ಶ್ರೀನಗರ: ಇಲ್ಲಿನ ಹೈದರ್ಪೋರಾದಲ್ಲಿ ಸೋಮವಾರ ನಡೆದ ಎನ್ಕೌಂಟರ್ ವೇಳೆ ತೀವ್ರವಾಗಿ ಗಾಯಗೊಂಡಿದ್ದ ದಂತವೈದ್ಯರೊಬ್ಬರುಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸೋಮವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ದಂತ ಶಸ್ತ್ರಚಿಕಿತ್ಸಕ ಮುದಾಸಿರ್ ಗುಲ್ ಅವರು ಗಾಯಗೊಂಡಿದ್ದರು. ಎನ್ಕೌಂಟರ್ ವೇಳೆ ಇಬ್ಬರು ಉಗ್ರರು ಮತ್ತು ಒಬ್ಬ ಉಗ್ರನ ಸಹಚರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದರು.