<p><strong>ಚೆನ್ನೈ:</strong> ‘ಬಿಜೆಪಿಯ ಉದ್ದೇಶಿತ ‘ವೇಲ್’ ಅಥವಾ ‘ವೆಟ್ರಿವೇಲ್’ ಯಾತ್ರೆಗೆ ಅನುಮತಿ ನೀಡಬಾರದು’ ಎಂದು ವಿಡುದಲೈ ಚಿರುಥೈಗಳ್ ಪಕ್ಷದ (ವಿಸಿಕೆ) ಸಂಸ್ಥಾಪಕ ದೋಳ್ತಿರುಮಾವಳವನ್ ಅವರು ತಮಿಳುನಾಡಿನ ಡಿಜಿಪಿ ಜೆ.ಕೆ.ತ್ರಿಪಾಠಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಮಿಳುನಾಡಿನಾದ್ಯಂತ ‘ವೇಲ್’ ಯಾತ್ರೆ ನಡೆಸುವುದಾಗಿ ಬಿಜೆಪಿ ಈಗಾಗಲೇ ಘೋಷಿಸಿದೆ. ಉತ್ತರ ತಮಿಳುನಾಡಿನ ತಿರುಟ್ಟಾನಿಯಲ್ಲಿ ಆರಂಭವಾಗಲಿರುವ ರ್ಯಾಲಿಯು ತಿರುಚೆಂಡೂರಿನಲ್ಲಿ ಕೊನೆಗೊಳ್ಳಲಿದೆ.</p>.<p>‘ರಾಜ್ಯದಲ್ಲಿ ಕೋಮು ಸಂಘರ್ಷವನ್ನು ಹುಟ್ಟಿಹಾಕುವುದು ಹಾಗೂ ಹಿಂಸೆಗೆ ಪ್ರಚೋದನೆ ನೀಡುವ ಉದ್ದೇಶದಿಂದಲೇ ಬಿಜೆಪಿಯು ಈ ಯಾತ್ರೆ ಹಮ್ಮಿಕೊಂಡಿದೆ. ಹೀಗಾಗಿ ಇದಕ್ಕೆ ಅನುಮತಿ ನೀಡಬಾರದೆಂದು ಡಿಜಿಪಿ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ’ ಎಂದುತಿರುಮಾವಳವನ್ ತಿಳಿಸಿದ್ದಾರೆ.</p>.<p>‘ಬಿಜೆಪಿಯು ಉದ್ದೇಶಿತ ಯಾತ್ರೆಯ ಪೋಸ್ಟರ್ಗಳಲ್ಲಿ ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ಅವರ ಭಾವಚಿತ್ರಗಳನ್ನು ಬಳಸಿರುವುದು ನಾಚಿಕೆಯ ವಿಷಯ’ ಎಂದೂ ಕಿಡಿಕಾರಿದ್ದಾರೆ.</p>.<p>‘ಬಿಜೆಪಿ ಮುಖಂಡ ಎಚ್.ರಾಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಒತ್ತಾಯಿಸಿದ್ದೇನೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ಬಿಜೆಪಿಯ ಉದ್ದೇಶಿತ ‘ವೇಲ್’ ಅಥವಾ ‘ವೆಟ್ರಿವೇಲ್’ ಯಾತ್ರೆಗೆ ಅನುಮತಿ ನೀಡಬಾರದು’ ಎಂದು ವಿಡುದಲೈ ಚಿರುಥೈಗಳ್ ಪಕ್ಷದ (ವಿಸಿಕೆ) ಸಂಸ್ಥಾಪಕ ದೋಳ್ತಿರುಮಾವಳವನ್ ಅವರು ತಮಿಳುನಾಡಿನ ಡಿಜಿಪಿ ಜೆ.ಕೆ.ತ್ರಿಪಾಠಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ನವೆಂಬರ್ 6 ರಿಂದ ಡಿಸೆಂಬರ್ 6 ರವರೆಗೆ ತಮಿಳುನಾಡಿನಾದ್ಯಂತ ‘ವೇಲ್’ ಯಾತ್ರೆ ನಡೆಸುವುದಾಗಿ ಬಿಜೆಪಿ ಈಗಾಗಲೇ ಘೋಷಿಸಿದೆ. ಉತ್ತರ ತಮಿಳುನಾಡಿನ ತಿರುಟ್ಟಾನಿಯಲ್ಲಿ ಆರಂಭವಾಗಲಿರುವ ರ್ಯಾಲಿಯು ತಿರುಚೆಂಡೂರಿನಲ್ಲಿ ಕೊನೆಗೊಳ್ಳಲಿದೆ.</p>.<p>‘ರಾಜ್ಯದಲ್ಲಿ ಕೋಮು ಸಂಘರ್ಷವನ್ನು ಹುಟ್ಟಿಹಾಕುವುದು ಹಾಗೂ ಹಿಂಸೆಗೆ ಪ್ರಚೋದನೆ ನೀಡುವ ಉದ್ದೇಶದಿಂದಲೇ ಬಿಜೆಪಿಯು ಈ ಯಾತ್ರೆ ಹಮ್ಮಿಕೊಂಡಿದೆ. ಹೀಗಾಗಿ ಇದಕ್ಕೆ ಅನುಮತಿ ನೀಡಬಾರದೆಂದು ಡಿಜಿಪಿ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ’ ಎಂದುತಿರುಮಾವಳವನ್ ತಿಳಿಸಿದ್ದಾರೆ.</p>.<p>‘ಬಿಜೆಪಿಯು ಉದ್ದೇಶಿತ ಯಾತ್ರೆಯ ಪೋಸ್ಟರ್ಗಳಲ್ಲಿ ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ಅವರ ಭಾವಚಿತ್ರಗಳನ್ನು ಬಳಸಿರುವುದು ನಾಚಿಕೆಯ ವಿಷಯ’ ಎಂದೂ ಕಿಡಿಕಾರಿದ್ದಾರೆ.</p>.<p>‘ಬಿಜೆಪಿ ಮುಖಂಡ ಎಚ್.ರಾಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಒತ್ತಾಯಿಸಿದ್ದೇನೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>