<p><strong>ಕೋಲ್ಕತ್ತ:</strong> ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಾಂಗ್ರೆಸ್ ಗುರುವಾರ ಕೋಲ್ಕತ್ತದಲ್ಲಿ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಿತ್ತು.</p>.<p>ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಪ್ರಕರಣದ ವಿರುದ್ಧ ಹಲವಾರು ನಾಗರಿಕ ಸಮಾಜ ಸಂಘಟನೆಗಳು ಸಹ ನಗರದಲ್ಲಿ ಬೀದಿಗಿಳಿದ್ದವು. </p>.<p>ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ನೇತೃತ್ವದಲ್ಲಿ ನಡೆದ ರ್ಯಾಲಿಯು ಕಾಲೇಜು ಸ್ಕ್ವೇರ್ನಿಂದ ಪ್ರಾರಂಭವಾಗಿ ಉತ್ತರ ಕೋಲ್ಕತ್ತದ ಶ್ಯಾಂಬಜಾರ್ ಪೈವ್ ಪಾಯಿಂಟ್ ಕ್ರಾಸಿಂಗ್ನ ಕಡೆಗೆ ಸಾಗಿತು. </p>.<p>ಮತ್ತೊಂದು ರ್ಯಾಲಿಯಲ್ಲಿ ಭಾಗವಹಿಸಿದ ನೂರಾರು ಮಹಿಳೆಯರು ಕೋಲ್ಕತ್ತದ ಬೀದಿಗಳಲ್ಲಿ 'ಅಂಗೀಕರ್ ಜಾತ್ರೆ' ಅಥವಾ 'ಪ್ರತಿಜ್ಞಾ ಯಾತ್ರೆ' ನಡೆಸಿದರು. ಘೋಷಣಾ ಫಲಕಗಳು ಮತ್ತು ಬ್ಯಾನರ್ಗಳನ್ನು ಹಿಡಿದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ, ನಗರದಲ್ಲಿ ಮಹಿಳೆಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. </p> <p>ಪಥೇರ್ ದಾಬಿ ಹೆಸರಿನಲ್ಲಿ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವಂತೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.</p> .ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಮುಂದುವರಿದ ಸಿಬಿಐ ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಾಂಗ್ರೆಸ್ ಗುರುವಾರ ಕೋಲ್ಕತ್ತದಲ್ಲಿ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಿತ್ತು.</p>.<p>ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾದ ಪ್ರಕರಣದ ವಿರುದ್ಧ ಹಲವಾರು ನಾಗರಿಕ ಸಮಾಜ ಸಂಘಟನೆಗಳು ಸಹ ನಗರದಲ್ಲಿ ಬೀದಿಗಿಳಿದ್ದವು. </p>.<p>ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ನೇತೃತ್ವದಲ್ಲಿ ನಡೆದ ರ್ಯಾಲಿಯು ಕಾಲೇಜು ಸ್ಕ್ವೇರ್ನಿಂದ ಪ್ರಾರಂಭವಾಗಿ ಉತ್ತರ ಕೋಲ್ಕತ್ತದ ಶ್ಯಾಂಬಜಾರ್ ಪೈವ್ ಪಾಯಿಂಟ್ ಕ್ರಾಸಿಂಗ್ನ ಕಡೆಗೆ ಸಾಗಿತು. </p>.<p>ಮತ್ತೊಂದು ರ್ಯಾಲಿಯಲ್ಲಿ ಭಾಗವಹಿಸಿದ ನೂರಾರು ಮಹಿಳೆಯರು ಕೋಲ್ಕತ್ತದ ಬೀದಿಗಳಲ್ಲಿ 'ಅಂಗೀಕರ್ ಜಾತ್ರೆ' ಅಥವಾ 'ಪ್ರತಿಜ್ಞಾ ಯಾತ್ರೆ' ನಡೆಸಿದರು. ಘೋಷಣಾ ಫಲಕಗಳು ಮತ್ತು ಬ್ಯಾನರ್ಗಳನ್ನು ಹಿಡಿದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ, ನಗರದಲ್ಲಿ ಮಹಿಳೆಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. </p> <p>ಪಥೇರ್ ದಾಬಿ ಹೆಸರಿನಲ್ಲಿ ಮತ್ತೊಂದು ರ್ಯಾಲಿಯನ್ನು ಆಯೋಜಿಸಲಾಗಿತ್ತು. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವಂತೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.</p> .ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಮುಂದುವರಿದ ಸಿಬಿಐ ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>