<p><strong>ಚೆನ್ನೈ: </strong>ತಮಿಳುನಾಡಿನಲ್ಲಿ ಕಮಲ (ಬಿಜೆಪಿ) ಅರಳಲು ಅವಕಾಶ ಮಾಡಿಕೊಟ್ಟಿದ್ದೇ ಡಿಎಂಕೆ. ಆ ಪಕ್ಷವು ಜನರನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್ ಆರೋಪಿಸಿದ್ದಾರೆ.</p><p>ಟಿವಿಕೆ ಪಕ್ಷದ ಸಭೆಗಳು ಯಶಸ್ವಿಯಾಗಿ ನಡೆಯುತ್ತಿರುವನ್ನು ನೋಡಿ ರಾಜಕೀಯ ವಿರೋಧಿಗಳು ಕಂಗೆಟ್ಟಿದ್ದಾರೆ. ಅವರ ಮುಖವಾಡಗಳು ಕಳಚಿಬೀಳುತ್ತಿವೆ ಎಂದು ಉಲ್ಲೇಖಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p><p>'ನಮ್ಮ ಓಟಕ್ಕೆ ತಡೆಯೊಡ್ಡಲು ನಡೆಸಿದ ಸಂಚುಗಳು ವಿಫಲವಾಗಿವೆ. ನಾವು ಕಾಂಚೀಪುರಂ, ಪುದುಚೇರಿ ಹಾಗೂ ಈರೋಡ್ನಲ್ಲಿ ಯಶಸ್ವಿಯಾಗಿ ಸಮಾವೇಶಗಳನ್ನು ಆಯೋಜಿಸಿದ್ದೇವೆ. ನಮ್ಮನ್ನು ತಡೆಯಲು ಯತ್ನಿಸಿದ್ದವರು, ಜನರು ನಮ್ಮೊಂದಿಗೆ ನಿಂತಿರುವುದನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ' ಎಂದು ತಿವಿದಿದ್ದಾರೆ.</p><p>ಡಿಎಂಕೆ ಮುಖವಾಣಿ 'ಮುರಸೋಲಿ'ಯ ಸಂಪಾದಕೀಯದಲ್ಲಿ ಟಿವಿಕೆ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿತ್ತು ಎಂದು ಕುಟುಕಿದ್ದಾರೆ.</p><p>'ಅವರೀಗ ತಮ್ಮ ಗುರುತು ಮರೆಮಾಡಿಕೊಳ್ಳಲು ಮುಖಗವಸು ತೊಡಲಾರಂಭಿಸಿದ್ದಾರೆ. ಕಲ್ಲು ತೂರುತ್ತಿರುವ ಆ ಪಕ್ಷದ ನಾಯಕ, ಮುಖ್ಯಮಂತ್ರಿ (ಎಂ.ಕೆ. ಸ್ಟಾಲಿನ್), ತಾವು ಕನ್ನಡಿಯ ಎದುರು ನಿಂತಿರುವುದನ್ನು ಮರೆತಿದ್ದಾರೆ' ಎಂದು ಗುಡುಗಿದ್ದಾರೆ.</p><p>'ಸಾಮಾನ್ಯ ಕನಿಷ್ಠ ಮಾರ್ಗಸೂಚಿಯ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸುತ್ತಿರುವ ಡಿಎಂಕೆ, 1999–2003ರ (ವಾಜಪೇಯಿ ಸರ್ಕಾರದ ವೇಳೆ) ಗುಲಾಮಗಿರಿ ಮಾಡಿತ್ತು. ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ಮಾಡಿಕೊಟ್ಟಿತ್ತು' ಎಂದು ಗುಡುಗಿದ್ದಾರೆ.</p><p>ಟಿವಿಕೆ ಸದಸ್ಯರು, ಡಿಎಂಕೆ ನಾಯಕರ ಭಾಷಣಗಳ ಬಗ್ಗೆ ತಲೆಕೆಡಿಸಿಕೊಳ್ಳದೆ, ಜನರೊಂದಿಗೆ ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.</p><p><strong>ಕರೂರು ದುರಂತ</strong><br>ಟಿಎಂಕೆ ಪಕ್ಷ ಇದೇ ವರ್ಷ ಸೆಪ್ಟೆಂಬರ್ನಲ್ಲಿ ಕರೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.</p><p>ಈ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿದೆ. ಆದರೆ, ಆ ಹೊಣೆಯನ್ನು ಮದ್ರಾಸ್ ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಒಪ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ತಮಿಳುನಾಡು ಸರ್ಕಾರ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ತಮಿಳುನಾಡಿನಲ್ಲಿ ಕಮಲ (ಬಿಜೆಪಿ) ಅರಳಲು ಅವಕಾಶ ಮಾಡಿಕೊಟ್ಟಿದ್ದೇ ಡಿಎಂಕೆ. ಆ ಪಕ್ಷವು ಜನರನ್ನು ಗೊಂದಲಕ್ಕೀಡು ಮಾಡುತ್ತಿದೆ ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್ ಆರೋಪಿಸಿದ್ದಾರೆ.