<p><strong>ಕೋಲ್ಕತ್ತ:</strong> ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಬಂಗಾಳಿ ಚಿತ್ರರಂಗದ ಹಲವು ಪ್ರಮುಖರು ಹಾಗೂ ವಿವಿಧ ಸಂಘಟನೆಗಳು ಸೋಮವಾರ ಮುಂಜಾನೆ 4 ಗಂಟೆಯವರೆಗೆ ಅಹೋರಾತ್ರಿ ಧರಣಿ ನಡೆಸಿದರು.</p>.<p>ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರರು ಆಗ್ರಹಿಸಿದರು.</p>.<p>ಘಟನೆ ಖಂಡಿಸಿ ಭಾನುವಾರ ನಗರದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ, ರ್ಯಾಲಿಗಳನ್ನು ನಡೆಸಿದವು. ಒಂದೆಡೆ ‘ಮಹಾಮಿಚಿಲ್’ ಪ್ರತಿಭಟನೆ ನಡೆದರೆ, ರಾಮಕೃಷ್ಣ ಮಿಷನ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಮತ್ತೊಂದೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಕರಣದ ತ್ವರಿತ ತನಿಖೆ ಹಾಗೂ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಸೋಮವಾರ ಬೆಳಿಗ್ಗೆ ತನಕ ಅಲ್ಲಿಯೇ ಇರುವುದಾಗಿ ಪ್ರತಿಭಟನಕಾರರರು ಪ್ರತಿಜ್ಞೆ ಮಾಡಿದ್ದರು.</p>.<p>ನಮ್ಮ ಬೇಡಿಕೆಯನ್ನು ಪರಿಹರಿಸಲು ನಾವು ಆಡಳಿತಕ್ಕೆ 4 ಗಂಟೆಗಳ ಗಡುವು ನೀಡಿದ್ದೇವೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗಳಿಗೆ ಪ್ರತ್ಯೇಕ ಮೇಲ್ಗಳನ್ನು ಕಳುಹಿಸಿದ್ದೇವೆ. ಆದರೆ ರಾಜ್ಯದ ಒಬ್ಬ ಪ್ರತಿನಿಧಿಯೂ ಪ್ರತಿಕ್ರಿಯಿಸಿಲ್ಲ. ಮತ್ತು ಸ್ಥಳಕ್ಕೆ ಬಂದಿಲ್ಲ ಎಂದು ನಿರ್ದೇಶಕ ಬಿರ್ಸಾ ದಾಸ್ಗುಪ್ತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ: ಪ್ರತಿಭಟನೆಗೆ ಚಿತ್ರರಂಗದ ಸಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಬಂಗಾಳಿ ಚಿತ್ರರಂಗದ ಹಲವು ಪ್ರಮುಖರು ಹಾಗೂ ವಿವಿಧ ಸಂಘಟನೆಗಳು ಸೋಮವಾರ ಮುಂಜಾನೆ 4 ಗಂಟೆಯವರೆಗೆ ಅಹೋರಾತ್ರಿ ಧರಣಿ ನಡೆಸಿದರು.</p>.<p>ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರರು ಆಗ್ರಹಿಸಿದರು.</p>.<p>ಘಟನೆ ಖಂಡಿಸಿ ಭಾನುವಾರ ನಗರದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ, ರ್ಯಾಲಿಗಳನ್ನು ನಡೆಸಿದವು. ಒಂದೆಡೆ ‘ಮಹಾಮಿಚಿಲ್’ ಪ್ರತಿಭಟನೆ ನಡೆದರೆ, ರಾಮಕೃಷ್ಣ ಮಿಷನ್ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಮತ್ತೊಂದೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಕರಣದ ತ್ವರಿತ ತನಿಖೆ ಹಾಗೂ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಸೋಮವಾರ ಬೆಳಿಗ್ಗೆ ತನಕ ಅಲ್ಲಿಯೇ ಇರುವುದಾಗಿ ಪ್ರತಿಭಟನಕಾರರರು ಪ್ರತಿಜ್ಞೆ ಮಾಡಿದ್ದರು.</p>.<p>ನಮ್ಮ ಬೇಡಿಕೆಯನ್ನು ಪರಿಹರಿಸಲು ನಾವು ಆಡಳಿತಕ್ಕೆ 4 ಗಂಟೆಗಳ ಗಡುವು ನೀಡಿದ್ದೇವೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಗಳಿಗೆ ಪ್ರತ್ಯೇಕ ಮೇಲ್ಗಳನ್ನು ಕಳುಹಿಸಿದ್ದೇವೆ. ಆದರೆ ರಾಜ್ಯದ ಒಬ್ಬ ಪ್ರತಿನಿಧಿಯೂ ಪ್ರತಿಕ್ರಿಯಿಸಿಲ್ಲ. ಮತ್ತು ಸ್ಥಳಕ್ಕೆ ಬಂದಿಲ್ಲ ಎಂದು ನಿರ್ದೇಶಕ ಬಿರ್ಸಾ ದಾಸ್ಗುಪ್ತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ: ಪ್ರತಿಭಟನೆಗೆ ಚಿತ್ರರಂಗದ ಸಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>