<p><strong>ನವದೆಹಲಿ:</strong> ಸಂವಿಧಾನದ ಪೀಠಿಕೆ ಕುರಿತಂತೆ ಆರ್ಎಸ್ಎಸ್ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ನೀಡಿದ ಹೇಳಿಕೆಯು ವಿವಾದಕ್ಕೀಡಾಗಿರುವ ನಡುವೆಯೇ, ‘ಭಾರತದ ಸಂವಿಧಾನವನ್ನು ಆರ್ಎಸ್ಎಸ್ ನಿಜವಾಗಿಯೂ ಒಪ್ಪಿಕೊಳ್ಳುತ್ತದೆಯೇ’ ಎಂದು ಸಿಪಿಐ ಭಾನುವಾರ ಪ್ರಶ್ನಿಸಿದೆ.</p>.<p>ಸಿಪಿಐ ಸಂಸದ ಸಂತೋಷ ಕುಮಾರ್ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ ಈ ಪ್ರಶ್ನೆ ಕೇಳಿದ್ದಾರೆ.</p>.<p>‘ಧ್ರುವೀಕರಣ ತಡೆಯುವುದಕ್ಕಾಗಿ ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ, ಚರ್ಚೆ ಹುಟ್ಟು ಹಾಕುವುದನ್ನು ಆರ್ಎಸ್ಎಸ್ ನಿಲ್ಲಿಸುವುದು ಇಂದಿನ ತುರ್ತು. ಸಂವಿಧಾನದಲ್ಲಿ ‘ಜಾತ್ಯತೀತ’ ಮತ್ತು ‘ಸಮಾಜವಾದ’ ಪದಗಳನ್ನು ಯಾವುದೇ ವಿವೇಚನೆ ಇಲ್ಲದೇ ಸೇರಿಸಲಾಗಿಲ್ಲ. ಅವು ಮೂಲಭೂತ ಆದರ್ಶಗಳೇ’ ಆಗಿವೆ ಎಂದು ಅವರು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.</p>.<p>‘ವೈವಿಧ್ಯಗಳಿಂದ ಕೂಡಿದ ಭಾರತದಂತಹ ದೇಶದಲ್ಲಿ ಜಾತ್ಯತೀತವು ವಿವಿಧತೆಯಲ್ಲಿ ಏಕತೆಯನ್ನು ಖಾತ್ರಿಪಡಿಸುತ್ತದೆ. ಸಮಾಜವಾದವು ದೇಶದ ಪ್ರಜೆಗಳಿಗೆ ನ್ಯಾಯ ಮತ್ತು ಘನತೆಯನ್ನು ತಂದುಕೊಡುತ್ತದೆ’ ಎಂದೂ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂವಿಧಾನದ ಪೀಠಿಕೆ ಕುರಿತಂತೆ ಆರ್ಎಸ್ಎಸ್ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ನೀಡಿದ ಹೇಳಿಕೆಯು ವಿವಾದಕ್ಕೀಡಾಗಿರುವ ನಡುವೆಯೇ, ‘ಭಾರತದ ಸಂವಿಧಾನವನ್ನು ಆರ್ಎಸ್ಎಸ್ ನಿಜವಾಗಿಯೂ ಒಪ್ಪಿಕೊಳ್ಳುತ್ತದೆಯೇ’ ಎಂದು ಸಿಪಿಐ ಭಾನುವಾರ ಪ್ರಶ್ನಿಸಿದೆ.</p>.<p>ಸಿಪಿಐ ಸಂಸದ ಸಂತೋಷ ಕುಮಾರ್ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ ಈ ಪ್ರಶ್ನೆ ಕೇಳಿದ್ದಾರೆ.</p>.<p>‘ಧ್ರುವೀಕರಣ ತಡೆಯುವುದಕ್ಕಾಗಿ ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ, ಚರ್ಚೆ ಹುಟ್ಟು ಹಾಕುವುದನ್ನು ಆರ್ಎಸ್ಎಸ್ ನಿಲ್ಲಿಸುವುದು ಇಂದಿನ ತುರ್ತು. ಸಂವಿಧಾನದಲ್ಲಿ ‘ಜಾತ್ಯತೀತ’ ಮತ್ತು ‘ಸಮಾಜವಾದ’ ಪದಗಳನ್ನು ಯಾವುದೇ ವಿವೇಚನೆ ಇಲ್ಲದೇ ಸೇರಿಸಲಾಗಿಲ್ಲ. ಅವು ಮೂಲಭೂತ ಆದರ್ಶಗಳೇ’ ಆಗಿವೆ ಎಂದು ಅವರು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.</p>.<p>‘ವೈವಿಧ್ಯಗಳಿಂದ ಕೂಡಿದ ಭಾರತದಂತಹ ದೇಶದಲ್ಲಿ ಜಾತ್ಯತೀತವು ವಿವಿಧತೆಯಲ್ಲಿ ಏಕತೆಯನ್ನು ಖಾತ್ರಿಪಡಿಸುತ್ತದೆ. ಸಮಾಜವಾದವು ದೇಶದ ಪ್ರಜೆಗಳಿಗೆ ನ್ಯಾಯ ಮತ್ತು ಘನತೆಯನ್ನು ತಂದುಕೊಡುತ್ತದೆ’ ಎಂದೂ ಅವರು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>