<p><strong>ಚೆನ್ನೈ</strong>: ‘ಸನಾತನ ಧರ್ಮ’ ಕುರಿತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶ ತಪ್ಪು’ ಎಂದು ಆಡಳಿತಾರೂಢ ಪಕ್ಷ ಡಿಎಂಕೆ ಗುರುವಾರ ಹೇಳಿದೆ.</p>.<p>ಅಲ್ಲದೆ,‘ಹೈಕೋರ್ಟ್ ನ್ಯಾಯಾಧೀಶರ ವೈಯಕ್ತಿಕ ನಂಬಿಕೆಗೆ ತೀರ್ಪಿನಲ್ಲಿ ಅವಕಾಶ ಇಲ್ಲ’ ಎಂದು ಡಿಎಂಕೆ ವಕ್ತಾರ ಶರವಣನ್ ಅಣ್ಣಾದೊರೈ ಹೇಳಿದ್ದಾರೆ.</p>.<p>‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು’ ಎಂದು ಕಾರ್ಯಕ್ರಮವೊಂದರಲ್ಲಿ ಉದಯನಿಧಿ ಸ್ಟಾಲಿನ್ ಕರೆನೀಡಿದ್ದರು. ಈ ಹೇಳಿಕೆ ಖಂಡಿಸಿ ಬಿಜೆಪಿ ನಾಯಕ ಅಮಿತ್ ಮಾಳವೀಯ ಪೋಸ್ಟ್ ಮಾಡಿದ್ದರು. ಈ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಳವೀಯ ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ನ ಮದುರೆ ಪೀಠ, ಮಾಳವೀಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡಿ ಆದೇಶಿಸಿತ್ತು. ಉದಯನಿಧಿ ಅವರ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದೂ ಹೇಳಿತ್ತು.</p>.<p>ಮದುರೆ ಪೀಠದ ಈ ಆದೇಶ ಕುರಿತು ಪ್ರತಿಕ್ರಿಯಿಸಿರುವ ಶರವಣನ್,‘ಈ ತೀರ್ಪು ತಪ್ಪು’ ಎಂದು ಹೇಳಿದರು.</p>.<p>‘ಮತ್ತೊಂದು ಬದಿಯವರ ವಾದ ಆಲಿಸದೇ ತೀರ್ಪು ನೀಡಬಾರದು ಎಂಬುದು ನ್ಯಾಯಶಾಸ್ತ್ರದ ತತ್ವ. ಮದುರೆ ಪೀಠದ ಆದೇಶ ಈ ತತ್ವಕ್ಕೆ ಅನುಗುಣವಾಗಿಲ್ಲ’ ಎಂದರು.</p>.ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ: ಮದ್ರಾಸ್ ಹೈಕೋರ್ಟ್.ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ತಲೆದಂಡಕ್ಕೆ ಬಿಜೆಪಿ ಆಗ್ರಹ.<p>‘ಮದುರೆ ಪೀಠದ ಆದೇಶವು ಡಿಎಂಕೆ ಪಕ್ಷದ ಸಂಕುಚಿತ ಹಾಗೂ ಹಿಂದೂ ವಿರೋಧಿ ಮನಸ್ಥಿತಿಯನ್ನು ಬಲವಾಗಿ ಖಂಡಿಸಿದೆ’ ಎಂಬುದಾಗಿ ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್ಗೆ ಪ್ರತಿಕ್ರಿಯಿಸಿದ ಶರವಣನ್,‘ಪಕ್ಷವು ಹಿಂದೂ ವಿರೋಧಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ಸನಾತನ ಧರ್ಮ’ ಕುರಿತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶ ತಪ್ಪು’ ಎಂದು ಆಡಳಿತಾರೂಢ ಪಕ್ಷ ಡಿಎಂಕೆ ಗುರುವಾರ ಹೇಳಿದೆ.</p>.<p>ಅಲ್ಲದೆ,‘ಹೈಕೋರ್ಟ್ ನ್ಯಾಯಾಧೀಶರ ವೈಯಕ್ತಿಕ ನಂಬಿಕೆಗೆ ತೀರ್ಪಿನಲ್ಲಿ ಅವಕಾಶ ಇಲ್ಲ’ ಎಂದು ಡಿಎಂಕೆ ವಕ್ತಾರ ಶರವಣನ್ ಅಣ್ಣಾದೊರೈ ಹೇಳಿದ್ದಾರೆ.</p>.<p>‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು’ ಎಂದು ಕಾರ್ಯಕ್ರಮವೊಂದರಲ್ಲಿ ಉದಯನಿಧಿ ಸ್ಟಾಲಿನ್ ಕರೆನೀಡಿದ್ದರು. ಈ ಹೇಳಿಕೆ ಖಂಡಿಸಿ ಬಿಜೆಪಿ ನಾಯಕ ಅಮಿತ್ ಮಾಳವೀಯ ಪೋಸ್ಟ್ ಮಾಡಿದ್ದರು. ಈ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಳವೀಯ ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್ನ ಮದುರೆ ಪೀಠ, ಮಾಳವೀಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡಿ ಆದೇಶಿಸಿತ್ತು. ಉದಯನಿಧಿ ಅವರ ಹೇಳಿಕೆ ‘ದ್ವೇಷ ಭಾಷಣ’ಕ್ಕೆ ಸಮ ಎಂದೂ ಹೇಳಿತ್ತು.</p>.<p>ಮದುರೆ ಪೀಠದ ಈ ಆದೇಶ ಕುರಿತು ಪ್ರತಿಕ್ರಿಯಿಸಿರುವ ಶರವಣನ್,‘ಈ ತೀರ್ಪು ತಪ್ಪು’ ಎಂದು ಹೇಳಿದರು.</p>.<p>‘ಮತ್ತೊಂದು ಬದಿಯವರ ವಾದ ಆಲಿಸದೇ ತೀರ್ಪು ನೀಡಬಾರದು ಎಂಬುದು ನ್ಯಾಯಶಾಸ್ತ್ರದ ತತ್ವ. ಮದುರೆ ಪೀಠದ ಆದೇಶ ಈ ತತ್ವಕ್ಕೆ ಅನುಗುಣವಾಗಿಲ್ಲ’ ಎಂದರು.</p>.ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ: ಮದ್ರಾಸ್ ಹೈಕೋರ್ಟ್.ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ತಲೆದಂಡಕ್ಕೆ ಬಿಜೆಪಿ ಆಗ್ರಹ.<p>‘ಮದುರೆ ಪೀಠದ ಆದೇಶವು ಡಿಎಂಕೆ ಪಕ್ಷದ ಸಂಕುಚಿತ ಹಾಗೂ ಹಿಂದೂ ವಿರೋಧಿ ಮನಸ್ಥಿತಿಯನ್ನು ಬಲವಾಗಿ ಖಂಡಿಸಿದೆ’ ಎಂಬುದಾಗಿ ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್ಗೆ ಪ್ರತಿಕ್ರಿಯಿಸಿದ ಶರವಣನ್,‘ಪಕ್ಷವು ಹಿಂದೂ ವಿರೋಧಿಯಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>