</p><p>ಟಿವಿಕೆ ಪಕ್ಷದ ಸಭೆಗಳು ಯಶಸ್ವಿಯಾಗಿ ನಡೆಯುತ್ತಿರುವನ್ನು ನೋಡಿ ರಾಜಕೀಯ ವಿರೋಧಿಗಳು ಕಂಗೆಟ್ಟಿದ್ದಾರೆ. ಅವರ ಮುಖವಾಡಗಳು ಕಳಚಿಬೀಳುತ್ತಿವೆ ಎಂದು ಉಲ್ಲೇಖಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p><p>'ನಮ್ಮ ಓಟಕ್ಕೆ ತಡೆಯೊಡ್ಡಲು ನಡೆಸಿದ ಸಂಚುಗಳು ವಿಫಲವಾಗಿವೆ. ನಾವು ಕಾಂಚೀಪುರಂ, ಪುದುಚೇರಿ ಹಾಗೂ ಈರೋಡ್ನಲ್ಲಿ ಯಶಸ್ವಿಯಾಗಿ ಸಮಾವೇಶಗಳನ್ನು ಆಯೋಜಿಸಿದ್ದೇವೆ. ನಮ್ಮನ್ನು ತಡೆಯಲು ಯತ್ನಿಸಿದ್ದವರು, ಜನರು ನಮ್ಮೊಂದಿಗೆ ನಿಂತಿರುವುದನ್ನು ಕಂಡು ಕಕ್ಕಾಬಿಕ್ಕಿಯಾಗಿದ್ದಾರೆ' ಎಂದು ತಿವಿದಿದ್ದಾರೆ.</p><p>ಡಿಎಂಕೆ ಮುಖವಾಣಿ 'ಮುರಸೋಲಿ'ಯ ಸಂಪಾದಕೀಯದಲ್ಲಿ ಟಿವಿಕೆ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿತ್ತು ಎಂದು ಕುಟುಕಿದ್ದಾರೆ.</p><p>'ಅವರೀಗ ತಮ್ಮ ಗುರುತು ಮರೆಮಾಡಿಕೊಳ್ಳಲು ಮುಖಗವಸು ತೊಡಲಾರಂಭಿಸಿದ್ದಾರೆ. ಕಲ್ಲು ತೂರುತ್ತಿರುವ ಆ ಪಕ್ಷದ ನಾಯಕ, ಮುಖ್ಯಮಂತ್ರಿ (ಎಂ.ಕೆ. ಸ್ಟಾಲಿನ್), ತಾವು ಕನ್ನಡಿಯ ಎದುರು ನಿಂತಿರುವುದನ್ನು ಮರೆತಿದ್ದಾರೆ' ಎಂದು ಗುಡುಗಿದ್ದಾರೆ.</p><p>'ಸಾಮಾನ್ಯ ಕನಿಷ್ಠ ಮಾರ್ಗಸೂಚಿಯ ಮೂಲಕ ಜನರನ್ನು ಗೊಂದಲಕ್ಕೆ ಸಿಲುಕಿಸುತ್ತಿರುವ ಡಿಎಂಕೆ, 1999–2003ರ (ವಾಜಪೇಯಿ ಸರ್ಕಾರದ ವೇಳೆ) ಗುಲಾಮಗಿರಿ ಮಾಡಿತ್ತು. ತಮಿಳುನಾಡಿನಲ್ಲಿ ಕಮಲ ಅರಳಲು ಅವಕಾಶ ಮಾಡಿಕೊಟ್ಟಿತ್ತು' ಎಂದು ಗುಡುಗಿದ್ದಾರೆ.</p><p>ಟಿವಿಕೆ ಸದಸ್ಯರು, ಡಿಎಂಕೆ ನಾಯಕರ ಭಾಷಣಗಳ ಬಗ್ಗೆ ತಲೆಕೆಡಿಸಿಕೊಳ್ಳದೆ, ಜನರೊಂದಿಗೆ ಕೈಜೋಡಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.</p><p><strong>ಕರೂರು ದುರಂತ</strong><br>ಟಿಎಂಕೆ ಪಕ್ಷ ಇದೇ ವರ್ಷ ಸೆಪ್ಟೆಂಬರ್ನಲ್ಲಿ ಕರೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 41 ಮಂದಿ ಮೃತಪಟ್ಟಿದ್ದರು.</p><p>ಈ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿದೆ. ಆದರೆ, ಆ ಹೊಣೆಯನ್ನು ಮದ್ರಾಸ್ ಹೈಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಒಪ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ತಮಿಳುನಾಡು ಸರ್ಕಾರ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>