<p><strong>ಚೆನ್ನೈ: </strong>ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.</p>.<p>ಈ ಮೂಲಕ ಡಿಎಂಕೆ ಹಾಗೂ ಆರ್.ಎನ್.ರವಿ ನಡುವಣ ತಿಕ್ಕಾಟ ಮತ್ತೊಂದು ಮಗ್ಗುಲಿಗೆ ಹೊರಳಿದೆ.</p>.<p>ಶಿವಾಜಿ ಕೃಷ್ಣಮೂರ್ತಿ ಕಾನೂನು ಬಾಹಿರವಾಗಿ ನಡೆದುಕೊಂಡಿರುವುದರಿಂದ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಡಿಎಂಕೆ ಹೇಳಿದೆ.</p>.<p>ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ವೈಯಕ್ತಿಕವಾದದ್ದು, ಅದಕ್ಕೂ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ. ನಮ್ಮ ಪಕ್ಷ ರಾಜ್ಯಪಾಲರನ್ನು ಗೌರವಿಸುತ್ತದೆ ಎಂದು ಡಿಎಂಕೆ ಹೇಳಿದೆ.</p>.<p>‘ನೀವು ಸರ್ಕಾರ ನೀಡಿದ ಭಾಷಣವನ್ನು ಓದದಿದ್ದರೆ, ಕಾಶ್ಮೀರಕ್ಕೆ ಹೋಗಿ, ಅಲ್ಲಿಗೆ ನಾವು ಭಯೋತ್ಪಾದಕರನ್ನು ಕಳುಹಿಸುತ್ತೇವೆ, ಅವರು ನಿಮ್ಮನ್ನು ಗುಂಡಿಕ್ಕಿ ಕೊಲ್ಲುತ್ತಾರೆ‘ ಎಂದು ಕೃಷ್ಣಮೂರ್ತಿ ಹೇಳಿದ್ದರು.</p>.<p>‘ರಾಜ್ಯಪಾಲರು ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಹೇಳಲು ನಿರಾಕರಿಸಿದರೆ, ಅವರ ಮೇಲೆ ಹಲ್ಲೆ ಮಾಡುವ ಹಕ್ಕು ನನಗೆ ಇಲ್ಲವೇ? ಎಂದು ಅವರು ಪ್ರಶ್ನೆ ಮಾಡಿದ್ದರು.</p>.<p>ಈ ಬಗ್ಗೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಜೊತೆ ವಿಡಿಯೊ ಹಾಗೂ ಆಡಿಯೊ ತುಣುಕುಗಳನ್ನು ಪೊಲೀಸರಿಗೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.</p>.<p>ಈ ಮೂಲಕ ಡಿಎಂಕೆ ಹಾಗೂ ಆರ್.ಎನ್.ರವಿ ನಡುವಣ ತಿಕ್ಕಾಟ ಮತ್ತೊಂದು ಮಗ್ಗುಲಿಗೆ ಹೊರಳಿದೆ.</p>.<p>ಶಿವಾಜಿ ಕೃಷ್ಣಮೂರ್ತಿ ಕಾನೂನು ಬಾಹಿರವಾಗಿ ನಡೆದುಕೊಂಡಿರುವುದರಿಂದ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಡಿಎಂಕೆ ಹೇಳಿದೆ.</p>.<p>ಶಿವಾಜಿ ಕೃಷ್ಣಮೂರ್ತಿ ಹೇಳಿಕೆ ವೈಯಕ್ತಿಕವಾದದ್ದು, ಅದಕ್ಕೂ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ. ನಮ್ಮ ಪಕ್ಷ ರಾಜ್ಯಪಾಲರನ್ನು ಗೌರವಿಸುತ್ತದೆ ಎಂದು ಡಿಎಂಕೆ ಹೇಳಿದೆ.</p>.<p>‘ನೀವು ಸರ್ಕಾರ ನೀಡಿದ ಭಾಷಣವನ್ನು ಓದದಿದ್ದರೆ, ಕಾಶ್ಮೀರಕ್ಕೆ ಹೋಗಿ, ಅಲ್ಲಿಗೆ ನಾವು ಭಯೋತ್ಪಾದಕರನ್ನು ಕಳುಹಿಸುತ್ತೇವೆ, ಅವರು ನಿಮ್ಮನ್ನು ಗುಂಡಿಕ್ಕಿ ಕೊಲ್ಲುತ್ತಾರೆ‘ ಎಂದು ಕೃಷ್ಣಮೂರ್ತಿ ಹೇಳಿದ್ದರು.</p>.<p>‘ರಾಜ್ಯಪಾಲರು ತಮ್ಮ ಭಾಷಣದಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಹೇಳಲು ನಿರಾಕರಿಸಿದರೆ, ಅವರ ಮೇಲೆ ಹಲ್ಲೆ ಮಾಡುವ ಹಕ್ಕು ನನಗೆ ಇಲ್ಲವೇ? ಎಂದು ಅವರು ಪ್ರಶ್ನೆ ಮಾಡಿದ್ದರು.</p>.<p>ಈ ಬಗ್ಗೆ ರಾಜ್ಯಪಾಲರ ಕಚೇರಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಜೊತೆ ವಿಡಿಯೊ ಹಾಗೂ ಆಡಿಯೊ ತುಣುಕುಗಳನ್ನು ಪೊಲೀಸರಿಗೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>