರ್ ನೋಂದಣಿ ಕೇಂದ್ರ ತೆರೆಯುವಂತೆ ಸಂಬಂಧಿಸಿದ ಸಂಸ್ಥೆಗಳಿಗೆ ಸಚಿವಾಲಯ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>