<p><strong>ಥಾಣೆ:</strong> ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪೂರ್ವ ಡೊಂಬಿವಿಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶಿಥಿಲಗೊಂಡಿದ್ದ ಈ ಕಟ್ಟಡವನ್ನು ‘ಅಪಾಯಕಾರಿ’ ಎಂದು ನಗರಸಭೆ ಅಧಿಕಾರಿಗಳು ಈ ಹಿಂದೆಯೇ ಘೋಷಿಸಿದ್ದರು.</p><p>ಕಲ್ಯಾಣ ಡೊಂಬಿವಿಲಿ ನಗರಸಭೆ ವ್ಯಾಪ್ತಿಯ ಅಯರೆ ಪ್ರದೇಶದಲ್ಲಿರುವ ‘ಆದಿನಾರಾಯಣ್ ಭುವನ್’ ಎನ್ನುವ ಈ ಕಟ್ಟಡದಲ್ಲಿ 44 ಬಾಡಿಗೆದಾರು ಇದ್ದರು. ಗುರುವಾರ ಕಟ್ಟಡದ ಕೆಲ ಭಾಗಗಳು ಕುಸಿದು ಬಿದ್ದಿದ್ದರಿಂದ ಅವರನ್ನು ಸ್ಥಳಾಂತರಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಮಿಜೋರಾಂ: ರೈಲ್ವೆ ಸೇತುವೆ ನಿರ್ಮಾಣದ ವೇಳೆ ಕ್ರೇನ್ ಕುಸಿದು 17 ಕಾರ್ಮಿಕರು ಸಾವು.<p>ಶುಕ್ರವಾರ ಸಂಜೆ 5.40ರ ವೇಳೆಗೆ ಕಟ್ಟಡ ಕುಸಿದು ಬಿದ್ದಿದೆ. ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ರಾತ್ರಿ ಸುಮಾರು 8 ಗಂಟೆಯ ವೇಳೆ ಸುನಿಲ್ ಬ್ರಿಜಾ ಲೊಡಯಾ (55) ಎಂಬವರ ಮೃತದೇಹವನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ.</p><p>ರಾತ್ರಿ 9.15ರ ವೇಳೆಗೆ 54 ವರ್ಷದ ದೀಪ್ತಿ ಸುನಿಲ್ ಲೊಡಯಾ ಎಂಬವರನ್ನು ಅವಶೇಷಗಳ ಅಡಿಯಿಂದ ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ 70 ವರ್ಷದ ಅರವಿಂದ ಭಟ್ಕರ್ ಎಂಬವರ ಶವವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಅವಶೇಷಗಳ ಅಡಿಯಲ್ಲಿ ಇನ್ನೂ ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. </p>.ದೆಹಲಿ: ಬಂದೂಕು ತೋರಿಸಿ ₹1 ಕೋಟಿ ನಗದು ದರೋಡೆ .<p>ಇಬ್ಬರು ಆನಾರೋಗ್ಯ ಪೀಡಿತ ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಉಳಿದವರನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ ಎಂದು ಕಲ್ಯಾಣ ಡೊಂಬಿವಿಲಿ ನಗರಸಭೆಯ ಮುಖ್ಯಸ್ಥ ಬಹುಸಾಹೇಬ್ ಡಾಂಗೆ ಮಾಹಿತಿ ನೀಡಿದ್ದಾರೆ.</p><p>50 ವರ್ಷ ಹಳೆಯ ಕಟ್ಟಡ ಇದಾಗಿದ್ದು, ಅಪಾಯಕಾರಿ ಎಂದು ಘೋಷಣೆ ಮಾಡಿ ಬಾಡಿಗೆದಾರರಿಗೆ ನೋಟಿಸ್ ನೀಡಲಾಗಿತ್ತು. ಕೆಲವರು ಕಟ್ಟಡ ತೊರೆದಿದ್ದರು. ಇನ್ನು ಕೆಲವರು ಅಲ್ಲಿಯೇ ಇದ್ದರು ಎಂದು ಡಾಂಗೆ ಹೇಳಿದ್ದಾರೆ.</p><p>ಗುರುವಾರ ಸಂಜೆ ಬಾಡಿಗೆದಾರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿತ್ತು. ಈ ನಡುವೆ ಕಟ್ಟಡ ಕುಸಿದೆ ಎಂದು ಅವರು ತಿಳಿಸಿದ್ದಾರೆ.