<p><strong>ನವದೆಹಲಿ</strong>: ಚುನಾವಣೆ ಸಂದರ್ಭ ರಾಜಕೀಯ ಪಕ್ಷಗಳು ಜನರಿಗೆ ನೀಡುವ ಉಚಿತ ಕೊಡುಗೆಗಳ ಭರವಸೆ ಮತ್ತು ಅವುಗಳ ವಿತರಣೆ ಗಂಭೀರ ವಿಷಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಉಚಿತ ಕೊಡುಗೆಗಳನ್ನು ನೀಡುವ ಬದಲು ಆ ಹಣವನ್ನು ಮೂಲ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಬೇಕು ಎಂದು ನ್ಯಾಯಾಲಯ ಹೇಳಿದೆ.</p>.<p>ಈ ಮಧ್ಯೆ, ಕಲ್ಯಾಣ ಯೋಜನೆಗಳು ಮತ್ತು ಉಚಿತ ಕೊಡುಗೆಗಳ ನಡುವೆ ವ್ಯತ್ಯಾಸವಿದೆ ಎಂದು ಸುಪ್ರೀಂ ಕೋರ್ಟ್ಗೆ ಎಎಪಿ ತಿಳಿಸಿದೆ.</p>.<p>ಆರ್ಥಿಕತೆಯಿಂದ ಹಣದ ನಷ್ಟವಾಗುತ್ತಿದೆ ಮತ್ತು ಅದನ್ನು ಜನರ ಕಲ್ಯಾಣಕ್ಕಾಗಿ ಸಮತೋಲನಗೊಳಿಸಬೇಕು ಎಂದು ಕೋರ್ಟ್ ಹೇಳಿದೆ.</p>.<p>ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಮೂಲಕ ಮತದಾರರಿಗೆರಿಗೆ ಆಮಿಷ ಒಡ್ಡುವುದಕ್ಕೆ ತಡೆ ಹಾಕಬೇಕೆಂದು ಕೋರಿ, ವಕೀಲ ಅಶ್ವಿನಿ ಉಪಾಧ್ಯಾಯ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೀಠವು ನಡೆಸಿತು.</p>.<p>ಚುನಾವಣಾ ಪ್ರಣಾಳಿಕೆಯನ್ನು ನಿಯಂತ್ರಿಸಲು ಮತ್ತು ಅದರಲ್ಲಿ ನೀಡಿದ ಭರವಸೆಗಳಿಗೆ ರಾಜಕೀಯ ಪಕ್ಷಗಳನ್ನು ಹೊಣೆಗಾರರನ್ನಾಗಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅರ್ಜಿಯಲ್ಲಿ ಕೇಳಲಾಗಿತ್ತು.</p>.<p>‘ಇದು ಸಮಸ್ಯೆಯಲ್ಲ ಎಂದು ಯಾರೂ ಹೇಳುವುದಿಲ್ಲ. ಇದು ಗಂಭೀರ ಸಮಸ್ಯೆಯಾಗಿದೆ. ಉಚಿತ ಕೊಡುಗೆಗಳನ್ನು ಪಡೆಯುತ್ತಿರುವವರೂ ಅದನ್ನು ಬಯಸುತ್ತಾರೆ. ಉಚಿತ ಕೊಡುಗೆಗಳ ವಿಚಾರವಾಗಿ ಜನರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕೆಲವರು ಹೇಳಬಹುದು. ಆದರೆ, ಆ ತೆರಿಗೆ ಹಣವನ್ನು ಅಭಿವೃದ್ಧಿ ಪ್ರಕ್ರಿಯೆಗೆ ಬಳಸಬೇಕು. ಆದ್ದರಿಂದ, ಇದು ಗಂಭೀರ ಸಮಸ್ಯೆಯಾಗಿದೆ. ಹಾಗಾಗಿ, ಎರಡೂ ಕಡೆಯವರ ವಾದವನ್ನು ಆಲಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಹೇಳಿದ್ದಾರೆ.</p>.