ಚೆನ್ನೈ: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ವಿರುದ್ಧದ ತನ್ನ ಅಭಿಪ್ರಾಯವನ್ನು ತೀಕ್ಷ್ಣಗೊಳಿಸುವ ನಿಟ್ಟಿನಲ್ಲಿ ತಮಿಳುನಾಡಿನ ಡಿಎಂಕೆ ನೇತೃತ್ವದ ಸರ್ಕಾರವು ಆಗಸ್ಟ್ 20ರಂದು ಒಂದು ದಿನದ ಮಟ್ಟಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ‘ನೀಟ್’ ಪರ ಕೇಂದ್ರ ಸರ್ಕಾರದ ಸಮರ್ಥನೆಯನ್ನು ಪ್ರತಿಪಾದಿಸಿರುವ ರಾಜ್ಯಪಾಲ ಆರ್.ಎನ್. ರವಿ ಅವರ ಬೇಜವಾಬ್ದಾರಿಯುತ ಹೇಳಿಕೆ ಖಂಡಿಸಿ ಪ್ರತಿಭಟನೆಯನ್ನೂ ನಡೆಸಲಿದೆ.