<p>ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ನೂತನ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ.</p>.ಸರ್ಕಾರ ರಚಿಸಲು ಡಿಕೆಶಿಗೆ ರಾಜ್ಯಪಾಲರ ಆಹ್ವಾನ: ಜೂನ್ 3ರಂದು ಪ್ರಮಾಣವಚನ.<p>ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ನಮ್ಮ ಮೆಟ್ರೊದಲ್ಲಿ ಮೇ 31ರಂದು ಉಚಿತ ಪ್ರಯಾಣ ಸೌಲಭ್ಯವಿದೆ ಎಂಬುದಾಗಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ತಿಳಿಸಿದೆ.</p>.ಐಪಿಎಲ್ ಫೈನಲ್ ದಿನ RCB ಅಭಿಮಾನಿಗಳಿಗೆ ಮೆಟ್ರೊದಲ್ಲಿ ಉಚಿತ ಸೇವೆ ಎಂಬುದು ನಿಜವಲ್ಲ.<p>ಗತ್ಯವಿದ್ದಲ್ಲಿ ಸಿಂಧೂರ ಕಾರ್ಯಾಚರಣೆ 2.0ಗೆ ನಮ್ಮ ಸಶಸ್ತ್ರ ಪಡೆಗಳು ಸಂಪೂರ್ಣ ಸನ್ನದ್ಧಗೊಂಡಿವೆ' ಎಂದು ಸೇನಾ ಮುಖ್ಯಸ್ಥ ಜನಲರ್ ಉಪೇಂದ್ರ ದ್ವಿವೇದಿ ಅವರು ಶನಿವಾರ ಹೇಳಿದರು. </p>.‘ಸಿಂಧೂರ 2.0’ಗೆ ಭಾರತ ಸನ್ನದ್ಧ: ಸೇನಾ ಮುಖ್ಯಸ್ಥ ದ್ವಿವೇದಿ.<p>‘ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕ್ರಮವಹಿಸಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಈ ವಿಚಾರದಲ್ಲಿ ಯುಪಿಎಸ್ಸಿಯನ್ನು ನೋಡಿ ಕಲಿಯುವುದು ಅಗತ್ಯವಾಗಿದೆ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.</p>.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಹೊಣೆಗಾರಿಕೆ ನಿಗದಿಪಡಿಸಿ; ಸುಪ್ರೀಂ ಕೋರ್ಟ್.<p>ಜೂನ್ನಿಂದ ಸೆಪ್ಟೆಂಬರ್ವರೆಗಿನ ನೈಋತ್ಯ ಮುಂಗಾರು ಮಳೆಯು ವಾಡಿಕೆಗಿಂತ ಕಡಿಮೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.ಮುಂಗಾರು ಪೂರ್ವ; ಮಲೆನಾಡು, ಹಳೇ ಮೈಸೂರು ಭಾಗಕ್ಕೆ ಮಳೆ ಕೊರತೆ.<p>‘ಎಚ್.ಡಿ. ಕುಮಾರಸ್ವಾಮಿ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದು ನನ್ನ ಹಾಗೂ ಮುಖಂಡರ ಅಪೇಕ್ಷೆಯಾಗಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಹೇಳಿದರು.</p>.ಕುಮಾರಸ್ವಾಮಿ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿಯಾಗಲಿ: ಸಾ.ರಾ. ಮಹೇಶ್.<p>ಈ ಹಿಂದೆ ವಿಕೇಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p>.ವಿಕೇಂಡ್ ವಿತ್ ರಮೇಶ್ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದ ಕನಕಪುರದ ಬಂಡೆ ಡಿಕೆಶಿ.<p>ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೂನ್ 3ರಂದು ಸಂಜೆ 4.10ಕ್ಕೆ ಅವರು ಪದಗ್ರಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. ಶನಿವಾರ ಪತ್ರಕರ್ತರ ಜೊತೆ ಮಾತನಾಡಿರುವ ಡಿಕೆಶಿ ಸಹ ಈ ವಿಷಯವನ್ನು ಖಚಿತಪಡಿಸಿದ್ದಾರೆ.</p>.ಜೂ 3ಕ್ಕೆ ಪ್ರಮಾಣ ವಚನ: ಡಿಕೆಶಿ ನಿರ್ಧಾರದ ಹಿಂದಿವೆ ಎರಡು ಕಾರಣ.<p>‘ನೀನು ಬಂದೀಖಾನೆ ಸಚಿವನಾಗು, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಿಯಾ‘ ಎಂದು ಸಚಿವನನ್ನಾಗಿ ಮಾಡಿದವರು ಗುರುಗಳಾದ ಎಸ್. ಬಂಗಾರಪ್ಪನವರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿಂದೊಮ್ಮೆ ಹೇಳಿದ್ದರು. ಇದೀಗ ಆ ಮಾತು ಸತ್ಯವಾಗುವ ಸನಿಹಕ್ಕೆ ಅವರು ತಲುಪಿದ್ದಾರೆ.</p>.ಈಗ ಜೈಲು ಮಂತ್ರಿಯಾಗು, ಮುಂದೆ CM ಆಗ್ತಿಯಾ: ಬಂಗಾರಪ್ಪ ಅವರ ಮಾತು ನೆನೆದ ಡಿಕೆಶಿ.<p>ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟನ್ಸ್ ತಂಡದ ಸವಾಲನ್ನು ಎದುರಿಸಲಿದೆ.</p>.IPL 2026: ಸತತ 2ನೇ ಟ್ರೋಫಿ ಮೇಲೆ ಆರ್ಸಿಬಿ ಕಣ್ಣು: ಹೀಗಿದೆ ತಂಡಗಳ ಬಲಾಬಲ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ನೂತನ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ.