<p><strong>ಮುಂಬೈ</strong>: ನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಒತ್ತಾಯಿಸಿರುವ ದಿಶಾ ಸಾಲಿಯನ್ ಅವರ ತಂದೆ ಸತೀಶ್ ಸಾಲಿಯನ್, ಶಿವಸೇನೆಯ (ಯುಬಿಟಿ ನಾಯಕ) ಆದಿತ್ಯ ಠಾಕ್ರೆ, ನಟರಾದ ಸೂರಜ್ ಪಾಂಚೋಲಿ ಮತ್ತು ಡಿನೊ ಮೋರಿಯಾ ಸೇರಿದಂತೆ ಎಲ್ಲ ಆರೋಪಿಗಳಿಗೆ ನಾರ್ಕೊ ಪರೀಕ್ಷೆಗಳನ್ನು ನಡೆಸಬೇಕೆಂದು ಒತ್ತಾಯಿಸಿದ್ದಾರೆ.</p><p>ತಮಗೆ ಮತ್ತು ತಮ್ಮ ವಕೀಲರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ ಅವರು, ಪ್ರಕರಣದಲ್ಲಿ ತಾರ್ಕಿಕ ಅಂತ್ಯಕ್ಕಾಗಿ ಹೋರಾಡುವುದಾಗಿ ಹೇಳಿದ್ದಾರೆ.</p><p>‘ನನ್ನ ಮಗಳಿಗೆ ನ್ಯಾಯ ಒದಗಿಸುವಂತೆ ಮುಂಬೈ ಪೊಲೀಸ್ ಅಧಿಕಾರಿಗಳನ್ನು ನಾನು ಒತ್ತಾಯಿಸಿದ್ದೇನೆ. ಈ ಪ್ರಕರಣದಲ್ಲಿ ಪ್ರಭಾವಿಗಳ ಪಾತ್ರ ಇರುವುದರಿಂದ ನನ್ನ ಮತ್ತು ನನ್ನ ವಕೀಲರಿಗೂ ರಕ್ಷಣೆ ನೀಡಬೇಕೆಂದು ಕೋರಿದ್ದೇನೆ. ನಾನೂ ನಾರ್ಕೊ ಪರೀಕ್ಷೆಗೆ ಸಿದ್ಧನಿದ್ದೇನೆ. ಆದರೆ, ಆದಿತ್ಯ ಠಾಕ್ರೆ, ಸೂರಜ್ ಪಾಂಚೋಲಿ ಮತ್ತು ಡಿನೊ ಮೋರಿಯಾ ಅವರಿಗೂ ನಾರ್ಕೊ ಪರೀಕ್ಷೆ ನಡೆಯಬೇಕು’ಸತೀಶ್ ಎಂದು ಆಗ್ರಹಿಸಿದ್ದಾರೆ.</p><p>ಪ್ರಕರಣದ ತನಿಖೆಯಲ್ಲಿ ಪ್ರಗತಿ ಕಾಣದ ಬಗ್ಗೆ ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದು, ಮಹಾ ವಿಕಾಸ್ ಅಘಾಡಿ ನೇತೃತ್ವದ ಹಿಂದಿನ ಸರ್ಕಾರವು ತನ್ನ 2.5 ವರ್ಷಗಳ ಅವಧಿಯಲ್ಲಿ ನಿಷ್ಕ್ರಿಯವಾಗಿತ್ತು ಎಂದು ಹೇಳಿದ್ದಾರೆ.</p><p>ಎಂವಿಎ 2.5 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಬಳಿಕ, ಎಸ್ಐಟಿಯನ್ನು ಸ್ಥಾಪಿಸಲಾಯಿತು. ಆದರೆ, ಅವರು ಏನನ್ನೂ ಮಾಡಲಿಲ್ಲ. ನಂತರ, ನಾನು ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಬೇಕಾಯಿತು. ನಮಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದು ಸತೀಶ್ ಹೇಳಿದ್ದಾರೆ.</p>. <p>ನ್ಯಾಯಾಂಗದ ಮೇಲಿನ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದ ಅವರು, ನ್ಯಾಯ ಸಿಗುವವರೆಗೂ ತಾನು ವಿಶ್ರಮಿಸುವುದಿಲ್ಲ ಎಂದು ಹೇಳಿದ್ದಾರೆ.</p><p>ದಿಶಾ ಹಠಾತ್ ನಿಧನದ ಐದು ವರ್ಷಗಳ ನಂತರ ತಮ್ಮ ಮಗಳ ಹತ್ಯೆ ಪ್ರಕರಣದ ತನಿಖೆಯನ್ನು ಪುನರ್ ಆರಂಭಿಸುವಂತೆ ಹೊಸ ದೂರು ದಾಖಲಿಸಿದ್ದಾರೆ. ಬಳಿಕ, ಮುಂಬೈ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ.</p><p>ಅಲ್ಲದೆ, ವಕೀಲ ನಿಲೇಶ್ ಸಿ ಓಜಾ, ಜಂಟಿ ಆಯುಕ್ತರಾದ ಲಕ್ಷ್ಮಿ ಗೌತಮ್ ಅವರನ್ನು ಭೇಟಿಯಾಗಿ ದಿಶಾ ಸಾಲಿಯಾನ್ ಹತ್ಯೆ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಕುರಿತು ಚರ್ಚಿಸಿದರು.</p><p>ಆದಿತ್ಯ ಠಾಕ್ರೆ, ಸೂರಜ್ ಪಂಚೋಲಿ, ಡಿನೊ ಮೊರಿಯಾ ಮತ್ತು ಆದಿತ್ಯ ಠಾಕ್ರೆ ಅವರ ಅಂಗರಕ್ಷಕ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ದಾಖಲಾಗಿರುವ ದೂರಿನ ತನಿಖೆ 15 ತಿಂಗಳಿನಿಂದ ಸ್ಥಗಿತಗೊಂಡಿದೆ.</p><p>ಸೆಲೆಬ್ರಿಟಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್, ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿ ಗುರುತಿಸಿಕೊಂಡಿದ್ದರು. </p><p>2020ರ ಜೂನ್ 8 ರಂದು ದಿಶಾ, ಮುಂಬೈನ ಮಲಾಡ್ನಲ್ಲಿರುವ ವಸತಿ ಕಟ್ಟಡದ 14ನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದರು. 2023ರಲ್ಲಿ, ಮುಂಬೈ ಪೊಲೀಸರ ವಿಶೇಷ ತನಿಖಾ ತಂಡ ಇದು ಆಕಸ್ಮಿಕ ಸಾವು ಎಂದು ತನಿಖಾ ವರದಿ ಸಲ್ಲಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಒತ್ತಾಯಿಸಿರುವ ದಿಶಾ ಸಾಲಿಯನ್ ಅವರ ತಂದೆ ಸತೀಶ್ ಸಾಲಿಯನ್, ಶಿವಸೇನೆಯ (ಯುಬಿಟಿ ನಾಯಕ) ಆದಿತ್ಯ ಠಾಕ್ರೆ, ನಟರಾದ ಸೂರಜ್ ಪಾಂಚೋಲಿ ಮತ್ತು ಡಿನೊ ಮೋರಿಯಾ ಸೇರಿದಂತೆ ಎಲ್ಲ ಆರೋಪಿಗಳಿಗೆ ನಾರ್ಕೊ ಪರೀಕ್ಷೆಗಳನ್ನು ನಡೆಸಬೇಕೆಂದು ಒತ್ತಾಯಿಸಿದ್ದಾರೆ.</p><p>ತಮಗೆ ಮತ್ತು ತಮ್ಮ ವಕೀಲರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ ಅವರು, ಪ್ರಕರಣದಲ್ಲಿ ತಾರ್ಕಿಕ ಅಂತ್ಯಕ್ಕಾಗಿ ಹೋರಾಡುವುದಾಗಿ ಹೇಳಿದ್ದಾರೆ.</p><p>‘ನನ್ನ ಮಗಳಿಗೆ ನ್ಯಾಯ ಒದಗಿಸುವಂತೆ ಮುಂಬೈ ಪೊಲೀಸ್ ಅಧಿಕಾರಿಗಳನ್ನು ನಾನು ಒತ್ತಾಯಿಸಿದ್ದೇನೆ. ಈ ಪ್ರಕರಣದಲ್ಲಿ ಪ್ರಭಾವಿಗಳ ಪಾತ್ರ ಇರುವುದರಿಂದ ನನ್ನ ಮತ್ತು ನನ್ನ ವಕೀಲರಿಗೂ ರಕ್ಷಣೆ ನೀಡಬೇಕೆಂದು ಕೋರಿದ್ದೇನೆ. ನಾನೂ ನಾರ್ಕೊ ಪರೀಕ್ಷೆಗೆ ಸಿದ್ಧನಿದ್ದೇನೆ. ಆದರೆ, ಆದಿತ್ಯ ಠಾಕ್ರೆ, ಸೂರಜ್ ಪಾಂಚೋಲಿ ಮತ್ತು ಡಿನೊ ಮೋರಿಯಾ ಅವರಿಗೂ ನಾರ್ಕೊ ಪರೀಕ್ಷೆ ನಡೆಯಬೇಕು’ಸತೀಶ್ ಎಂದು ಆಗ್ರಹಿಸಿದ್ದಾರೆ.