ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾ, ಯಮುನೆಗೆ ಪೂಜೆ: ಮಾಲಿನ್ಯ ನಿಯಂತ್ರಣ ಮಂಡಳಿಗಳ ಪ್ರತಿಕ್ರಿಯೆ ಕೇಳಿದ NGT

Published 25 ಮಾರ್ಚ್ 2024, 11:29 IST
Last Updated 25 ಮಾರ್ಚ್ 2024, 11:29 IST
ಅಕ್ಷರ ಗಾತ್ರ

ನವದೆಹಲಿ: ಗಂಗಾ ಮತ್ತು ಯಮುನಾ ನದಿಗಳಿಗೆ ಪೂಜೆ ಸಲ್ಲಿಸುವ ಕುರಿತು ನಾಲ್ಕು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ (DPCC) ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ( UPPCB) ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಸೂಚನೆ ನೀಡಿದೆ.

ಎರಡು ನದಿಗಳ ಘಾಟ್‌ಗಳಲ್ಲಿ ಪಾಲಿಥಿನ್ ಕವರ್‌ಗಳಲ್ಲಿ ಪೂಜೆಗೆ ಅರ್ಪಿಸಿದ ಹೂವುಗಳು ಮತ್ತು ಹೂಮಾಲೆಗಳನ್ನು ಎಸೆದ ಕಾರಣದಿಂದ ಎರಡು ನದಿಗಳಲ್ಲಿ ಮಾಲಿನ್ಯದ ಕುರಿತು ಪತ್ರಿಕೆಯ ವರದಿಯನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ನ್ಯಾಯಮಂಡಳಿಯು ವಿಚಾರಣೆ ನಡೆಸಿತು .

ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು ಡಿಪಿಸಿಸಿ ಪರ ವಕೀಲರು ಈ ವಿಷಯದ ಬಗ್ಗೆ ಸಮಿತಿಯ ಪ್ರತಿಕ್ರಿಯೆಯನ್ನು ನೀಡಲು ವಿಫಲರಾಗಿದ್ದಾರೆ ಎಂದು ಹೇಳಿದರು.

ನಾಲ್ಕು ವಾರಗಳಲ್ಲಿ ಹೊಸದಾಗಿ ಪ್ರತಿಕ್ರಿಯೆ ನೀಡುವಂತೆ ಪೀಠ ಸೂಚಿಸಿದೆ. ನ್ಯಾಯಾಂಗ ಸದಸ್ಯ ಸುಧೀರ್ ಅಗರವಾಲ್ ಹಾಗೂ ತಜ್ಞ ಸದಸ್ಯ ಸೆಂಥಿಲ್ ಅವರು ಕೂಡ ಈ ಪೀಠದ ಭಾಗವಾಗಿದ್ದಾರೆ.

ಮುಂದಿನ ವಿಚಾರಣೆಯನ್ನು ನ್ಯಾಯಮಂಡಳಿ ಜುಲೈ 3ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT