<p><strong>ಡೆಹ್ರಾಡೂನ್</strong>: ವಿಷ್ಣುವಿನ 11ನೇ ‘ಅವತಾರ’ ಎಂಬಂತೆ ಬಿಂಬಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. </p>.<p>ಇಲ್ಲಿನ ಶಾಲೆಯೊಂದರಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಧರ್ಮದ ಹೆಸರಿನಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಗೆ ಬಿಡಬಾರದು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು’ ಎಂದರು.</p>.<p>ಯಾರೇ ಟಿ.ವಿ ಹಾಕಿದರೂ, ಮೋದಿ ಅವರೇ ಕಾಣಿಸಿಕೊಳ್ಳುತ್ತಾರೆ. ಮೋದಿ ಅವರು ವಿಷ್ಣುವಿನ 11ನೇ ಅವತಾರ ಆಗಲು ಯತ್ನಿಸುತ್ತಿದ್ದಾರೆ. ದೇಶಕ್ಕಾಗಿ ಕಾಂಗ್ರೆಸ್ ನಾಯಕರು ಪ್ರಾಣ ಅರ್ಪಿಸಿದ್ದಾರೆ. ಆದರೆ, ಬಿಜೆಪಿ ಇಂಥ ಯಾವುದೇ ತ್ಯಾಗ ಮಾಡಿಲ್ಲ ಎಂದು ಟೀಕಿಸಿದರು. </p>.<p>‘ದೇಶ ಒಗ್ಗೂಡಿಸಲು ಇಂದಿರಾಗಾಂಧಿ ಮತ್ತು ರಾಜೀವ್ಗಾಂಧಿ ತಮ್ಮ ಪ್ರಾಣವನ್ನೇ ಬಲಿಕೊಟ್ಟರು. ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಹಲವು ವರ್ಷಗಳ ಕಾಲ ಸೆರೆವಾಸ ಅನುಭವಿಸಿದರು. ಬಿಜೆಪಿ ಏನು ಮಾಡಿದೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ವಿಷ್ಣುವಿನ 11ನೇ ‘ಅವತಾರ’ ಎಂಬಂತೆ ಬಿಂಬಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. </p>.<p>ಇಲ್ಲಿನ ಶಾಲೆಯೊಂದರಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಧರ್ಮದ ಹೆಸರಿನಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಗೆ ಬಿಡಬಾರದು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು’ ಎಂದರು.</p>.<p>ಯಾರೇ ಟಿ.ವಿ ಹಾಕಿದರೂ, ಮೋದಿ ಅವರೇ ಕಾಣಿಸಿಕೊಳ್ಳುತ್ತಾರೆ. ಮೋದಿ ಅವರು ವಿಷ್ಣುವಿನ 11ನೇ ಅವತಾರ ಆಗಲು ಯತ್ನಿಸುತ್ತಿದ್ದಾರೆ. ದೇಶಕ್ಕಾಗಿ ಕಾಂಗ್ರೆಸ್ ನಾಯಕರು ಪ್ರಾಣ ಅರ್ಪಿಸಿದ್ದಾರೆ. ಆದರೆ, ಬಿಜೆಪಿ ಇಂಥ ಯಾವುದೇ ತ್ಯಾಗ ಮಾಡಿಲ್ಲ ಎಂದು ಟೀಕಿಸಿದರು. </p>.<p>‘ದೇಶ ಒಗ್ಗೂಡಿಸಲು ಇಂದಿರಾಗಾಂಧಿ ಮತ್ತು ರಾಜೀವ್ಗಾಂಧಿ ತಮ್ಮ ಪ್ರಾಣವನ್ನೇ ಬಲಿಕೊಟ್ಟರು. ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಹಲವು ವರ್ಷಗಳ ಕಾಲ ಸೆರೆವಾಸ ಅನುಭವಿಸಿದರು. ಬಿಜೆಪಿ ಏನು ಮಾಡಿದೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>