<p><strong>ಬೆಂಗಳೂರು</strong>: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿನ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದರು ಎನ್ನಲಾದ ಇಬ್ಬರು ಆರೋಪಿಗಳು ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದರು.</p><p>ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ದಿಶಾ ಪಟಾನಿ ಅವರ ತಂದೆ ಮಾಜಿ ಸೇನಾಧಿಕಾರಿ ಜಗದೀಶ್ ಪಟಾನಿ ಅವರು ಕ್ರಿಮಿನಲ್ಗಳನ್ನು ಉತ್ತರ ಪ್ರದೇಶ ಸರ್ಕಾರ ಸಹಿಸುವುದಿಲ್ಲ ಎಂಬ ಸಂದೇಶವನ್ನು ಸಿಎಂ ಯೋಗಿ ಅವರು ನೀಡಿದ್ದಾರೆ ಎಂದು ಹೇಳಿದ್ದಾರೆ.</p><p>ಅನವಶ್ಯಕವಾಗಿ ನಮ್ಮ ಮೇಲೆ ದಾಳಿ ಮಾಡಲು ಬಂದವರಿಗೆ ತಕ್ಕ ಶಾಸ್ತಿ ಆಗಿದೆ. ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಲು ಮುಂದಾದಾಗ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಸಮಾಜಘಾತುಕರಿಗೆ ಇದೊಂದು ಎಚ್ಚರಿಕೆ ಎಂದು ಅವರು ಎನ್ಕೌಂಟರ್ ಅನ್ನು ಸಮರ್ಥಿಸಿಕೊಂಡಿದ್ದಾರೆ.</p><p>ಹರಿಯಾಣದ ರೋಹ್ಟಕ್ ನಿವಾಸಿ ರವೀಂದರ್ ಮತ್ತು ಹರಿಯಾಣದ ಸೋನಿಪತ್ನ ಅರುಣ್ ಮೃತಪಟ್ಟವರು. ಅವರು ರೋಹಿತ್ ಗೋದಾರ–ಗೋಲ್ಡಿ ಬ್ರಾರ್ನ ಗ್ಯಾಂಗ್ಸ್ಟರ್ ಗುಂಪಿನ ಸಕ್ರಿಯ ಸದಸ್ಯರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು.</p><p>ಗಾಜಿಯಾಬಾದ್ನ ಟ್ರೊನಿಕಾ ಸಿಟಿ ಬಳಿ ದೆಹಲಿ ಪೊಲೀಸ್ ವಿಶೇಷ ಘಟಕ, ಉತ್ತರ ಪ್ರದೇಶ ಮತ್ತು ಹರಿಯಾಣದ ವಿಶೇಷ ಕಾರ್ಯಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಈ ಎನ್ಕೌಂಟರ್ ನಡೆಸಿವೆ. ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ: ಎನ್ಕೌಂಟರ್ನಲ್ಲಿ ಇಬ್ಬರ ಹತ್ಯೆ.ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿನ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದರು ಎನ್ನಲಾದ ಇಬ್ಬರು ಆರೋಪಿಗಳು ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದರು.</p><p>ಪೊಲೀಸರ ಕ್ರಮವನ್ನು ಸ್ವಾಗತಿಸಿರುವ ದಿಶಾ ಪಟಾನಿ ಅವರ ತಂದೆ ಮಾಜಿ ಸೇನಾಧಿಕಾರಿ ಜಗದೀಶ್ ಪಟಾನಿ ಅವರು ಕ್ರಿಮಿನಲ್ಗಳನ್ನು ಉತ್ತರ ಪ್ರದೇಶ ಸರ್ಕಾರ ಸಹಿಸುವುದಿಲ್ಲ ಎಂಬ ಸಂದೇಶವನ್ನು ಸಿಎಂ ಯೋಗಿ ಅವರು ನೀಡಿದ್ದಾರೆ ಎಂದು ಹೇಳಿದ್ದಾರೆ.</p><p>ಅನವಶ್ಯಕವಾಗಿ ನಮ್ಮ ಮೇಲೆ ದಾಳಿ ಮಾಡಲು ಬಂದವರಿಗೆ ತಕ್ಕ ಶಾಸ್ತಿ ಆಗಿದೆ. ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಲು ಮುಂದಾದಾಗ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಸಮಾಜಘಾತುಕರಿಗೆ ಇದೊಂದು ಎಚ್ಚರಿಕೆ ಎಂದು ಅವರು ಎನ್ಕೌಂಟರ್ ಅನ್ನು ಸಮರ್ಥಿಸಿಕೊಂಡಿದ್ದಾರೆ.</p><p>ಹರಿಯಾಣದ ರೋಹ್ಟಕ್ ನಿವಾಸಿ ರವೀಂದರ್ ಮತ್ತು ಹರಿಯಾಣದ ಸೋನಿಪತ್ನ ಅರುಣ್ ಮೃತಪಟ್ಟವರು. ಅವರು ರೋಹಿತ್ ಗೋದಾರ–ಗೋಲ್ಡಿ ಬ್ರಾರ್ನ ಗ್ಯಾಂಗ್ಸ್ಟರ್ ಗುಂಪಿನ ಸಕ್ರಿಯ ಸದಸ್ಯರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು.</p><p>ಗಾಜಿಯಾಬಾದ್ನ ಟ್ರೊನಿಕಾ ಸಿಟಿ ಬಳಿ ದೆಹಲಿ ಪೊಲೀಸ್ ವಿಶೇಷ ಘಟಕ, ಉತ್ತರ ಪ್ರದೇಶ ಮತ್ತು ಹರಿಯಾಣದ ವಿಶೇಷ ಕಾರ್ಯಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಈ ಎನ್ಕೌಂಟರ್ ನಡೆಸಿವೆ. ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ: ಎನ್ಕೌಂಟರ್ನಲ್ಲಿ ಇಬ್ಬರ ಹತ್ಯೆ.ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>