ರಾಜ್ಯಸಭೆ ಸದಸ್ಯರ ಬಂಧನ ರಾಜ್ಯ ಸರ್ಕಾರದ ಹುನ್ನಾರವಾಗಿದೆ. ಕೋವಿಡ್ ಪರಿಸ್ಥಿತಿ ಎದುರಿಸುವಲ್ಲಿ ಆಡಳಿತದ ವೈಫಲ್ಯ ಮತ್ತು ಭ್ರಷ್ಟಾಚಾರದಿಂದ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಯತ್ನವಾಗಿದೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ. ಪ್ರತಿಯಾಗಿ ಮುಖ್ಯಮಂತ್ರಿ ಪಳನಿಸ್ವಾಮಿ ಅವರು, ವಿರೋಧಪಕ್ಷದ ನಾಯಕರು ರಾಜಕೀಯ ಲಾಭಕ್ಕಾಗಿ ನಾಟಕ ಆಡುತ್ತಿದ್ದಾರೆ ಎಂದು ದೂರಿದ್ದಾರೆ.