<p><strong>ಚೆನ್ನೈ</strong>: ಲೋಕಸಭೆ ಅಂಗೀಕರಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಹೇಳಿದೆ.</p><p>ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಡಿಎಂಕೆ ಶಾಸಕರು ಕಪ್ಪುಪಟ್ಟಿ ಧರಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.</p><p>ನಂತರ ಸದನವನ್ನುದ್ದೇಶಿಸಿ ಮಾತನಾಡಿದ ಸ್ಟಾಲಿನ್, ‘ವಕ್ಫ್ ಆಸ್ತಿ ವಿಚಾರವಾಗಿ ಡಿಎಂಕೆ ಹೋರಾಡಲಿದ್ದು, ಜಯಶಾಲಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ತಮಿಳುನಾಡು ವಿಧಾನಸಭೆಯು ಮಾರ್ಚ್ 27ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಹಾಳುಗೆಡುವುದಲ್ಲದೇ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ’ ಎಂದು ಸ್ಟಾಲಿನ್ ಸದನಕ್ಕೆ ಹೇಳಿದರು.</p><p>‘ದೇಶದ ಬಹುತೇಕ ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳ ಸಂಖ್ಯೆಯನ್ನು ನಿರ್ಲಕ್ಷಿಸಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಲೋಕಸಭೆ ಅಂಗೀಕರಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಹೇಳಿದೆ.</p><p>ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಡಿಎಂಕೆ ಶಾಸಕರು ಕಪ್ಪುಪಟ್ಟಿ ಧರಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.</p><p>ನಂತರ ಸದನವನ್ನುದ್ದೇಶಿಸಿ ಮಾತನಾಡಿದ ಸ್ಟಾಲಿನ್, ‘ವಕ್ಫ್ ಆಸ್ತಿ ವಿಚಾರವಾಗಿ ಡಿಎಂಕೆ ಹೋರಾಡಲಿದ್ದು, ಜಯಶಾಲಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ತಮಿಳುನಾಡು ವಿಧಾನಸಭೆಯು ಮಾರ್ಚ್ 27ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಹಾಳುಗೆಡುವುದಲ್ಲದೇ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ’ ಎಂದು ಸ್ಟಾಲಿನ್ ಸದನಕ್ಕೆ ಹೇಳಿದರು.</p><p>‘ದೇಶದ ಬಹುತೇಕ ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳ ಸಂಖ್ಯೆಯನ್ನು ನಿರ್ಲಕ್ಷಿಸಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>