<p><strong>ಕೋಯಿಕ್ಕೋಡ್ (ಕೇರಳ):</strong> ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬ, 4 ವರ್ಷದ ಹೆಣ್ಣು ಮಗುವಿನ ಕೈಗೆ ಶಸ್ತ್ರಚಿಕಿತ್ಸೆ ಮಾಡುವ ಬದಲು ಮಗುವಿನ ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿರುವ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಇಂಥದ್ದೊಂದು ಅಚಾತುರ್ಯ ಮಾಡಿರುವ ನಿರ್ಲಕ್ಷ್ಯ ವೈದ್ಯನನ್ನು ಅಮಾನತುಗೊಳಿಸಲಾಗಿದೆ. </p>.<p>ಆಗಿದ್ದೇನು?: ಮಗುವಿನ ಒಂದು ಕೈಯಲ್ಲಿ 6 ಬೆರಳುಗಳಿವೆ. ಈ ಆರನೇ ಬೆರಳನ್ನು ತೆಗೆಸಲು ಮೆಡಿಕಲ್ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಲಾಗಿತ್ತು. ಶಸ್ತ್ರಚಿಕಿತ್ಸೆಗೆ ನಿಗದಿಯಾಗಿದ್ದ ವೈದ್ಯ ಅಸೋಸಿಯೇಟ್ ಪ್ರೊಫೆಸರ್ ಡಾ. ಬೆಜಾನ್ ಜಾನ್ಸನ್ ಅವರು ಮಗುವಿನ ನಾಲಗೆಗೆ ಶಸ್ತ್ರಚಿಕಿತ್ಸೆಗೆ ಮಾಡಿಬಿಟ್ಟಿದ್ದಾರೆ.</p>.<p>ಮಗುವಿನ ಬಾಯಿಯಲ್ಲಿ ಹತ್ತಿಯನ್ನು ತುಂಬಿರುವುದನ್ನು ಗಮನಿಸಿ ನೋಡಿದಾಗ ಕೈ ಬದಲಾಗಿ ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿರುವ ದೋಷವು ಬೆಳಕಿಗೆ ಬಂದಿದೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. ಸದ್ಯ ಮಗುವಿನ ನಾಲಗೆಗೆ ಯಾವುದೇ ತೊಂದರೆ ಇಲ್ಲ. </p>.<p>ಪ್ರಕರಣದಲ್ಲಿ ವೈದ್ಯ ಜಾನ್ಸನ್ ಅವರನ್ನು ಅಮಾನತುಗೊಳಿಸಲಾಗಿದೆ. </p>.<p>ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆ ಕುರಿತು ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. </p>.<p> <strong>ಒಂದೇ ದಿನ ಎರಡು ಶಸ್ತ್ರಚಿಕಿತ್ಸೆ ಇದ್ದದ್ದೇ ಕಾರಣ</strong></p><p> ಒಂದೇ ದಿನಾಂಕದಂದು ಇಬ್ಬರು ಮಕ್ಕಳ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಲಾಗಿತ್ತು. ಈ ಪೈಕಿ ಒಂದು ಮಗುವಿಗೆ ನಾಲಗೆಯ ಮತ್ತು ಇನ್ನೊಂದು ಮಗುವಿಗೆ ಬೆರಳಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿತ್ತು. ಹೀಗಾಗಿ ಗೊಂದಲದಿಂದ ಘಟನೆ ನಡೆದಿದೆ ಎಂದು ಆಸ್ಪತ್ರೆ ತಿಳಿಸಿದೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್ (ಕೇರಳ):</strong> ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬ, 4 ವರ್ಷದ ಹೆಣ್ಣು ಮಗುವಿನ ಕೈಗೆ ಶಸ್ತ್ರಚಿಕಿತ್ಸೆ ಮಾಡುವ ಬದಲು ಮಗುವಿನ ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿರುವ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಇಂಥದ್ದೊಂದು ಅಚಾತುರ್ಯ ಮಾಡಿರುವ ನಿರ್ಲಕ್ಷ್ಯ ವೈದ್ಯನನ್ನು ಅಮಾನತುಗೊಳಿಸಲಾಗಿದೆ. </p>.<p>ಆಗಿದ್ದೇನು?: ಮಗುವಿನ ಒಂದು ಕೈಯಲ್ಲಿ 6 ಬೆರಳುಗಳಿವೆ. ಈ ಆರನೇ ಬೆರಳನ್ನು ತೆಗೆಸಲು ಮೆಡಿಕಲ್ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಲಾಗಿತ್ತು. ಶಸ್ತ್ರಚಿಕಿತ್ಸೆಗೆ ನಿಗದಿಯಾಗಿದ್ದ ವೈದ್ಯ ಅಸೋಸಿಯೇಟ್ ಪ್ರೊಫೆಸರ್ ಡಾ. ಬೆಜಾನ್ ಜಾನ್ಸನ್ ಅವರು ಮಗುವಿನ ನಾಲಗೆಗೆ ಶಸ್ತ್ರಚಿಕಿತ್ಸೆಗೆ ಮಾಡಿಬಿಟ್ಟಿದ್ದಾರೆ.</p>.<p>ಮಗುವಿನ ಬಾಯಿಯಲ್ಲಿ ಹತ್ತಿಯನ್ನು ತುಂಬಿರುವುದನ್ನು ಗಮನಿಸಿ ನೋಡಿದಾಗ ಕೈ ಬದಲಾಗಿ ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿರುವ ದೋಷವು ಬೆಳಕಿಗೆ ಬಂದಿದೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. ಸದ್ಯ ಮಗುವಿನ ನಾಲಗೆಗೆ ಯಾವುದೇ ತೊಂದರೆ ಇಲ್ಲ. </p>.<p>ಪ್ರಕರಣದಲ್ಲಿ ವೈದ್ಯ ಜಾನ್ಸನ್ ಅವರನ್ನು ಅಮಾನತುಗೊಳಿಸಲಾಗಿದೆ. </p>.<p>ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆ ಕುರಿತು ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. </p>.<p> <strong>ಒಂದೇ ದಿನ ಎರಡು ಶಸ್ತ್ರಚಿಕಿತ್ಸೆ ಇದ್ದದ್ದೇ ಕಾರಣ</strong></p><p> ಒಂದೇ ದಿನಾಂಕದಂದು ಇಬ್ಬರು ಮಕ್ಕಳ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಲಾಗಿತ್ತು. ಈ ಪೈಕಿ ಒಂದು ಮಗುವಿಗೆ ನಾಲಗೆಯ ಮತ್ತು ಇನ್ನೊಂದು ಮಗುವಿಗೆ ಬೆರಳಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿತ್ತು. ಹೀಗಾಗಿ ಗೊಂದಲದಿಂದ ಘಟನೆ ನಡೆದಿದೆ ಎಂದು ಆಸ್ಪತ್ರೆ ತಿಳಿಸಿದೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>