ಅರ್ಜಿದಾರ ಫಾಯಿಸ್ ಅನ್ವರ್ ಖುರೇಶಿ ಅವರು ಇದೇ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು. ಸಾಂಸ್ಕೃತಿಕ ಸೌಹಾರ್ದ, ಒಗ್ಗಟ್ಟು ಮತ್ತು ಶಾಂತಿ ಸ್ಥಾಪಿಸುವ ಪ್ರಯತ್ನಕ್ಕೆ ಹಿನ್ನೆಡೆ ಉಂಟುಮಾಡುವಂಥ ಪ್ರಯತ್ನ ಇದಾಗಿರುವ ಕಾರಣ ಈ ಅರ್ಜಿಗೆ ಯಾವುದೇ ಮಹತ್ವ ಇಲ್ಲ ಎಂದು ಹೈಕೋರ್ಟ್ ಹೇಳಿತ್ತು.