<p><strong>ನವದೆಹಲಿ</strong>: ಪ್ರಸ್ತಾಪಿತ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯ ಬಗ್ಗೆ ಡಿಎಂಕೆ ನಾಯಕ ಎಂ. ಷಣ್ಮುಗಂ ಶುಕ್ರವಾರ ರಾಜ್ಯಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ್ದು, ಸಂಸತ್ತಿನಲ್ಲಿ ತಮಿಳುನಾಡಿನಂತಹ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯವನ್ನು ರಕ್ಷಿಸಲು 1997ರ ಜನಸಂಖ್ಯಾ ದತ್ತಾಂಶವನ್ನು ಆಧರಿಸಿ ಪುನರ್ ವಿಂಗಡಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p><p>ಮಾರ್ಚ್ 22ರಂದು ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕರೆದಿರುವ ಸಭೆಗೆ ಮುಂಚಿತವಾಗಿ ಈ ಹೇಳಿಕೆ ಬಂದಿದೆ. ಈ ವಿಷಯವನ್ನು ಚರ್ಚಿಸಲು ಹಲವು ರಾಜ್ಯಗಳ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.</p><p>ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಷಣ್ಮುಗಂ, ಮಾರ್ಚ್ 7ರಂದು ಚೆನ್ನೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೂ ಆಕ್ಷೇಪ ವ್ಯಕ್ತಪಡಿಸಿದರು.</p><p>ಕ್ಷೇತ್ರ ಪುನರ್ ವಿಂಗಡಣೆಯ ನಂತರ 'ತಮಿಳುನಾಡಿನಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯಲ್ಲಿ ಯಾವುದೇ ಇಳಿಕೆಯಾಗುವುದಿಲ್ಲ' ಎಂದು ಶಾ ಭರವಸೆ ನೀಡಿದ್ದರು. ಈ ಹೇಳಿಕೆಯು ಪರಿಹಾರಕ್ಕಿಂತ ಹೆಚ್ಚಿನ ಗೊಂದಲವನ್ನು ಸೃಷ್ಟಿಸಿದೆ ಎಂದು ಷಣ್ಮುಗಂ ಹೇಳಿದ್ದಾರೆ.</p><p>ಕ್ಷೇತ್ರ ಪುನರ್ ವಿಂಗಡಣೆಯು ಇತ್ತೀಚಿನ ಜನಸಂಖ್ಯಾ ದತ್ತಾಂಶವನ್ನು ಅವಲಂಬಿಸಿದ್ದರೆ ದಕ್ಷಿಣದ ರಾಜ್ಯಗಳು ತಮ್ಮ ಸಂಸದೀಯ ಸ್ಥಾನಗಳಲ್ಲಿ ಕಡಿತವಾಗುವ ಆತಂಕವನ್ನು ಹೊಂದಿವೆ ಎಂದು ಷಣ್ಮುಗಂ ಒತ್ತಿ ಹೇಳಿದ್ದಾರೆ.</p><p>‘ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಿದರೆ, ಅದನ್ನು ಅನುಪಾತದ ಆಧಾರದ ಮೇಲೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ನಿರ್ಧರಿಸಲು 1997ರ ಜನಗಣತಿಯ ದತ್ತಾಂಶವನ್ನು ಬಳಸಬೇಕು. ಕನಿಷ್ಠ 25 ವರ್ಷಗಳವರೆಗೆ ಬೇರೆ ಜನಗಣತಿಯನ್ನು ಪರಿಗಣಿಸಬಾರದು’ಎಂದು ಒತ್ತಾಯಿಸಿದ್ದಾರೆ.</p><p>ಕೇಂದ್ರ ಸರ್ಕಾರವು ಇನ್ನೂ ಜನಗಣತಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ ಎಂದು ಷಣ್ಮುಗಂ ಗಮನಸೆಳೆದರು. ಕುಟುಂಬ ಯೋಜನಾ ನೀತಿಗಳನ್ನು ಅನುಸರಿಸುವ ದಕ್ಷಿಣ ರಾಜ್ಯಗಳನ್ನು ಕೇಂದ್ರವು ಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿದರು.</p> .