<p><strong>ನವದೆಹಲಿ:</strong> ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಸಮಿತಿ ರಚಿಸುವಂತೆ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್ಎಐಎಂಎ) ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಬುಧವಾರ ಪತ್ರ ಬರೆದು ಒತ್ತಾಯಿಸಿದೆ.</p>.<p>ಘಟನೆಯು ದೇಶದಲ್ಲಿನ ಮಕ್ಕಳ ಔಷಧ ಉತ್ಪಾದನೆ ಮತ್ತು ವಿತರಣೆ ಘಟಕಗಳ ಮೇಲ್ವಿಚಾರಣಾ ವ್ಯವಸ್ಥೆ, ಅವುಗಳ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಫ್ಎಐಎಂಎ ಹೇಳಿದೆ.</p>.<p>ಘಟನೆ ಕುರಿತ ವಿವರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ಆರೋಗ್ಯ ಸಚಿವಾಲಯದ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುವ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದೆ.</p>.<p>ತನಿಖೆ ಪಾರದರ್ಶಕವಾಗಿ, ಬಹುಶಿಸ್ತೀಯ ನೆಲೆಯಲ್ಲಿ ನಡೆಯಬೇಕು. ಇದಕ್ಕಾಗಿ ಸಮಿತಿಯು ವೈದ್ಯಕೀಯ ಮತ್ತು ಔಷಧ ತಜ್ಞರು, ಬೇರೆ ಬೇರೆ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂದು ಅದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖಾ ಸಮಿತಿ ರಚಿಸುವಂತೆ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (ಎಫ್ಎಐಎಂಎ) ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಬುಧವಾರ ಪತ್ರ ಬರೆದು ಒತ್ತಾಯಿಸಿದೆ.</p>.<p>ಘಟನೆಯು ದೇಶದಲ್ಲಿನ ಮಕ್ಕಳ ಔಷಧ ಉತ್ಪಾದನೆ ಮತ್ತು ವಿತರಣೆ ಘಟಕಗಳ ಮೇಲ್ವಿಚಾರಣಾ ವ್ಯವಸ್ಥೆ, ಅವುಗಳ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಎಫ್ಎಐಎಂಎ ಹೇಳಿದೆ.</p>.<p>ಘಟನೆ ಕುರಿತ ವಿವರವಾದ ಮತ್ತು ನಿಷ್ಪಕ್ಷಪಾತ ತನಿಖೆಗೆ ಆರೋಗ್ಯ ಸಚಿವಾಲಯದ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುವ ತನಿಖಾ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದೆ.</p>.<p>ತನಿಖೆ ಪಾರದರ್ಶಕವಾಗಿ, ಬಹುಶಿಸ್ತೀಯ ನೆಲೆಯಲ್ಲಿ ನಡೆಯಬೇಕು. ಇದಕ್ಕಾಗಿ ಸಮಿತಿಯು ವೈದ್ಯಕೀಯ ಮತ್ತು ಔಷಧ ತಜ್ಞರು, ಬೇರೆ ಬೇರೆ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂದು ಅದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>