</p>.ಸರ್ಕಾರ ರಚಿಸಲು ಡಿಕೆಶಿಗೆ ರಾಜ್ಯಪಾಲರ ಆಹ್ವಾನ: ಜೂನ್ 3ರಂದು ಪ್ರಮಾಣವಚನ.<p>ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ನಮ್ಮ ಮೆಟ್ರೊದಲ್ಲಿ ಮೇ 31ರಂದು ಉಚಿತ ಪ್ರಯಾಣ ಸೌಲಭ್ಯವಿದೆ ಎಂಬುದಾಗಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ತಿಳಿಸಿದೆ.</p>.ಐಪಿಎಲ್ ಫೈನಲ್ ದಿನ RCB ಅಭಿಮಾನಿಗಳಿಗೆ ಮೆಟ್ರೊದಲ್ಲಿ ಉಚಿತ ಸೇವೆ ಎಂಬುದು ನಿಜವಲ್ಲ.<p>ಗತ್ಯವಿದ್ದಲ್ಲಿ ಸಿಂಧೂರ ಕಾರ್ಯಾಚರಣೆ 2.0ಗೆ ನಮ್ಮ ಸಶಸ್ತ್ರ ಪಡೆಗಳು ಸಂಪೂರ್ಣ ಸನ್ನದ್ಧಗೊಂಡಿವೆ' ಎಂದು ಸೇನಾ ಮುಖ್ಯಸ್ಥ ಜನಲರ್ ಉಪೇಂದ್ರ ದ್ವಿವೇದಿ ಅವರು ಶನಿವಾರ ಹೇಳಿದರು. </p>.‘ಸಿಂಧೂರ 2.0’ಗೆ ಭಾರತ ಸನ್ನದ್ಧ: ಸೇನಾ ಮುಖ್ಯಸ್ಥ ದ್ವಿವೇದಿ.<p>‘ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಯಾವುದೇ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕ್ರಮವಹಿಸಿ ದೊಡ್ಡ ಪ್ರಮಾಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಈ ವಿಚಾರದಲ್ಲಿ ಯುಪಿಎಸ್ಸಿಯನ್ನು ನೋಡಿ ಕಲಿಯುವುದು ಅಗತ್ಯವಾಗಿದೆ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.</p>.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಹೊಣೆಗಾರಿಕೆ ನಿಗದಿಪಡಿಸಿ; ಸುಪ್ರೀಂ ಕೋರ್ಟ್.<p>ಜೂನ್ನಿಂದ ಸೆಪ್ಟೆಂಬರ್ವರೆಗಿನ ನೈಋತ್ಯ ಮುಂಗಾರು ಮಳೆಯು ವಾಡಿಕೆಗಿಂತ ಕಡಿಮೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.ಮುಂಗಾರು ಪೂರ್ವ; ಮಲೆನಾಡು, ಹಳೇ ಮೈಸೂರು ಭಾಗಕ್ಕೆ ಮಳೆ ಕೊರತೆ.<p>‘ಎಚ್.ಡಿ. ಕುಮಾರಸ್ವಾಮಿ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದು ನನ್ನ ಹಾಗೂ ಮುಖಂಡರ ಅಪೇಕ್ಷೆಯಾಗಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್ ಹೇಳಿದರು.</p>.ಕುಮಾರಸ್ವಾಮಿ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿಯಾಗಲಿ: ಸಾ.ರಾ. ಮಹೇಶ್.<p>ಈ ಹಿಂದೆ ವಿಕೇಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p>.ವಿಕೇಂಡ್ ವಿತ್ ರಮೇಶ್ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದ ಕನಕಪುರದ ಬಂಡೆ ಡಿಕೆಶಿ.<p>ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೂನ್ 3ರಂದು ಸಂಜೆ 4.10ಕ್ಕೆ ಅವರು ಪದಗ್ರಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. ಶನಿವಾರ ಪತ್ರಕರ್ತರ ಜೊತೆ ಮಾತನಾಡಿರುವ ಡಿಕೆಶಿ ಸಹ ಈ ವಿಷಯವನ್ನು ಖಚಿತಪಡಿಸಿದ್ದಾರೆ.</p>.ಜೂ 3ಕ್ಕೆ ಪ್ರಮಾಣ ವಚನ: ಡಿಕೆಶಿ ನಿರ್ಧಾರದ ಹಿಂದಿವೆ ಎರಡು ಕಾರಣ.<p>‘ನೀನು ಬಂದೀಖಾನೆ ಸಚಿವನಾಗು, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಿಯಾ‘ ಎಂದು ಸಚಿವನನ್ನಾಗಿ ಮಾಡಿದವರು ಗುರುಗಳಾದ ಎಸ್. ಬಂಗಾರಪ್ಪನವರು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಿಂದೊಮ್ಮೆ ಹೇಳಿದ್ದರು. ಇದೀಗ ಆ ಮಾತು ಸತ್ಯವಾಗುವ ಸನಿಹಕ್ಕೆ ಅವರು ತಲುಪಿದ್ದಾರೆ.</p>.ಈಗ ಜೈಲು ಮಂತ್ರಿಯಾಗು, ಮುಂದೆ CM ಆಗ್ತಿಯಾ: ಬಂಗಾರಪ್ಪ ಅವರ ಮಾತು ನೆನೆದ ಡಿಕೆಶಿ.<p>ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟನ್ಸ್ ತಂಡದ ಸವಾಲನ್ನು ಎದುರಿಸಲಿದೆ.</p>.IPL 2026: ಸತತ 2ನೇ ಟ್ರೋಫಿ ಮೇಲೆ ಆರ್ಸಿಬಿ ಕಣ್ಣು: ಹೀಗಿದೆ ತಂಡಗಳ ಬಲಾಬಲ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>