<p><strong>ಚೆನ್ನೈ:</strong> ಕೇಂದ್ರ ಸರ್ಕಾರದ ವಿರುದ್ಧ ದಾಳಿಯನ್ನು ತೀವ್ರಗೊಳಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಸಾಂಕೇತಿಕ ‘ಹಲ್ವಾ ಅಭಿಯಾನ’ವನ್ನು ಆರಂಭಿಸಿದೆ.</p><p>ಡಿಎಂಕೆ ನಾಯಕರು, ಕಾರ್ಯಕರ್ತರು ‘ಹಲ್ವಾ’ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ತಮಿಳುನಾಡಿನಲ್ಲಿ ‘ಹಲ್ವಾ’ ಪದವನ್ನ ಮೋಸ, ವಂಚನೆ ಎಂಬರ್ಥದಲ್ಲಿ ಬಳಸಲಾಗುತ್ತದೆ. ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ರಾಜ್ಯದ ಅಭಿವೃದ್ಧಿಗೆ ಕಡಿಮೆ ಪ್ರಮಾಣದಲ್ಲಿ ಅನುದಾನ ಹಂಚಿಕೆ ಮಾಡಿದೆ ಎಂದು ಡಿಎಂಕೆ ಆರೋಪಿಸಿದೆ. </p><p>ಪ್ರತಿಭಟನೆಯ ಭಾಗವಾಗಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಡಿಎಂಕೆ ನಾಯಕರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತಮಿಳುನಾಡಿನ ಜನರಿಗೆ ದ್ರೋಹ ಮಾಡಿದೆ’ ಎಂದು ದೂರಿದ್ದಾರೆ. </p><p>‘ಕೇಂದ್ರ ಬಜೆಟ್ ಸ್ಪಷ್ಟ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ರಾಜ್ಯಕ್ಕೆ ಏನನ್ನೂ ನೀಡದೆ, ರಾಜ್ಯದ ಏಳು ಕೋಟಿ ಜನರಿಗೆ ‘ಹಲ್ವಾ’ ನೀಡಿದ್ದಾರೆ’ ಎಂದು ಡಿಎಂಕೆ ವಕ್ತಾರರು ವಾಗ್ದಾಳಿ ನಡೆಸಿದ್ದಾರೆ.</p><p>ಕೇಂದ್ರ ಬಜೆಟ್ ರಾಜ್ಯಕ್ಕೆ ಯಾವುದೇ ಮಹತ್ವದ ಯೋಜನೆಗಳು ಸೇರಿದಂತೆ ಅನುದಾನ ಮೀಸಲಿಡುವಲ್ಲಿ ವಿಫಲವಾಗಿದೆ ಎಂದು ಡಿಎಂಕೆ ಆರೋಪಿಸಿದೆ.</p><p>ಕೇಂದ್ರದ ಬಿಜೆಪಿ ಸರ್ಕಾರದ ನಡೆಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ನಮ್ಮ ರಾಜ್ಯದ ಹಕ್ಕುಗಳು ಮತ್ತು ಅಗತ್ಯಗಳನ್ನು ನಿರಂತರವಾಗಿ ನಿರ್ಲಕ್ಷಿಸಿರುವ ಬಿಜೆಪಿ ಇಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕೇಂದ್ರ ಸರ್ಕಾರದ ವಿರುದ್ಧ ದಾಳಿಯನ್ನು ತೀವ್ರಗೊಳಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ, ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಸಾಂಕೇತಿಕ ‘ಹಲ್ವಾ ಅಭಿಯಾನ’ವನ್ನು ಆರಂಭಿಸಿದೆ.</p><p>ಡಿಎಂಕೆ ನಾಯಕರು, ಕಾರ್ಯಕರ್ತರು ‘ಹಲ್ವಾ’ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ತಮಿಳುನಾಡಿನಲ್ಲಿ ‘ಹಲ್ವಾ’ ಪದವನ್ನ ಮೋಸ, ವಂಚನೆ ಎಂಬರ್ಥದಲ್ಲಿ ಬಳಸಲಾಗುತ್ತದೆ. ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ರಾಜ್ಯದ ಅಭಿವೃದ್ಧಿಗೆ ಕಡಿಮೆ ಪ್ರಮಾಣದಲ್ಲಿ ಅನುದಾನ ಹಂಚಿಕೆ ಮಾಡಿದೆ ಎಂದು ಡಿಎಂಕೆ ಆರೋಪಿಸಿದೆ. </p><p>ಪ್ರತಿಭಟನೆಯ ಭಾಗವಾಗಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಡಿಎಂಕೆ ನಾಯಕರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತಮಿಳುನಾಡಿನ ಜನರಿಗೆ ದ್ರೋಹ ಮಾಡಿದೆ’ ಎಂದು ದೂರಿದ್ದಾರೆ. </p><p>‘ಕೇಂದ್ರ ಬಜೆಟ್ ಸ್ಪಷ್ಟ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ರಾಜ್ಯಕ್ಕೆ ಏನನ್ನೂ ನೀಡದೆ, ರಾಜ್ಯದ ಏಳು ಕೋಟಿ ಜನರಿಗೆ ‘ಹಲ್ವಾ’ ನೀಡಿದ್ದಾರೆ’ ಎಂದು ಡಿಎಂಕೆ ವಕ್ತಾರರು ವಾಗ್ದಾಳಿ ನಡೆಸಿದ್ದಾರೆ.</p><p>ಕೇಂದ್ರ ಬಜೆಟ್ ರಾಜ್ಯಕ್ಕೆ ಯಾವುದೇ ಮಹತ್ವದ ಯೋಜನೆಗಳು ಸೇರಿದಂತೆ ಅನುದಾನ ಮೀಸಲಿಡುವಲ್ಲಿ ವಿಫಲವಾಗಿದೆ ಎಂದು ಡಿಎಂಕೆ ಆರೋಪಿಸಿದೆ.</p><p>ಕೇಂದ್ರದ ಬಿಜೆಪಿ ಸರ್ಕಾರದ ನಡೆಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ನಮ್ಮ ರಾಜ್ಯದ ಹಕ್ಕುಗಳು ಮತ್ತು ಅಗತ್ಯಗಳನ್ನು ನಿರಂತರವಾಗಿ ನಿರ್ಲಕ್ಷಿಸಿರುವ ಬಿಜೆಪಿ ಇಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>