<p class="title"><strong>ನವದೆಹಲಿ </strong>(ಪಿಟಿಐ); ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿರುವುದು ಮತ್ತು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಕಾನೂನಿನಲ್ಲಿರುವ ನ್ಯೂನತೆ ತೋರಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಬುಧವಾರ ಹೇಳಿದ್ದಾರೆ.</p>.<p class="title">ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಈ ನ್ಯೂನತೆಯು ಭಾರತೀಯ ನ್ಯಾಯಾಂಗ ವ್ಯವಸ್ಥೆಗೂ ಅಗ್ನಿ ಪರೀಕ್ಷೆ ಆಗಿದ್ದು, ಅದನ್ನು ಸರಿಪಡಿಸುವ ಭರವಸೆ ಇದೆ ಎಂದು ಹೇಳಿದರು.</p>.<p class="title">ಸೂರತ್ ನ್ಯಾಯಾಲಯವು ಮಾನಹಾನಿ ಪ್ರಕರಣದಲ್ಲಿ ರಾಹುಲ್ಗೆ ಎರಡು ವರ್ಷ ಶಿಕ್ಷೆ ವಿಧಿಸಿರುವುದು ಹಾಗೂ ಅವರ ಅನರ್ಹತೆ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ. ಆದರೆ, ಕಾನೂನು ಮತ್ತು ಸಂವಿಧಾನದಲ್ಲಿಯೇ ನ್ಯೂನತೆ ಇದೆ ಎಂದು ಪುನರುಚ್ಚರಿಸಿದರು. </p>.<p class="title">ಇದೇ ಮಾನದಂಡ ಅನ್ವಯಿಸಿದ್ದರೆ, ಬಹುಶಃ ಭಾರತೀಯ ಸಂಸತ್ತು ಟೊಳ್ಳಾಗಿರುತ್ತಿತ್ತು. ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ದಶಕಗಳಿಂದ ಸಂಸತ್ನಿಂದ ಹೊರಗುಳಿಯುತ್ತಿದ್ದರು. ಆದರೆ ಹಾಗಾಗಲಿಲ್ಲ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ </strong>(ಪಿಟಿಐ); ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿರುವುದು ಮತ್ತು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಕಾನೂನಿನಲ್ಲಿರುವ ನ್ಯೂನತೆ ತೋರಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಬುಧವಾರ ಹೇಳಿದ್ದಾರೆ.</p>.<p class="title">ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಈ ನ್ಯೂನತೆಯು ಭಾರತೀಯ ನ್ಯಾಯಾಂಗ ವ್ಯವಸ್ಥೆಗೂ ಅಗ್ನಿ ಪರೀಕ್ಷೆ ಆಗಿದ್ದು, ಅದನ್ನು ಸರಿಪಡಿಸುವ ಭರವಸೆ ಇದೆ ಎಂದು ಹೇಳಿದರು.</p>.<p class="title">ಸೂರತ್ ನ್ಯಾಯಾಲಯವು ಮಾನಹಾನಿ ಪ್ರಕರಣದಲ್ಲಿ ರಾಹುಲ್ಗೆ ಎರಡು ವರ್ಷ ಶಿಕ್ಷೆ ವಿಧಿಸಿರುವುದು ಹಾಗೂ ಅವರ ಅನರ್ಹತೆ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ. ಆದರೆ, ಕಾನೂನು ಮತ್ತು ಸಂವಿಧಾನದಲ್ಲಿಯೇ ನ್ಯೂನತೆ ಇದೆ ಎಂದು ಪುನರುಚ್ಚರಿಸಿದರು. </p>.<p class="title">ಇದೇ ಮಾನದಂಡ ಅನ್ವಯಿಸಿದ್ದರೆ, ಬಹುಶಃ ಭಾರತೀಯ ಸಂಸತ್ತು ಟೊಳ್ಳಾಗಿರುತ್ತಿತ್ತು. ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ದಶಕಗಳಿಂದ ಸಂಸತ್ನಿಂದ ಹೊರಗುಳಿಯುತ್ತಿದ್ದರು. ಆದರೆ ಹಾಗಾಗಲಿಲ್ಲ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>