<p><strong>ಲಖನೌ</strong>: ಪ್ರಧಾನಿ ನರೇಂದ್ರ ಮೋದಿ ಅವರ ‘ಸ್ನೇಹಿತ’ ಹೇಳಿಕೆಗೆ ಮಂಗಳವಾರ ತಿರುಗೇಟು ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ನಮಗೆ ನಿಮ್ಮಂತಹ ಸ್ನೇಹಿತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.</p><p>ಕಳೆದ ವಾರ ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯ ಕುರಿತು ಮಾತನಾಡುತ್ತಾ ಪ್ರಧಾನಿ ಮೋದಿ ಅವರು, ‘ಅಖಿಲೇಶ್ ನನ್ನ ಸ್ನೇಹಿತ. ಕೆಲವೊಮ್ಮೆ ಅವರು ನನಗೆ ಸಹಾಯ ಮಾಡಿದ್ದಾರೆ’ ಎಂದು ಹೇಳಿದ್ದರು.</p><p>ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿಯವರ ಈ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, ‘ಹೌದು.. ಇದು ಬಹಳ ಮುಖ್ಯವಾದ ಪ್ರಶ್ನೆ. ಆದರೆ, ಸದನದಲ್ಲಿ ನಮ್ಮ ಮೈಕ್ ಆಫ್ ಮಾಡಲಾಗಿತ್ತು. ನಮಗೆ ಅಂತಹ ಸ್ನೇಹಿತರ ಅಗತ್ಯವಿಲ್ಲ ಎಂದು ನಾವು ಹೇಳಿದ್ದೇವೆ’ ಎಂದಿದ್ದಾರೆ.</p><p>ನಾವು ಅವರಿಗೆ ಯಾವ ರೀತಿಯ ಸಹಾಯವನ್ನು ನೀಡಿದ್ದೇವೆ ಎಂಬುದನ್ನು ಪ್ರಧಾನಿಯವರೇ ಸ್ಪಷ್ಟಪಡಿಸಬೇಕು ಎಂದೂ ಅಖಿಲೇಶ್ ಒತ್ತಾಯಿಸಿದ್ದಾರೆ.</p><p>‘ಯಾವ ಸಹಾಯ ಮಾಡಿದ್ದೇನೆ ಎಂದು ಪ್ರಧಾನಿಯವರನ್ನೇ ಕೇಳಿದರೆ ಅವರು ಉತ್ತಮ ನೀಡಬಲ್ಲರು. ನನ್ನ ಜ್ಞಾನಕ್ಕೆ ತಿಳಿದಿರುವಂತೆ ಅಂತಹ ಯಾವುದೇ ಘಟನೆ ನಡೆದಿಲ್ಲ’ ಎಂದು ಹೇಳಿದ್ದಾರೆ.</p><p>ಮುಂದುವರಿದು, ‘ಬಿಜೆಪಿ ಸೋಲುವ ಹಂತದಲ್ಲಿದ್ದಾಗ ಏನು ಬೇಕಾದರೂ ಮಾಡಬಹುದು. ಆದ್ದರಿಂದ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಬಿಜೆಪಿ ಈಗ ಸೋಲಿನತ್ತ ಸಾಗುತ್ತಿದೆ. ಒಮ್ಮೆ ಅಧಿಕಾರದಿಂದ ಹೊರಹೋದರೆ ಮತ್ತೆ ಎಂದಿಗೂ ಮರಳಲಾರದು. ಆ ಭಯವೇ ಅವರನ್ನು ಹೆಚ್ಚಾಗಿ ಕಾಡುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಪ್ರಧಾನಿ ನರೇಂದ್ರ ಮೋದಿ ಅವರ ‘ಸ್ನೇಹಿತ’ ಹೇಳಿಕೆಗೆ ಮಂಗಳವಾರ ತಿರುಗೇಟು ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ‘ನಮಗೆ ನಿಮ್ಮಂತಹ ಸ್ನೇಹಿತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.</p><p>ಕಳೆದ ವಾರ ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯ ಕುರಿತು ಮಾತನಾಡುತ್ತಾ ಪ್ರಧಾನಿ ಮೋದಿ ಅವರು, ‘ಅಖಿಲೇಶ್ ನನ್ನ ಸ್ನೇಹಿತ. ಕೆಲವೊಮ್ಮೆ ಅವರು ನನಗೆ ಸಹಾಯ ಮಾಡಿದ್ದಾರೆ’ ಎಂದು ಹೇಳಿದ್ದರು.</p><p>ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿಯವರ ಈ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಖಿಲೇಶ್, ‘ಹೌದು.. ಇದು ಬಹಳ ಮುಖ್ಯವಾದ ಪ್ರಶ್ನೆ. ಆದರೆ, ಸದನದಲ್ಲಿ ನಮ್ಮ ಮೈಕ್ ಆಫ್ ಮಾಡಲಾಗಿತ್ತು. ನಮಗೆ ಅಂತಹ ಸ್ನೇಹಿತರ ಅಗತ್ಯವಿಲ್ಲ ಎಂದು ನಾವು ಹೇಳಿದ್ದೇವೆ’ ಎಂದಿದ್ದಾರೆ.</p><p>ನಾವು ಅವರಿಗೆ ಯಾವ ರೀತಿಯ ಸಹಾಯವನ್ನು ನೀಡಿದ್ದೇವೆ ಎಂಬುದನ್ನು ಪ್ರಧಾನಿಯವರೇ ಸ್ಪಷ್ಟಪಡಿಸಬೇಕು ಎಂದೂ ಅಖಿಲೇಶ್ ಒತ್ತಾಯಿಸಿದ್ದಾರೆ.</p><p>‘ಯಾವ ಸಹಾಯ ಮಾಡಿದ್ದೇನೆ ಎಂದು ಪ್ರಧಾನಿಯವರನ್ನೇ ಕೇಳಿದರೆ ಅವರು ಉತ್ತಮ ನೀಡಬಲ್ಲರು. ನನ್ನ ಜ್ಞಾನಕ್ಕೆ ತಿಳಿದಿರುವಂತೆ ಅಂತಹ ಯಾವುದೇ ಘಟನೆ ನಡೆದಿಲ್ಲ’ ಎಂದು ಹೇಳಿದ್ದಾರೆ.</p><p>ಮುಂದುವರಿದು, ‘ಬಿಜೆಪಿ ಸೋಲುವ ಹಂತದಲ್ಲಿದ್ದಾಗ ಏನು ಬೇಕಾದರೂ ಮಾಡಬಹುದು. ಆದ್ದರಿಂದ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಬಿಜೆಪಿ ಈಗ ಸೋಲಿನತ್ತ ಸಾಗುತ್ತಿದೆ. ಒಮ್ಮೆ ಅಧಿಕಾರದಿಂದ ಹೊರಹೋದರೆ ಮತ್ತೆ ಎಂದಿಗೂ ಮರಳಲಾರದು. ಆ ಭಯವೇ ಅವರನ್ನು ಹೆಚ್ಚಾಗಿ ಕಾಡುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>