<p><strong>ಕೋಲ್ಕತ್ತ</strong>: ಬ್ಯಾರಿಕೇಡ್ ಅಳವಡಿಸಿದ್ದ ಪ್ರದೇಶಕ್ಕೆ ದ್ವಿಚಕ್ರ ವಾಹನ ನುಗ್ಗಿಸಿ, ರವೀಂದ್ರ ಭಾರತಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರನ್ನು ಗಾಯಗೊಳಿಸಿದ ಆರೋಪದ ಅಡಿಯಲ್ಲಿ ಕೋಲ್ಕತ್ತ ಪೊಲೀಸರ ಜೊತೆ ಕೆಲಸ ಮಾಡುವ ‘ನಾಗರಿಕ ಸ್ವಯಂಸೇವಕ’ನೊಬ್ಬನನ್ನು ಶನಿವಾರ ಬಂಧಿಸಲಾಗದೆ.</p>.<p>ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಆಕೆಯ ಹತ್ಯೆಯನ್ನು ಖಂಡಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬೈಕ್ ಸವಾರ ಅಲ್ಲಿಗೆ ನುಗ್ಗಿದ್ದರಿಂದ ಸುಮಾರು 5 ತಾಸು ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ನಸುಕಿನ 2 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ನಾಗರಿಕ ಸ್ವಯಂಸೇವಕನಿಗೆ ತಪ್ಪಿಸಿಕೊಳ್ಳಲು ಸಂಚಾರ ಪೊಲೀಸ್ ಸಿಬ್ಬಂದಿಯೊಬ್ಬರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>‘ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ, ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಗಿದೆ. ಸ್ವಯಂಸೇವಕನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಬ್ಯಾರಿಕೇಡ್ ಅಳವಡಿಸಿದ್ದ ಪ್ರದೇಶಕ್ಕೆ ದ್ವಿಚಕ್ರ ವಾಹನ ನುಗ್ಗಿಸಿ, ರವೀಂದ್ರ ಭಾರತಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರನ್ನು ಗಾಯಗೊಳಿಸಿದ ಆರೋಪದ ಅಡಿಯಲ್ಲಿ ಕೋಲ್ಕತ್ತ ಪೊಲೀಸರ ಜೊತೆ ಕೆಲಸ ಮಾಡುವ ‘ನಾಗರಿಕ ಸ್ವಯಂಸೇವಕ’ನೊಬ್ಬನನ್ನು ಶನಿವಾರ ಬಂಧಿಸಲಾಗದೆ.</p>.<p>ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಆಕೆಯ ಹತ್ಯೆಯನ್ನು ಖಂಡಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬೈಕ್ ಸವಾರ ಅಲ್ಲಿಗೆ ನುಗ್ಗಿದ್ದರಿಂದ ಸುಮಾರು 5 ತಾಸು ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ನಸುಕಿನ 2 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ನಾಗರಿಕ ಸ್ವಯಂಸೇವಕನಿಗೆ ತಪ್ಪಿಸಿಕೊಳ್ಳಲು ಸಂಚಾರ ಪೊಲೀಸ್ ಸಿಬ್ಬಂದಿಯೊಬ್ಬರು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>‘ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ, ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಗಿದೆ. ಸ್ವಯಂಸೇವಕನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>