’ಉನ್ನತ ಮಟ್ಟದ ಚರ್ಚೆಗಳು ನಡೆಯುತ್ತಿರುವುದರಿಂದ 15 ದಿವಸ ಅಥವಾ ತಿಂಗಳೊಳಗೆ ಗಣಿಯ ಕಾರ್ಯಾಚರಣೆ ಪುನರಾರಂಭಗೊಳ್ಳುವ ನಿರೀಕ್ಷೆ ಇದೆ. ಗುತ್ತಿಗೆ ವಿಸ್ತರಣೆಯನ್ನು ರಾಜ್ಯ ಸರ್ಕಾರ ತಡೆ ಹಿಡಿಯುವುದರಲ್ಲಿ ಯಾವುದೇ ಅರ್ಥ ಇಲ್ಲ’ ಎಂದು ಎನ್ಎಂಡಿಸಿ ನಿರ್ದೇಶಕ (ಉತ್ಪಾದನೆ ವಿಭಾಗ) ಪಿ.ಕೆ. ಸತ್ಪತಿ ತಿಳಿಸಿದ್ದಾರೆ.ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಹಮ್ಮಿಕೊಂಡಿದ್ದ ಗಣಿಗಾರಿಕೆ ಶೃಂಗಸಭೆಯಲ್ಲಿ ಅವರು ಮಾತನಾಡಿದರು.