<p><strong>ನವದೆಹಲಿ:</strong> ಆಯುರ್ವೇದ ಸ್ನಾತಕೋತ್ತರ ವೈದ್ಯರಿಗೆ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿರುವ ಪ್ರತಿಭಟನೆಗೆ ಏಮ್ಸ್ ವೈದ್ಯರು ಬೆಂಬಲ ಸೂಚಿಸಿದ್ದಾರೆ.</p>.<p>ಕಪ್ಪು ಪಟ್ಟಿ ಧರಿಸುವ ಮೂಲಕ ಏಮ್ಸ್ ಸೇರಿದಂತೆ ದೆಹಲಿಯ ಹಲವು ಆಸ್ಪತ್ರೆಯ ವೈದ್ಯರು ಬೆಂಬಲ ಸೂಚಿಸಿದ್ದಾರೆ.</p>.<p>ಜತೆಗೆ, ಸರ್ಕಾರಿ ಆಸ್ಪತ್ರೆಗಳಾದ ಎಲ್ಎನ್ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಡಿಡಿಯು, ಜಿಟಿಬಿ, ಬಿಎಸ್ಎ ಆಸ್ಪತ್ರೆ, ಸಂಜಯ್ ಗಾಂಧಿ ಮೆಮೊರಿಯಲ್ ಆಸ್ಪತ್ರೆ , ಹಿಂದೂ ರಾವ್ ಆಸ್ಪತ್ರೆಯ ವೈದ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.</p>.<p>ಸರ್ಕಾರದ ನಿರ್ಧಾರದಿಂದ ಸಾರ್ವಜನಿಕರ ಸುರಕ್ಷತೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಈ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ವೈದ್ಯರು ಕೋರಿದ್ದಾರೆ.</p>.<p>ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಿರೋಧಿಸಿ ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅನಿವಾರ್ಯವಲ್ಲದ ಮತ್ತು ಕೋವಿಡ್ ರಹಿತ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಯುರ್ವೇದ ಸ್ನಾತಕೋತ್ತರ ವೈದ್ಯರಿಗೆ ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿರುವ ಪ್ರತಿಭಟನೆಗೆ ಏಮ್ಸ್ ವೈದ್ಯರು ಬೆಂಬಲ ಸೂಚಿಸಿದ್ದಾರೆ.</p>.<p>ಕಪ್ಪು ಪಟ್ಟಿ ಧರಿಸುವ ಮೂಲಕ ಏಮ್ಸ್ ಸೇರಿದಂತೆ ದೆಹಲಿಯ ಹಲವು ಆಸ್ಪತ್ರೆಯ ವೈದ್ಯರು ಬೆಂಬಲ ಸೂಚಿಸಿದ್ದಾರೆ.</p>.<p>ಜತೆಗೆ, ಸರ್ಕಾರಿ ಆಸ್ಪತ್ರೆಗಳಾದ ಎಲ್ಎನ್ಜೆಪಿ ಆಸ್ಪತ್ರೆ, ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಡಿಡಿಯು, ಜಿಟಿಬಿ, ಬಿಎಸ್ಎ ಆಸ್ಪತ್ರೆ, ಸಂಜಯ್ ಗಾಂಧಿ ಮೆಮೊರಿಯಲ್ ಆಸ್ಪತ್ರೆ , ಹಿಂದೂ ರಾವ್ ಆಸ್ಪತ್ರೆಯ ವೈದ್ಯರು ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.</p>.<p>ಸರ್ಕಾರದ ನಿರ್ಧಾರದಿಂದ ಸಾರ್ವಜನಿಕರ ಸುರಕ್ಷತೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಈ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ವೈದ್ಯರು ಕೋರಿದ್ದಾರೆ.</p>.<p>ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ವಿರೋಧಿಸಿ ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಅನಿವಾರ್ಯವಲ್ಲದ ಮತ್ತು ಕೋವಿಡ್ ರಹಿತ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು (ಐಎಂಎ) ಕರೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>