<p class="title"><strong>ಚೆನ್ನೈ</strong>: ತಮಿಳುನಾಡಿನ ಡಿಎಂಕೆ ಸರ್ಕಾರವು ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ರಾಜ್ಯದ ದೇವಸ್ಥಾನಗಳಿಗೆ ವಿವಿಧ ಜಾತಿಗಳ ತರಬೇತಿ ಪಡೆದ 24 ಅರ್ಚಕರನ್ನು ಶನಿವಾರ ನೇಮಕ ಮಾಡಿದೆ.</p>.<p class="title">ದೇವಸ್ಥಾನವೊಂದರ ಮದುವೆ ಮಂಟಪದಲ್ಲಿ ನಡೆದ ಕಾರ್ಯಕ್ರದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 75 ಅರ್ಚಕರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವತಿಯಿಂದ ನೇಮಕಾತಿ ಆದೇಶಗಳನ್ನು ನೀಡಿದರು. ವಿವಿಧ ವರ್ಗಗಳ ಅಡಿಯಲ್ಲಿ 208 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ.</p>.<p class="bodytext">ಶನಿವಾರ ನೇಮಕವಾದ 24 ಮಂದಿ ಅರ್ಚಕರು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಲು ಸರ್ಕಾರದ ವತಿಯಿಂದ ನೀಡಲಾದ ತರಬೇತಿ ಪೂರ್ಣಗೊಳಿಸಿದ್ದಾರೆ. 34 ಮಂದಿ ಇತರ ಪಾಠಶಾಲೆಗಳಲ್ಲಿ ಅರ್ಚಕ ತರಬೇತಿಯನ್ನು ಪಡೆದಿದ್ದಾರೆ. ಒಟ್ಟು 208 ನೇಮಕಾತಿಗಳಲ್ಲಿ ಭಟ್ಟಾಚಾರ್ಯರು, ಒಡುವರು, ಪೂಜಾರಿಗಳು, ತಾಂತ್ರಿಕ ಮತ್ತು ಕಚೇರಿ ಸಹಾಯಕರು ಸೂಕ್ತ ತರಬೇತಿಯ ನಂತರ ನೇಮಕಗೊಂಡಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.</p>.<p class="bodytext">ಆ. 14ಕ್ಕೆ ಡಿಎಂಕೆ ಸರ್ಕಾರ ಅಧಿಕಾರ ಸ್ವೀಕರಿಸಿ 100 ದಿನಗಳಾಗಿವೆ. ಏ. 6ರಂದು ನಡೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಡಿಎಂಕೆ ಪಕ್ಷವು ಎಲ್ಲಾ ಜಾತಿಗಳಿಗೆ ಸೇರಿದವರನ್ನು ದೇವಸ್ಥಾನಗಳಲ್ಲಿ ಅರ್ಚಕರನ್ನಾಗಿ ನೇಮಕ ಮಾಡಲು ತರಬೇತಿ ನೀಡುವುದಾಗಿ ಭರವಸೆ ನೀಡಿತ್ತು. ಮೇ 7ರಂದು ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ</strong>: ತಮಿಳುನಾಡಿನ ಡಿಎಂಕೆ ಸರ್ಕಾರವು ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ರಾಜ್ಯದ ದೇವಸ್ಥಾನಗಳಿಗೆ ವಿವಿಧ ಜಾತಿಗಳ ತರಬೇತಿ ಪಡೆದ 24 ಅರ್ಚಕರನ್ನು ಶನಿವಾರ ನೇಮಕ ಮಾಡಿದೆ.</p>.<p class="title">ದೇವಸ್ಥಾನವೊಂದರ ಮದುವೆ ಮಂಟಪದಲ್ಲಿ ನಡೆದ ಕಾರ್ಯಕ್ರದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 75 ಅರ್ಚಕರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವತಿಯಿಂದ ನೇಮಕಾತಿ ಆದೇಶಗಳನ್ನು ನೀಡಿದರು. ವಿವಿಧ ವರ್ಗಗಳ ಅಡಿಯಲ್ಲಿ 208 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ.</p>.<p class="bodytext">ಶನಿವಾರ ನೇಮಕವಾದ 24 ಮಂದಿ ಅರ್ಚಕರು ಹಿಂದೂ ದೇವಾಲಯಗಳಲ್ಲಿ ಅರ್ಚಕರಾಗಲು ಸರ್ಕಾರದ ವತಿಯಿಂದ ನೀಡಲಾದ ತರಬೇತಿ ಪೂರ್ಣಗೊಳಿಸಿದ್ದಾರೆ. 34 ಮಂದಿ ಇತರ ಪಾಠಶಾಲೆಗಳಲ್ಲಿ ಅರ್ಚಕ ತರಬೇತಿಯನ್ನು ಪಡೆದಿದ್ದಾರೆ. ಒಟ್ಟು 208 ನೇಮಕಾತಿಗಳಲ್ಲಿ ಭಟ್ಟಾಚಾರ್ಯರು, ಒಡುವರು, ಪೂಜಾರಿಗಳು, ತಾಂತ್ರಿಕ ಮತ್ತು ಕಚೇರಿ ಸಹಾಯಕರು ಸೂಕ್ತ ತರಬೇತಿಯ ನಂತರ ನೇಮಕಗೊಂಡಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.</p>.<p class="bodytext">ಆ. 14ಕ್ಕೆ ಡಿಎಂಕೆ ಸರ್ಕಾರ ಅಧಿಕಾರ ಸ್ವೀಕರಿಸಿ 100 ದಿನಗಳಾಗಿವೆ. ಏ. 6ರಂದು ನಡೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಡಿಎಂಕೆ ಪಕ್ಷವು ಎಲ್ಲಾ ಜಾತಿಗಳಿಗೆ ಸೇರಿದವರನ್ನು ದೇವಸ್ಥಾನಗಳಲ್ಲಿ ಅರ್ಚಕರನ್ನಾಗಿ ನೇಮಕ ಮಾಡಲು ತರಬೇತಿ ನೀಡುವುದಾಗಿ ಭರವಸೆ ನೀಡಿತ್ತು. ಮೇ 7ರಂದು ಎಂ.ಕೆ. ಸ್ಟಾಲಿನ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>