</p><p>ಪ್ರಕರಣದ ತನಿಖೆಯಲ್ಲಿ ಪ್ರಗತಿ ಕಾಣದ ಬಗ್ಗೆ ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದು, ಮಹಾ ವಿಕಾಸ್ ಅಘಾಡಿ ನೇತೃತ್ವದ ಹಿಂದಿನ ಸರ್ಕಾರವು ತನ್ನ 2.5 ವರ್ಷಗಳ ಅವಧಿಯಲ್ಲಿ ನಿಷ್ಕ್ರಿಯವಾಗಿತ್ತು ಎಂದು ಹೇಳಿದ್ದಾರೆ.</p><p>ಎಂವಿಎ 2.5 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಬಳಿಕ, ಎಸ್ಐಟಿಯನ್ನು ಸ್ಥಾಪಿಸಲಾಯಿತು. ಆದರೆ, ಅವರು ಏನನ್ನೂ ಮಾಡಲಿಲ್ಲ. ನಂತರ, ನಾನು ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಬೇಕಾಯಿತು. ನಮಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ ಎಂದು ಸತೀಶ್ ಹೇಳಿದ್ದಾರೆ.</p>. <p>ನ್ಯಾಯಾಂಗದ ಮೇಲಿನ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದ ಅವರು, ನ್ಯಾಯ ಸಿಗುವವರೆಗೂ ತಾನು ವಿಶ್ರಮಿಸುವುದಿಲ್ಲ ಎಂದು ಹೇಳಿದ್ದಾರೆ.</p><p>ದಿಶಾ ಹಠಾತ್ ನಿಧನದ ಐದು ವರ್ಷಗಳ ನಂತರ ತಮ್ಮ ಮಗಳ ಹತ್ಯೆ ಪ್ರಕರಣದ ತನಿಖೆಯನ್ನು ಪುನರ್ ಆರಂಭಿಸುವಂತೆ ಹೊಸ ದೂರು ದಾಖಲಿಸಿದ್ದಾರೆ. ಬಳಿಕ, ಮುಂಬೈ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ.</p><p>ಅಲ್ಲದೆ, ವಕೀಲ ನಿಲೇಶ್ ಸಿ ಓಜಾ, ಜಂಟಿ ಆಯುಕ್ತರಾದ ಲಕ್ಷ್ಮಿ ಗೌತಮ್ ಅವರನ್ನು ಭೇಟಿಯಾಗಿ ದಿಶಾ ಸಾಲಿಯಾನ್ ಹತ್ಯೆ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಕುರಿತು ಚರ್ಚಿಸಿದರು.</p><p>ಆದಿತ್ಯ ಠಾಕ್ರೆ, ಸೂರಜ್ ಪಂಚೋಲಿ, ಡಿನೊ ಮೊರಿಯಾ ಮತ್ತು ಆದಿತ್ಯ ಠಾಕ್ರೆ ಅವರ ಅಂಗರಕ್ಷಕ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ದಾಖಲಾಗಿರುವ ದೂರಿನ ತನಿಖೆ 15 ತಿಂಗಳಿನಿಂದ ಸ್ಥಗಿತಗೊಂಡಿದೆ.</p><p>ಸೆಲೆಬ್ರಿಟಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್, ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿ ಗುರುತಿಸಿಕೊಂಡಿದ್ದರು. </p><p>2020ರ ಜೂನ್ 8 ರಂದು ದಿಶಾ, ಮುಂಬೈನ ಮಲಾಡ್ನಲ್ಲಿರುವ ವಸತಿ ಕಟ್ಟಡದ 14ನೇ ಮಹಡಿಯಿಂದ ಬಿದ್ದು ಸಾವಿಗೀಡಾಗಿದ್ದರು. 2023ರಲ್ಲಿ, ಮುಂಬೈ ಪೊಲೀಸರ ವಿಶೇಷ ತನಿಖಾ ತಂಡ ಇದು ಆಕಸ್ಮಿಕ ಸಾವು ಎಂದು ತನಿಖಾ ವರದಿ ಸಲ್ಲಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>