<p><strong>ದೆಹಲಿ:</strong> ಕೋಲಿ ಗಂಗಾಮತ ಸಮಾಜದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.</p><p>ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರ ಸಮ್ಮುಖದಲ್ಲಿ ಕೇಂದ್ರದ ಹಿರಿಯ ಅಧಿಕಾರಿಗಳು ಮತ್ತು ಸಮುದಾಯದ ನಾಯಕರೊಂದಿಗೆ ಸಭೆ ನಡೆಸಿ ಸಮುದಾಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.</p><p>ದೆಹಲಿಗೆ ನಿಯೋಗ ಬಂದಿದ್ದ ಕೋಲಿ ಗಂಗಾಮತ ಸಮಾಜದ ನಾಯಕರು ತಮ್ಮನ್ನು ಭೇಟಿಯಾಗಿದ್ದು, ಕೇಂದ್ರ ಕೃಷಿ ಭವನದಲ್ಲಿ ಸಭೆ ನಡೆಸಿ, ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಸಚಿವ ಪ್ರಹ್ಲಾದ ಜೋಶಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p><p>ಕೋಲಿ ಗಂಗಾಮತ ಸಮಾಜದ ನಾಯಕರು ತಮ್ಮ ಸಮುದಾಯದ ಅಭಿವೃದ್ಧಿ ಮತ್ತು ಸಮಾಜಕ್ಕೆ ಸಿಗಬೇಕಾದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಗಮನ ಸೆಳೆದಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.</p><p>ದೆಹಲಿಯ ಕೃಷಿ ಭವನದಲ್ಲಿ ಸಚಿವದ್ವಯರನ್ನು ಭೇಟಿ ಮಾಡಿದ ಕೋಲಿ ಗಂಗಾಮತ ಸಮಾಜದ ನಿಯೋಗ ಈ ಮತದ ಅಭಿವೃದ್ಧಿ ಸೇರಿದಂತೆ ಕುಂದು-ಕೊರತೆಗಳ ಬಗ್ಗೆ ಚರ್ಚೆ ನಡೆಸಿ, ತಮ್ಮ ಸಮುದಾಯದ ಅಭಿವೃದ್ಧಿಗೆ ಸ್ಪಂದಿಸುವಂತೆ ಮನವಿ ಮಾಡಿತು.</p><p>ನಿಯೋಗದಲ್ಲಿ ಎನ್. ರವಿಕುಮಾರ್, ಆರ್. ಧರ್ಮಪ್ಪ, ಕೆ. ಶಿವಲಿಂಗಪ್ಪ, ಮಹಾದೇವಪ್ಪ ಕರ್ಜಗಿ, ಅವ್ವಣ್ಣ ಮಾಯಕೇರಿ, ವಿಜಯ್ ಕುಮಾರ್ ಇದ್ದರು. </p><p>ಸಭೆಯಲ್ಲಿ ಸಚಿವರೊಟ್ಟಿಗೆ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ವಿಭು ನಾಯರ್, ಬುಡಕಟ್ಟು ವ್ಯವಹಾರಗಳ ಹೆಚ್ಚುವರಿ ಕಾರ್ಯದರ್ಶಿ ಆರ್. ಜಯ, ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಡಾ. ಬಾಬುಲ್ ರಾಯ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ:</strong> ಕೋಲಿ ಗಂಗಾಮತ ಸಮಾಜದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ.</p><p>ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರ ಸಮ್ಮುಖದಲ್ಲಿ ಕೇಂದ್ರದ ಹಿರಿಯ ಅಧಿಕಾರಿಗಳು ಮತ್ತು ಸಮುದಾಯದ ನಾಯಕರೊಂದಿಗೆ ಸಭೆ ನಡೆಸಿ ಸಮುದಾಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.</p><p>ದೆಹಲಿಗೆ ನಿಯೋಗ ಬಂದಿದ್ದ ಕೋಲಿ ಗಂಗಾಮತ ಸಮಾಜದ ನಾಯಕರು ತಮ್ಮನ್ನು ಭೇಟಿಯಾಗಿದ್ದು, ಕೇಂದ್ರ ಕೃಷಿ ಭವನದಲ್ಲಿ ಸಭೆ ನಡೆಸಿ, ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಸಚಿವ ಪ್ರಹ್ಲಾದ ಜೋಶಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.</p><p>ಕೋಲಿ ಗಂಗಾಮತ ಸಮಾಜದ ನಾಯಕರು ತಮ್ಮ ಸಮುದಾಯದ ಅಭಿವೃದ್ಧಿ ಮತ್ತು ಸಮಾಜಕ್ಕೆ ಸಿಗಬೇಕಾದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಗಮನ ಸೆಳೆದಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.</p><p>ದೆಹಲಿಯ ಕೃಷಿ ಭವನದಲ್ಲಿ ಸಚಿವದ್ವಯರನ್ನು ಭೇಟಿ ಮಾಡಿದ ಕೋಲಿ ಗಂಗಾಮತ ಸಮಾಜದ ನಿಯೋಗ ಈ ಮತದ ಅಭಿವೃದ್ಧಿ ಸೇರಿದಂತೆ ಕುಂದು-ಕೊರತೆಗಳ ಬಗ್ಗೆ ಚರ್ಚೆ ನಡೆಸಿ, ತಮ್ಮ ಸಮುದಾಯದ ಅಭಿವೃದ್ಧಿಗೆ ಸ್ಪಂದಿಸುವಂತೆ ಮನವಿ ಮಾಡಿತು.</p><p>ನಿಯೋಗದಲ್ಲಿ ಎನ್. ರವಿಕುಮಾರ್, ಆರ್. ಧರ್ಮಪ್ಪ, ಕೆ. ಶಿವಲಿಂಗಪ್ಪ, ಮಹಾದೇವಪ್ಪ ಕರ್ಜಗಿ, ಅವ್ವಣ್ಣ ಮಾಯಕೇರಿ, ವಿಜಯ್ ಕುಮಾರ್ ಇದ್ದರು. </p><p>ಸಭೆಯಲ್ಲಿ ಸಚಿವರೊಟ್ಟಿಗೆ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ವಿಭು ನಾಯರ್, ಬುಡಕಟ್ಟು ವ್ಯವಹಾರಗಳ ಹೆಚ್ಚುವರಿ ಕಾರ್ಯದರ್ಶಿ ಆರ್. ಜಯ, ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಡಾ. ಬಾಬುಲ್ ರಾಯ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>