ಎಫ್ಐಐ ಒಳಹರಿವು: ಡಾಲರ್ ಎದುರು ರೂಪಾಯಿ ಮೌಲ್ಯ 36 ಪೈಸೆ ಹೆಚ್ಚಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಸ್ತಾಪಿತ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯ ಬಗ್ಗೆ ಡಿಎಂಕೆ ನಾಯಕ ಎಂ. ಷಣ್ಮುಗಂ ಶುಕ್ರವಾರ ರಾಜ್ಯಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ್ದು, ಸಂಸತ್ತಿನಲ್ಲಿ ತಮಿಳುನಾಡಿನಂತಹ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯವನ್ನು ರಕ್ಷಿಸಲು 1997ರ ಜನಸಂಖ್ಯಾ ದತ್ತಾಂಶವನ್ನು ಆಧರಿಸಿ ಪುನರ್ ವಿಂಗಡಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p><p>ಮಾರ್ಚ್ 22ರಂದು ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕರೆದಿರುವ ಸಭೆಗೆ ಮುಂಚಿತವಾಗಿ ಈ ಹೇಳಿಕೆ ಬಂದಿದೆ. ಈ ವಿಷಯವನ್ನು ಚರ್ಚಿಸಲು ಹಲವು ರಾಜ್ಯಗಳ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.</p><p>ಗೃಹ ಸಚಿವಾಲಯದ ಕಾರ್ಯವೈಖರಿಯ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಷಣ್ಮುಗಂ, ಮಾರ್ಚ್ 7ರಂದು ಚೆನ್ನೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಗೂ ಆಕ್ಷೇಪ ವ್ಯಕ್ತಪಡಿಸಿದರು.</p><p>ಕ್ಷೇತ್ರ ಪುನರ್ ವಿಂಗಡಣೆಯ ನಂತರ 'ತಮಿಳುನಾಡಿನಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯಲ್ಲಿ ಯಾವುದೇ ಇಳಿಕೆಯಾಗುವುದಿಲ್ಲ' ಎಂದು ಶಾ ಭರವಸೆ ನೀಡಿದ್ದರು. ಈ ಹೇಳಿಕೆಯು ಪರಿಹಾರಕ್ಕಿಂತ ಹೆಚ್ಚಿನ ಗೊಂದಲವನ್ನು ಸೃಷ್ಟಿಸಿದೆ ಎಂದು ಷಣ್ಮುಗಂ ಹೇಳಿದ್ದಾರೆ.</p><p>ಕ್ಷೇತ್ರ ಪುನರ್ ವಿಂಗಡಣೆಯು ಇತ್ತೀಚಿನ ಜನಸಂಖ್ಯಾ ದತ್ತಾಂಶವನ್ನು ಅವಲಂಬಿಸಿದ್ದರೆ ದಕ್ಷಿಣದ ರಾಜ್ಯಗಳು ತಮ್ಮ ಸಂಸದೀಯ ಸ್ಥಾನಗಳಲ್ಲಿ ಕಡಿತವಾಗುವ ಆತಂಕವನ್ನು ಹೊಂದಿವೆ ಎಂದು ಷಣ್ಮುಗಂ ಒತ್ತಿ ಹೇಳಿದ್ದಾರೆ.</p><p>‘ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಿದರೆ, ಅದನ್ನು ಅನುಪಾತದ ಆಧಾರದ ಮೇಲೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ನಿರ್ಧರಿಸಲು 1997ರ ಜನಗಣತಿಯ ದತ್ತಾಂಶವನ್ನು ಬಳಸಬೇಕು. ಕನಿಷ್ಠ 25 ವರ್ಷಗಳವರೆಗೆ ಬೇರೆ ಜನಗಣತಿಯನ್ನು ಪರಿಗಣಿಸಬಾರದು’ಎಂದು ಒತ್ತಾಯಿಸಿದ್ದಾರೆ.</p><p>ಕೇಂದ್ರ ಸರ್ಕಾರವು ಇನ್ನೂ ಜನಗಣತಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ ಎಂದು ಷಣ್ಮುಗಂ ಗಮನಸೆಳೆದರು. ಕುಟುಂಬ ಯೋಜನಾ ನೀತಿಗಳನ್ನು ಅನುಸರಿಸುವ ದಕ್ಷಿಣ ರಾಜ್ಯಗಳನ್ನು ಕೇಂದ್ರವು ಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿದರು.</p> .ಎಫ್ಐಐ ಒಳಹರಿವು: ಡಾಲರ್ ಎದುರು ರೂಪಾಯಿ ಮೌಲ್ಯ 36 ಪೈಸೆ ಹೆಚ್ಚಳ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>