<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಎಸ್ಐಆರ್ ನಡೆಯುತ್ತಿರುವ ವೇಳೆಯೇ ಅದರ ಕರಪತ್ರಗಳನ್ನು ಡಿಎಂಕೆ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಎಐಡಿಎಂಕೆ ಹಿರಿಯ ನಾಯಕ ಡಿ. ಜಯಕುಮಾರ್ ಅವರು ಆರೋಪಿಸಿದ್ದಾರೆ. </p><p>ಮನೆ ಮನೆಗಳಿಗೆ ಎಸ್ಐಆರ್ ಕರಪತ್ರವನ್ನು ಹಂಚುವ ವೇಳೆ ಜನರ ಪ್ರಶ್ನೆಗಳಿಗೆ ಉತ್ತರಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.</p><p>ಕೆಲವು ಅಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದಾರೆ. ಡಿಎಂಕೆ ಕಡೆ ಒಲವಿರುವ ಅಧಿಕಾರಿಗಳು ಎಸ್ಐಆರ್ ಸುಗಮವಾಗಿ ನಡೆಯದಂತೆ ಮಾಡುತ್ತಿದ್ದಾರೆ. ಮತದಾರರಿಗೆ ಡಿಎಂಕೆ ಕಾರ್ಯಕರ್ತರು ಬಹಿರಂಗವಾಗಿಯೇ ಎಸ್ಐಆರ್ ಕರಪತ್ರ ಹಂಚುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಶೋಲಿಂಗನಲ್ಲೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಸಹಜವಾಗಿ ಕರಪತ್ರಗಳನ್ನು ಹಂಚಲಾಗಿದೆ. ಇದು ಚುನಾವಣಾ ಅಧಿಕಾರಿಗಳು ಕರಪತ್ರ ಹಂಚದಿರುವುದನ್ನು ತೋರಿಸುತ್ತದೆ ಎಂದಿದ್ದಾರೆ. </p><p>ಎಸ್ಐಆರ್ ವೇಳೆ ನಡೆಯುತ್ತಿರುವ ಅಕ್ರಮಗಳು ಮತ್ತು ಹಸ್ತಕ್ಷೇಪದ ಕುರಿತು ಎಐಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನಲ್ಲಿ ಎಸ್ಐಆರ್ ನಡೆಯುತ್ತಿರುವ ವೇಳೆಯೇ ಅದರ ಕರಪತ್ರಗಳನ್ನು ಡಿಎಂಕೆ ಕಾರ್ಯಕರ್ತರು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಎಐಡಿಎಂಕೆ ಹಿರಿಯ ನಾಯಕ ಡಿ. ಜಯಕುಮಾರ್ ಅವರು ಆರೋಪಿಸಿದ್ದಾರೆ. </p><p>ಮನೆ ಮನೆಗಳಿಗೆ ಎಸ್ಐಆರ್ ಕರಪತ್ರವನ್ನು ಹಂಚುವ ವೇಳೆ ಜನರ ಪ್ರಶ್ನೆಗಳಿಗೆ ಉತ್ತರಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.</p><p>ಕೆಲವು ಅಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದಾರೆ. ಡಿಎಂಕೆ ಕಡೆ ಒಲವಿರುವ ಅಧಿಕಾರಿಗಳು ಎಸ್ಐಆರ್ ಸುಗಮವಾಗಿ ನಡೆಯದಂತೆ ಮಾಡುತ್ತಿದ್ದಾರೆ. ಮತದಾರರಿಗೆ ಡಿಎಂಕೆ ಕಾರ್ಯಕರ್ತರು ಬಹಿರಂಗವಾಗಿಯೇ ಎಸ್ಐಆರ್ ಕರಪತ್ರ ಹಂಚುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಶೋಲಿಂಗನಲ್ಲೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಸಹಜವಾಗಿ ಕರಪತ್ರಗಳನ್ನು ಹಂಚಲಾಗಿದೆ. ಇದು ಚುನಾವಣಾ ಅಧಿಕಾರಿಗಳು ಕರಪತ್ರ ಹಂಚದಿರುವುದನ್ನು ತೋರಿಸುತ್ತದೆ ಎಂದಿದ್ದಾರೆ. </p><p>ಎಸ್ಐಆರ್ ವೇಳೆ ನಡೆಯುತ್ತಿರುವ ಅಕ್ರಮಗಳು ಮತ್ತು ಹಸ್ತಕ್ಷೇಪದ ಕುರಿತು ಎಐಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>