<p><strong>ನವದೆಹಲಿ:</strong> ದೀಪಾವಳಿ ಹಬ್ಬದ ವೇಳೆ ದೆಹಲಿ-ಎನ್ಸಿಆರ್ ವ್ಯಾಪ್ತಿಯಲ್ಲಿ ಹಸಿರು ಪಟಾಕಿ ಮಾರಾಟ ಮಾಡಲು ಮತ್ತು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. </p><p>ಹಬ್ಬಗಳ ಸಮಯದಲ್ಲಿ ಹಸಿರು ಪಟಾಕಿ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ಕೇಂದ್ರ ಹಾಗೂ ದೆಹಲಿ ಸರ್ಕಾರಗಳು ಸುಪ್ರೀಂ ಕೊರ್ಟ್ಗೆ ಮನವಿ ಮಾಡಿದ್ದವು.</p><p>ಸಿಜೆಐ ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಹಸಿರು ಪಟಾಕಿ ಮೇಲಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ. </p><p>‘ದೀಪಾವಳಿ ಪ್ರಯುಕ್ತ ಅ.18 ರಿಂದ ಅ.21ರವರೆಗೆ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಈ ವೇಳೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಾಲಿನ್ಯ ಮಟ್ಟವನ್ನು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಲಾಗಿದೆ’ ಎಂದು ಸುಪ್ರೀಂ ಕೊರ್ಟ್ ತಿಳಿಸಿದೆ. </p><p>ದೆಹಲಿಯೊಳಗೆ ಅಕ್ರಮವಾಗಿ ಪಟಾಕಿಗಳನ್ನು ತರಲಾಗುತ್ತಿದೆ. ಹಸಿರು ಪಟಾಕಿಗಳಿಗಿಂತ ಅವು ಪರಿಸರಕ್ಕೆ ಹೆಚ್ಚಿನ ಹಾನಿ ಮಾಡುತ್ತವೆ. ಪರಿಸರಕ್ಕೆ ಹಾನಿಯಾಗದ ರೀತಿಯ ಕ್ರಮವನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಸಿಜೆಐ ಬಿ.ಆರ್.ಗವಾಯಿ ತಿಳಿಸಿದ್ದಾರೆ. </p><p>ದೆಹಲಿಯ ಹೊರಗಡೆ ತಯಾರಾಗುವ ಪಟಾಕಿಗಳನ್ನು ಇಲ್ಲಿ ಮಾರುವಂತಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳು ಪತ್ತೆಯಾದರೆ, ಮಾರಾಟಗಾರರ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೀಪಾವಳಿ ಹಬ್ಬದ ವೇಳೆ ದೆಹಲಿ-ಎನ್ಸಿಆರ್ ವ್ಯಾಪ್ತಿಯಲ್ಲಿ ಹಸಿರು ಪಟಾಕಿ ಮಾರಾಟ ಮಾಡಲು ಮತ್ತು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ. </p><p>ಹಬ್ಬಗಳ ಸಮಯದಲ್ಲಿ ಹಸಿರು ಪಟಾಕಿ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ಕೇಂದ್ರ ಹಾಗೂ ದೆಹಲಿ ಸರ್ಕಾರಗಳು ಸುಪ್ರೀಂ ಕೊರ್ಟ್ಗೆ ಮನವಿ ಮಾಡಿದ್ದವು.</p><p>ಸಿಜೆಐ ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಹಸಿರು ಪಟಾಕಿ ಮೇಲಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ. </p><p>‘ದೀಪಾವಳಿ ಪ್ರಯುಕ್ತ ಅ.18 ರಿಂದ ಅ.21ರವರೆಗೆ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಈ ವೇಳೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಾಲಿನ್ಯ ಮಟ್ಟವನ್ನು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಲಾಗಿದೆ’ ಎಂದು ಸುಪ್ರೀಂ ಕೊರ್ಟ್ ತಿಳಿಸಿದೆ. </p><p>ದೆಹಲಿಯೊಳಗೆ ಅಕ್ರಮವಾಗಿ ಪಟಾಕಿಗಳನ್ನು ತರಲಾಗುತ್ತಿದೆ. ಹಸಿರು ಪಟಾಕಿಗಳಿಗಿಂತ ಅವು ಪರಿಸರಕ್ಕೆ ಹೆಚ್ಚಿನ ಹಾನಿ ಮಾಡುತ್ತವೆ. ಪರಿಸರಕ್ಕೆ ಹಾನಿಯಾಗದ ರೀತಿಯ ಕ್ರಮವನ್ನು ನಾವು ಕೈಗೊಳ್ಳುತ್ತಿದ್ದೇವೆ ಎಂದು ಸಿಜೆಐ ಬಿ.ಆರ್.ಗವಾಯಿ ತಿಳಿಸಿದ್ದಾರೆ. </p><p>ದೆಹಲಿಯ ಹೊರಗಡೆ ತಯಾರಾಗುವ ಪಟಾಕಿಗಳನ್ನು ಇಲ್ಲಿ ಮಾರುವಂತಿಲ್ಲ. ಒಂದು ವೇಳೆ ಇಂತಹ ಪ್ರಕರಣಗಳು ಪತ್ತೆಯಾದರೆ, ಮಾರಾಟಗಾರರ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>