‘ಇಂದಿನ ಬಜೆಟ್ನಲ್ಲಿ ಹೊಸದೇನು ಇಲ್ಲ. ಕೇವಲ ಉತ್ತರ ಭಾರತವನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡಿಸಿದಂತಿದೆ. ಇದರಿಂದ ದಕ್ಷಿಣ ಭಾರತದವರಿಗೆ ಅನ್ಯಾಯವಾಗುತ್ತಿದೆ. ಇದೇ ರೀತಿ ಮುಂದುವರಿದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ’ ಎಂದು ಸಂಸದ ಡಿ.ಕೆ. ಸುರೇಶ್ ದೆಹಲಿಯಲ್ಲಿ ಗುರುವಾರ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.