<p>ಈ ನಡುವೆ ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣೆ ಸಂದರ್ಭ ರಾಜಕೀಯ ಪಕ್ಷಗಳು ಜನರಿಗೆ ನೀಡುವ ಉಚಿತ ಕೊಡುಗೆಗಳ ಭರವಸೆ ಮತ್ತು ಅವುಗಳ ವಿತರಣೆ ಗಂಭೀರ ವಿಷಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಉಚಿತ ಕೊಡುಗೆಗಳನ್ನು ನೀಡುವ ಬದಲು ಆ ಹಣವನ್ನು ಮೂಲ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಬೇಕು ಎಂದು ನ್ಯಾಯಾಲಯ ಹೇಳಿದೆ.</p>.<p>ಈ ಮಧ್ಯೆ, ಕಲ್ಯಾಣ ಯೋಜನೆಗಳು ಮತ್ತು ಉಚಿತ ಕೊಡುಗೆಗಳ ನಡುವೆ ವ್ಯತ್ಯಾಸವಿದೆ ಎಂದು ಸುಪ್ರೀಂ ಕೋರ್ಟ್ಗೆ ಎಎಪಿ ತಿಳಿಸಿದೆ.</p>.<p>ಆರ್ಥಿಕತೆಯಿಂದ ಹಣದ ನಷ್ಟವಾಗುತ್ತಿದೆ ಮತ್ತು ಅದನ್ನು ಜನರ ಕಲ್ಯಾಣಕ್ಕಾಗಿ ಸಮತೋಲನಗೊಳಿಸಬೇಕು ಎಂದು ಕೋರ್ಟ್ ಹೇಳಿದೆ.</p>.<p>ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಮೂಲಕ ಮತದಾರರಿಗೆರಿಗೆ ಆಮಿಷ ಒಡ್ಡುವುದಕ್ಕೆ ತಡೆ ಹಾಕಬೇಕೆಂದು ಕೋರಿ, ವಕೀಲ ಅಶ್ವಿನಿ ಉಪಾಧ್ಯಾಯ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೀಠವು ನಡೆಸಿತು.</p>.<p>ಚುನಾವಣಾ ಪ್ರಣಾಳಿಕೆಯನ್ನು ನಿಯಂತ್ರಿಸಲು ಮತ್ತು ಅದರಲ್ಲಿ ನೀಡಿದ ಭರವಸೆಗಳಿಗೆ ರಾಜಕೀಯ ಪಕ್ಷಗಳನ್ನು ಹೊಣೆಗಾರರನ್ನಾಗಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅರ್ಜಿಯಲ್ಲಿ ಕೇಳಲಾಗಿತ್ತು.</p>.<p>‘ಇದು ಸಮಸ್ಯೆಯಲ್ಲ ಎಂದು ಯಾರೂ ಹೇಳುವುದಿಲ್ಲ. ಇದು ಗಂಭೀರ ಸಮಸ್ಯೆಯಾಗಿದೆ. ಉಚಿತ ಕೊಡುಗೆಗಳನ್ನು ಪಡೆಯುತ್ತಿರುವವರೂ ಅದನ್ನು ಬಯಸುತ್ತಾರೆ. ಉಚಿತ ಕೊಡುಗೆಗಳ ವಿಚಾರವಾಗಿ ಜನರು ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕೆಲವರು ಹೇಳಬಹುದು. ಆದರೆ, ಆ ತೆರಿಗೆ ಹಣವನ್ನು ಅಭಿವೃದ್ಧಿ ಪ್ರಕ್ರಿಯೆಗೆ ಬಳಸಬೇಕು. ಆದ್ದರಿಂದ, ಇದು ಗಂಭೀರ ಸಮಸ್ಯೆಯಾಗಿದೆ. ಹಾಗಾಗಿ, ಎರಡೂ ಕಡೆಯವರ ವಾದವನ್ನು ಆಲಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಹೇಳಿದ್ದಾರೆ.</p>.<p>ಈ ನಡುವೆ ನ್ಯಾಯಾಲಯ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>