<p><strong>ಚೆನ್ನೈ:</strong> ‘ಆಡಳಿತಾರೂಢ ಡಿಎಂಕೆ ಪಕ್ಷವೇ 2026 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪುನಃ ಅಧಿಕಾರಕ್ಕೆ ಬರಲಿದೆ‘ ಎಂದು ಎಐಎಡಿಎಂಕೆ ಪಕ್ಷದ ಉಚ್ಚಾಟಿತ ನಾಯಕ ಓ. ಪನ್ನೀರಸೆಲ್ವಂ ಭರವಸೆ ವ್ಯಕ್ತಪಡಿಸಿದ್ದಾರೆ.</p><p>ಇತ್ತೀಚೆಗೆ ಎಐಎಡಿಎಂಕೆಯಿಂದ ಉಚ್ಚಾಟನೆಗೆ ಒಳಗಾಗಿರುವ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಪನ್ನೀರಸೆಲ್ವಂ ಅವರು ಇಂದು ಸಚಿವಾಲಯದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದರು.</p><p>ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಎಂ.ಕೆ. ಸ್ಟಾಲಿನ್ ಸಿಎಂ ಆಗಿ ಯಶಸ್ವಿಯಾಗಿ 5 ವರ್ಷ ಪೂರೈಸುತ್ತಿರುವುದರಿಂದ ಅವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಿದ್ದೇನೆ’ ಎಂದು ವಿವರಿಸಿದರು.</p><p>‘ಎಐಎಡಿಎಂಕೆ ಕೆಲ ಶಾಸಕರು ಸಹ ಎಂ.ಕೆ. ಸ್ಟಾಲಿನ್ ಅವರನ್ನು ಸಮರ್ಥಿಸಿಕೊಂಡಿರುವರಲ್ಲ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಜನಗಳ ಮನದಲ್ಲಿ ಏನಿದೆಯೋ ಅದನ್ನೇ ಅವರು ಹೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p><p>‘ಸತತ ಎರಡನೇ ಭಾರಿಗೆ ಡಿಎಂಕೆ ಸರ್ಕಾರ ರಚಿಸುವುದು ಪಕ್ಕಾ. ಜನಗಳೂ ಅದನ್ನೇ ಹೇಳುತ್ತಿದ್ದಾರೆ. ಏಕೆಂದರೆ ಸಿಎಂ ಸ್ಟಾಲಿನ್ ಅವರ ಕೆಲಸಗಳು ಆ ರೀತಿ ಆಗಿವೆ’ ಎಂದರು.</p><p>‘ಡಿಎಂಕೆ ಸೇರುವಿರಾ‘? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸ್ವಲ್ಪ ತಾಳ್ಮೆಯಿಂದ ಇರಿ’ ಎಂದಷ್ಟೇ ಉತ್ತರಿಸಿದರು. ಓ. ಪನ್ನೀರಸೆಲ್ವಂ ಅವರು ಇತ್ತೀಚೆಗೆ ಎಐಎಡಿಎಂಕೆಯಲ್ಲಿ ಮಾಜಿ ಸಿಎಂ ಪಳನಿಸ್ವಾಮಿ ಅವರ ಜೊತೆ ಮುನಿಸಿನಿಂದ ಉಚ್ಚಾಟನೆಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ಆಡಳಿತಾರೂಢ ಡಿಎಂಕೆ ಪಕ್ಷವೇ 2026 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪುನಃ ಅಧಿಕಾರಕ್ಕೆ ಬರಲಿದೆ‘ ಎಂದು ಎಐಎಡಿಎಂಕೆ ಪಕ್ಷದ ಉಚ್ಚಾಟಿತ ನಾಯಕ ಓ. ಪನ್ನೀರಸೆಲ್ವಂ ಭರವಸೆ ವ್ಯಕ್ತಪಡಿಸಿದ್ದಾರೆ.</p><p>ಇತ್ತೀಚೆಗೆ ಎಐಎಡಿಎಂಕೆಯಿಂದ ಉಚ್ಚಾಟನೆಗೆ ಒಳಗಾಗಿರುವ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಪನ್ನೀರಸೆಲ್ವಂ ಅವರು ಇಂದು ಸಚಿವಾಲಯದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದರು.</p><p>ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಎಂ.ಕೆ. ಸ್ಟಾಲಿನ್ ಸಿಎಂ ಆಗಿ ಯಶಸ್ವಿಯಾಗಿ 5 ವರ್ಷ ಪೂರೈಸುತ್ತಿರುವುದರಿಂದ ಅವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಿದ್ದೇನೆ’ ಎಂದು ವಿವರಿಸಿದರು.</p><p>‘ಎಐಎಡಿಎಂಕೆ ಕೆಲ ಶಾಸಕರು ಸಹ ಎಂ.ಕೆ. ಸ್ಟಾಲಿನ್ ಅವರನ್ನು ಸಮರ್ಥಿಸಿಕೊಂಡಿರುವರಲ್ಲ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಜನಗಳ ಮನದಲ್ಲಿ ಏನಿದೆಯೋ ಅದನ್ನೇ ಅವರು ಹೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p><p>‘ಸತತ ಎರಡನೇ ಭಾರಿಗೆ ಡಿಎಂಕೆ ಸರ್ಕಾರ ರಚಿಸುವುದು ಪಕ್ಕಾ. ಜನಗಳೂ ಅದನ್ನೇ ಹೇಳುತ್ತಿದ್ದಾರೆ. ಏಕೆಂದರೆ ಸಿಎಂ ಸ್ಟಾಲಿನ್ ಅವರ ಕೆಲಸಗಳು ಆ ರೀತಿ ಆಗಿವೆ’ ಎಂದರು.</p><p>‘ಡಿಎಂಕೆ ಸೇರುವಿರಾ‘? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸ್ವಲ್ಪ ತಾಳ್ಮೆಯಿಂದ ಇರಿ’ ಎಂದಷ್ಟೇ ಉತ್ತರಿಸಿದರು. ಓ. ಪನ್ನೀರಸೆಲ್ವಂ ಅವರು ಇತ್ತೀಚೆಗೆ ಎಐಎಡಿಎಂಕೆಯಲ್ಲಿ ಮಾಜಿ ಸಿಎಂ ಪಳನಿಸ್ವಾಮಿ ಅವರ ಜೊತೆ ಮುನಿಸಿನಿಂದ ಉಚ್ಚಾಟನೆಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>