</p><p>ಇದೊಂದು ಅನಧಿಕೃತ ಕಟ್ಟಡವಾಗಿದ್ದು, ಅಪಾಯಕಾರಿ ಎಂದು ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು ಎಂದು ಕಲ್ಯಾಣ ಡೊಂಬಿವಿಲಿ ನಗರಸಭೆಯ ಇನ್ನೋರ್ವ ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಥಾಣೆ:</strong> ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪೂರ್ವ ಡೊಂಬಿವಿಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶಿಥಿಲಗೊಂಡಿದ್ದ ಈ ಕಟ್ಟಡವನ್ನು ‘ಅಪಾಯಕಾರಿ’ ಎಂದು ನಗರಸಭೆ ಅಧಿಕಾರಿಗಳು ಈ ಹಿಂದೆಯೇ ಘೋಷಿಸಿದ್ದರು.</p><p>ಕಲ್ಯಾಣ ಡೊಂಬಿವಿಲಿ ನಗರಸಭೆ ವ್ಯಾಪ್ತಿಯ ಅಯರೆ ಪ್ರದೇಶದಲ್ಲಿರುವ ‘ಆದಿನಾರಾಯಣ್ ಭುವನ್’ ಎನ್ನುವ ಈ ಕಟ್ಟಡದಲ್ಲಿ 44 ಬಾಡಿಗೆದಾರು ಇದ್ದರು. ಗುರುವಾರ ಕಟ್ಟಡದ ಕೆಲ ಭಾಗಗಳು ಕುಸಿದು ಬಿದ್ದಿದ್ದರಿಂದ ಅವರನ್ನು ಸ್ಥಳಾಂತರಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಮಿಜೋರಾಂ: ರೈಲ್ವೆ ಸೇತುವೆ ನಿರ್ಮಾಣದ ವೇಳೆ ಕ್ರೇನ್ ಕುಸಿದು 17 ಕಾರ್ಮಿಕರು ಸಾವು.<p>ಶುಕ್ರವಾರ ಸಂಜೆ 5.40ರ ವೇಳೆಗೆ ಕಟ್ಟಡ ಕುಸಿದು ಬಿದ್ದಿದೆ. ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ರಾತ್ರಿ ಸುಮಾರು 8 ಗಂಟೆಯ ವೇಳೆ ಸುನಿಲ್ ಬ್ರಿಜಾ ಲೊಡಯಾ (55) ಎಂಬವರ ಮೃತದೇಹವನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ.</p><p>ರಾತ್ರಿ 9.15ರ ವೇಳೆಗೆ 54 ವರ್ಷದ ದೀಪ್ತಿ ಸುನಿಲ್ ಲೊಡಯಾ ಎಂಬವರನ್ನು ಅವಶೇಷಗಳ ಅಡಿಯಿಂದ ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ 70 ವರ್ಷದ ಅರವಿಂದ ಭಟ್ಕರ್ ಎಂಬವರ ಶವವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಅವಶೇಷಗಳ ಅಡಿಯಲ್ಲಿ ಇನ್ನೂ ಹಲವು ಮಂದಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. </p>.ದೆಹಲಿ: ಬಂದೂಕು ತೋರಿಸಿ ₹1 ಕೋಟಿ ನಗದು ದರೋಡೆ .<p>ಇಬ್ಬರು ಆನಾರೋಗ್ಯ ಪೀಡಿತ ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಉಳಿದವರನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ ಎಂದು ಕಲ್ಯಾಣ ಡೊಂಬಿವಿಲಿ ನಗರಸಭೆಯ ಮುಖ್ಯಸ್ಥ ಬಹುಸಾಹೇಬ್ ಡಾಂಗೆ ಮಾಹಿತಿ ನೀಡಿದ್ದಾರೆ.</p><p>50 ವರ್ಷ ಹಳೆಯ ಕಟ್ಟಡ ಇದಾಗಿದ್ದು, ಅಪಾಯಕಾರಿ ಎಂದು ಘೋಷಣೆ ಮಾಡಿ ಬಾಡಿಗೆದಾರರಿಗೆ ನೋಟಿಸ್ ನೀಡಲಾಗಿತ್ತು. ಕೆಲವರು ಕಟ್ಟಡ ತೊರೆದಿದ್ದರು. ಇನ್ನು ಕೆಲವರು ಅಲ್ಲಿಯೇ ಇದ್ದರು ಎಂದು ಡಾಂಗೆ ಹೇಳಿದ್ದಾರೆ.</p><p>ಗುರುವಾರ ಸಂಜೆ ಬಾಡಿಗೆದಾರರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿತ್ತು. ಈ ನಡುವೆ ಕಟ್ಟಡ ಕುಸಿದೆ ಎಂದು ಅವರು ತಿಳಿಸಿದ್ದಾರೆ.</p><p>ಇದೊಂದು ಅನಧಿಕೃತ ಕಟ್ಟಡವಾಗಿದ್ದು, ಅಪಾಯಕಾರಿ ಎಂದು ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು ಎಂದು ಕಲ್ಯಾಣ ಡೊಂಬಿವಿಲಿ ನಗರಸಭೆಯ ಇನ್ನೋರ್ವ ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>